ದೋಟಿಹಾಳ: ಜೆಜೆಎಂ ಕಾಮಗಾರಿ ಪುನಾರಂಭ
ವರ್ಷದಿಂದ ನನೆಗುಂದಿಗೆ ಬಿದಿದ್ದ ಕಾಮಗಾರಿ; ಉದಯವಾಣಿ ವೆಬ್ ಮತ್ತು ಪತ್ರಿಕೆ ಫಲಶ್ರುತಿ; ಸುದ್ದಿ ಪ್ರಕಟಗೊಂಡ ಮೇಲೆ ಎಚ್ಚೆತ್ತರು
Team Udayavani, Jan 17, 2023, 9:48 AM IST
ದೋಟಿಹಾಳ: ಗ್ರಾಮದಲ್ಲಿ ಕಳೆದ ವರ್ಷದಿಂದ ನನೆಗುಂದಿಗೆ ಬಿದ್ದಿದ್ದ ಗ್ರಾಮದ ಜೆಜೆಎಂ ಕಾಮಗಾರಿ ರವಿವಾರದಿಂದ ಪುನಃ ಆರಂಭಗೊಂಡಿದೆ.
ಒಂದು ವರ್ಷದಿಂದ ಈ ಕಾಮಗಾರಿ ನನೆಗುಂದಿಗೆ ಬಿದ್ದಿತ್ತು. ಗ್ರಾಮದ ಮುಖ್ಯ ರಸ್ತೆಗಳ ಸಿಸಿ ಅಗೆದು ಪೈಪ್ಗಳನ್ನು ಹಾಕದೇ ಹಾಗೆ ಬಿಟ್ಟಿದ್ದರು. ಇದರಿಂದ ರಸ್ತೆಯಲ್ಲಿ ಬೈಕ್ ಸವಾರರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿತ್ತು.
ಮುಂದಿನ ತಿಂಗಳು ಗ್ರಾಮದಲ್ಲಿ ಎರಡು ಜಾತ್ರೆಗಳು ಬರುತ್ತಿವೆ. ಇನ್ನಾದರೂ ರಸ್ತೆ ಸರಿಪಡಿಸುವ ಕೆಲಸಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಕಳೆದ ವರ್ಷದಂತೆ ಈ ವರ್ಷವೂ ಜಾತ್ರೆಗೆ ಬರುವ ಸಾವಿರಾರೂ ಭಕ್ತರು ಜನಪ್ರತಿನಿಧಿಗಳಿಗೆ ಮತ್ತು ಮುಖಂಡರಿಗೆ ಛೀಮಾರಿ ಹಾಕುವುದು ಗ್ಯಾರಂಟಿ. ಜಾತ್ರೆಗಳು ಆರಂಭಕ್ಕಿಂತ ಮುಂಚಿತವಾಗಿ ಗ್ರಾಮದ ರಸ್ತೆಗಳನ್ನು ಸರಿಪಡಿಸಿ ಗ್ರಾಮದ ಹೆಸರು ಉಳಿಸಿ ಎಂಬುವುದು ಪ್ರಜ್ಞಾವಂತ ನಾಗರಿಕರ ಪತ್ರಿಕೆಯ ಮೂಲಕ ಕಳಕಳಿ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಇದರ ಬಗ್ಗೆ ಜ. 11ರಂದು “ಉದಯವಾಣಿ’ ವೆಬ್ ಮತ್ತು “ಉದಯವಾಣಿ’ ಪತ್ರಿಕೆಯಲ್ಲಿ “ಜೆಜೆಎಂ ಕಾಮಗಾರಿ ಆರಂಭ ಯಾವಾಗ’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಗೊಂಡಿತ್ತು.
ಇದರಿಂದ ಎಚ್ಚೆತ್ತುಕೊಂಡಅಧಿಕಾರಿಗಳು ರವಿವಾರದಿಂದ ಗ್ರಾಮದಲ್ಲಿ ಮತ್ತೆ ಕಾಮಗಾರಿ ಪುನಃ ಆರಂಭ ಮಾಡಿದ್ದಾರೆ. ಸದ್ಯ ಗ್ರಾಮದ ಬನಶಂಕರಿದೇವಿ ರಥಬೀದಿಸಿಸಿರಸ್ತೆಯಲ್ಲಿಜೆಜೆಎಂ ಕಾಮಗಾರಿಯ ಪೈಪ್ಗ್ಳನ್ನು ಹಾಕುವ ಕೆಲಸ ನಡೆದಿದೆ. ಗ್ರಾಮದ ಎರಡು ಜಾತ್ರೆಗಳು ಆರಂಭಕ್ಕಿಂತ ಮುಂಚಿತವಾಗಿ ಗ್ರಾಮದ ಪ್ರಮುಖ ರಸ್ತೆಗಳನ್ನು ಸರಿಪಡಿಸುತ್ತೇವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ತಾಲೂಕು ಅಧಿಕಾರಿ ವಿಲಾಸ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.