ದೋಟಿಹಾಳ: ಮಕ್ಕಳಿಲ್ಲದೆ ಬಿಕೋ ಎಂದ ಸಿಂಗಾರಗೊಂಡಿದ್ದ ಶಾಲೆ


Team Udayavani, Jun 1, 2024, 5:46 PM IST

ದೋಟಿಹಾಳ: ಮಕ್ಕಳಿಲ್ಲದೆ ಬಿಕೋ ಎಂದ ಸಿಂಗಾರಗೊಂಡಿದ್ದ ಶಾಲೆ

ಉದಯವಾಣಿ ಸಮಾಚಾರ
ದೋಟಿಹಾಳ: ಕುಷ್ಟಗಿ ತಾಲೂಕಿನ ಮೇಗೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ದಿನವೇ ಮಕ್ಕಳು ಶಾಲೆಗೆ ಬರಲಿಲ್ಲ. ಸುತ್ತಲಿನ ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ನಡೆದರೆ, ಇಲ್ಲಿನ ಗ್ರಾಮಸ್ಥರು ಗ್ರಾಮದ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ ಎಂದು ಆಕ್ರೋಶಗೊಂಡು ಮಕ್ಕಳನ್ನು ಶಾಲೆಗೆ ಕಳುಹಿಸಿರಲಿಲ್ಲ.

ಶಿಥಿಲ ಕಟ್ಟಡದಲ್ಲಿ 2-3 ವರ್ಷಗಳಿಂದ ಶಿಕ್ಷಣ ನೀಡುತ್ತಿದ್ದಾರೆ. ಹೊಸ ಕೊಠಡಿಗಳ ಕಾಮಗಾರಿ ಆರಂಭವಾದರೆ ಮಾತ್ರ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುತ್ತೇವೆ ಎಂದು ಒತ್ತಿ ಹೇಳಿದರು. ಹೀಗಾಗಿ ಶುಕ್ರವಾರ ಶಾಲಾ ಪ್ರಾರಂಭೋತ್ಸವಕ್ಕಾಗಿ ಶಿಕ್ಷಕರು ಸಿಂಗರಿಸಿದ್ದ ಶಾಲೆಯು ಮಕ್ಕಳು ಇಲ್ಲದೇ ಬಿಕೋ ಎನ್ನುತ್ತಿತ್ತು. ಶಾಲೆಯನ್ನು ಸಿಂಗಾರ ಮಾಡಿ, ಚಿಣ್ಣರಿಗೆ ಹೂ, ಪುಷ್ಪ ಹಾಗೂ ಸಮವಸ್ತ್ರ ನೀಡಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು.

ಅದರೆ ಶಾಲಾ ಮಕ್ಕಳು ಮಾತ್ರ ಶಾಲೆಯ ಹತ್ರ ಸುಳಿಯಲಿಲ್ಲ. ಶಿಕ್ಷಕರು ಗ್ರಾಮದಲ್ಲಿ ಸಂಚರಿಸಿ ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ಪಾಲಕರಿಗೆ ಮನವಿ ಮಾಡಿದ್ದರು ಆದರೆ ಪಾಲಕರು ಮಕ್ಕಳನ್ನು ಶಾಲೆಗೆ ಕಳಿಸಲಿಲ್ಲ. ಹೀಗಾಗಿ ಶಾಲಾ ಆರಂಭದ ದಿನವೇ ಶಾಲೆ ಮಕ್ಕಳಿಲ್ಲದೆ ಬಿಕೋ ಎನ್ನುತ್ತಿತ್ತು.

ಶಾಲೆಗೆ ಭೇಟಿ ನೀಡಿದ ಸಿಆರ್‌ಪಿಸಿ ಸೋಮಲಿಂಗಪ್ಪ ಗುರಿಕಾರ್‌ ಅವರು ಗ್ರಾಮಸ್ಥರ ಜೊತೆ ಮಾತನಾಡಿ ಈ ಶಾಲೆಗೆ ಎರಡು ಕೊಠಡಿಗಳು ನಿರ್ಮಾಣಕ್ಕೆ ಇಲಾಖೆಗೆ ಪ್ರಸ್ತಾಪನೆ ಸಲ್ಲಿಸಲಾಗಿತ್ತು. ಆದರೆ ಈ ಶಾಲೆ ಸೇರಿ ತಾಲೂಕಿನ ಇನ್ನೂ ಉಳಿದ ಐದು ಶಾಲೆಗಳ 9 ಕೊಠಡಿಗಳ ನಿರ್ಮಾಣಕ್ಕೆ ಸಲಿಸಿದ ಪ್ರಸ್ತಾಪ ಕೈಬಿಟ್ಟು ಆಯ್ದ ಶಾಲೆಗಳಿಗೆ ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಖರೀದಿಗೆ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ತಡವಾಗಿದೆ.

ಮುಂದಿನ ದಿನಗಳಲ್ಲಿ ನಿಮ್ಮ ಗ್ರಾಮಕ್ಕೆ ಹೊಸ ಕೊಠಡಿಗಳ ನಿರ್ಮಾಣ ಮಾಡಿಕೊಡುತ್ತಾರೆ. ಸದ್ಯ ಶಾಲಾ ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ಗ್ರಾಮಸ್ಥರಿಗೆ, ಪಾಲಕರಿಗೆ ಮನವಿ ಮಾಡಿದರು. ಆದರೆ ಪಾಲಕರು ಮಾತ್ರ ನೂತನ ಕೊಠಡಿಗಳ ನಿರ್ಮಾಣದ ಕಾಮಗಾರಿ ಆರಂಭವಾಗಬೇಕು. ಅಲ್ಲಿಯವರೆಗೂ ಮಕ್ಕಳನ್ನು ಶಾಲೆಗೆ ಕಳಿಸುವದಿಲ್ಲ. ಅಗತ್ಯ ಬಿದ್ದರೆ ನಮ್ಮ ಮಕ್ಕಳ ವರ್ಗಾವಣೆ ಪ್ರಮಾಣ ನೀಡಿ, ಬೇರೆ ಗ್ರಾಮದ ಶಾಲೆಗೆ ಕಳಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kushtagi

Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ‌ ಪಾಟೀಲ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.