ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ;ಪೌಷ್ಠಿಕ ಅಕ್ಕಿ ಎಂದು ಸ್ಪಷ್ಟನೆ ನೀಡಿದ ಆಹಾರ ಇಲಾಖೆ


Team Udayavani, Oct 31, 2022, 12:15 PM IST

8

ಗಂಗಾವತಿ: ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಹಾಗೂ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ. ಇದರಿಂದ ಅಕ್ಕಿಯನ್ನು ಬಳಸದೆ ಅಕ್ಕಿ ಖರೀದಿದಾರರಿಗೆ ಮಾರಾಟ ಮಾಡುವ ದಂಧೆ ವ್ಯಾಪಕವಾಗಿದೆ.

ಕಳೆದ 2-3 ತಿಂಗಳಿಂದ ಸಾರ್ವಜನಿಕ ಪಡಿತರ ಅಕ್ಕಿ ವಿತರಣೆಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಕರಗದೆ ಮೇಲೆ ತೇಲುವ ಅಕ್ಕಿ ಪೂರೈಕೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಆತಂಕಗೊಂಡು ಪಡಿತರ ಅಕ್ಕಿಯನ್ನು ಬಳಸದೆ ಮಾರಾಟದಲ್ಲಿ ತೊಡಗಿದ್ದಾರೆ.

ಇದರಿಂದ ಸರ್ಕಾರದ ಧ್ಯೇಯೋದ್ದೇಶ ಉಲ್ಲಂಘನೆಯಾಗಿದ್ದು, ಪ್ಲಾಸ್ಟಿಕ್ ಅಕ್ಕಿ ಎನ್ನುವ ಭ್ರಮೆಯಲ್ಲಿ ಇರುವವರಿಗೆ ಸೂಕ್ತ ವೈಜ್ಞಾನಿಕ ಮಾಹಿತಿ ವಿತರಣೆ ಮಾಡುವಲ್ಲಿ ಆಹಾರ ಇಲಾಖೆ ವಿಫಲವಾಗಿದೆ. ಹೈದ್ರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆಯ ಸಮಸ್ಯೆಯಿಂದಾಗಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕಾಂಶ ತರುವ ಉದ್ದೇಶದಿಂದ ಸರ್ಕಾರ ಉತ್ತರ ಕರ್ನಾಟಕದ 14 ಜಿಲ್ಲೆಗಳಿಗೆ ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ಪೂರೈಕೆ ಮಾಡುತ್ತಿದೆ.

ಸಾರ್ವಜನಿಕ ಪಡಿತರ ಅಕ್ಕಿಯ ಜತೆಗೆ ಶೇ.25 ರಷ್ಟು ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಅಪೌಷ್ಠಿಕತೆಯಿಂದ ಬಳಲುತ್ತಿರುವವರಿಗೆ ಸರಕಾರ ಪೌಷ್ಟಿಕಾಂಶ ಹೆಚ್ಚಿಸಲು  ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ದಾನ ಮಾಡುತ್ತಿದೆ. ಜನರು ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಪ್ಲಾಸ್ಟಿಕ್ ಅಕ್ಕಿ ವಿತರಣೆಯಾಗುತ್ತಿದೆ ಎಂಬ ಆರೋಪ ಮಾಡುತ್ತಿದ್ದಾರೆ.

ಪೌಷ್ಠಿಕಾಂಶವುಳ್ಳ ಅಕ್ಕಿ ವಿತರಣೆ ಬಗ್ಗೆ ಆಹಾರ ಇಲಾಖೆ ಜಿಲ್ಲಾಡಳಿತ, ತಾಲೂಕಾಡಳಿತ, ಹೋಬಳಿವಾರು ಸಾರ್ವಜನಿಕೆ ಜಾಗೃತಿಯನ್ನುಂಟು ಮಾಡಿ ಸಾರ್ವಜನಿಕ ಪಡಿತರ ಅಕ್ಕಿಯನ್ನು ಮಾರಾಟ ಮಾಡದೆ ಊಟಕ್ಕೆ ಬಳಸುವಂತೆ ಸಲಹೆ ನೀಡಬೇಕಿದೆ.

ಸಾರ್ವಜನಿಕರಿಗೆ ತಪ್ಪು ಮಾಹಿತಿ: ಸಾರ್ವಜನಿಕ ಪಡಿತರ ಅಕ್ಕಿ ವಿತರಣೆಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದು, ಇದು ಸರಿಯಾದ ಮಾಹಿತಿಯಲ್ಲ. ಸಾರ್ವಜನಿಕರು ಇದನ್ನು ನಂಬಬಾರದು. ಅಪೌಷ್ಟಿಕ ಕೊರತೆಯಿಂದ ಬಳಲುತ್ತಿರುವ ಜನರಿಗೆ ಪೌಷ್ಟಿಕಾಂಶ ನೀಡುವ ಉದ್ದೇಶದಿಂದ ಸರಕಾರ ಕಳೆದ ಕೆಲವು ತಿಂಗಳಿಂದ ಪಡಿತರ ಅಕ್ಕಿಯ ಜೊತೆಗೆ ಸ್ವಲ್ಪ ಪ್ರಮಾಣದ ಪೌಷ್ಠಿಕಾಂಶ ಉಳ್ಳ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡುತ್ತಿದೆ. ಸಾರ್ವಜನಿಕರು ತಪ್ಪು ಮಾಹಿತಿಗೆ ಕಿವಿ ಕೊಡದೆ ಪಡಿತರ ಅಕ್ಕಿಯನ್ನು ಮಾರಾಟ ಮಾಡದೆ ಊಟಕ್ಕೆ ಬಳಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಜಿಲ್ಲಾ ಉಪನಿರ್ದೇಶಕ ಮಲ್ಲಿಕಾರ್ಜುನ ಉದಯವಾಣಿ ಜೊತೆ ಮಾತನಾಡಿದಾಗ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.