Ediga ಸಮಾವೇಶ;ದಾರಿ ತಪ್ಪಿಸುವವರ ಮಾತು ಕೇಳುತ್ತಿರುವ ಸಿದ್ದರಾಮಯ್ಯ:ಶ್ರೀನಾಥ್
ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ..
Team Udayavani, Dec 9, 2023, 5:47 PM IST
ಗಂಗಾವತಿ: ರಾಜ್ಯದ ಅತ್ಯಂತ ಹಿಂದುಳಿದ ಸಮಾಜವಾಗಿರುವ ಈಡಿಗರ ಸಮಾಜದ ಸಮಾವೇಶ ಹಾಗೂ ಐಕ್ಯತೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾರಿ ತಪ್ಪಿಸುವವರ ಮಾತು ಕೇಳುತ್ತಿದ್ದು ಇದರಿಂದ ಮುಂಬರುವ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದ್ದು, ಮುಖ್ಯಮಂತ್ರಿಗಳು ಈಡಿಗ ಸಮಾಜದ ಹಿರಿಯ ಮುಖಂಡರ ಮಾರ್ಗದರ್ಶನ ಪಡೆಯುವಂತೆ ವಿಧಾನಪರಿಷತ್ ಮಾಜಿ ಸದಸ್ಯ, ಈಡಿಗ ಸಮಾಜದ ರಾಜ್ಯ ಮುಖಂಡ ಎಚ್.ಆರ್.ಶ್ರೀನಾಥ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯನವರಿಗೆ ಎರಡು ಭಾರಿ ಮುಖ್ಯಮಂತ್ರಿ ಸ್ಥಾನ ಸಿಗಲು ಈಡಿಗ ಸಮುದಾಯದ ಕೊಡುಗೆ ಇದೆ. ಈಡಿಗ ಸಮಾಜದ ಹಿರಿಯರಾದ ಎಚ್.ಜಿ.ರಾಮುಲು, ಬಿ.ಕೆ.ಹರಿಪ್ರಸಾದ ಸೇರಿ ಹಲವರ ಪರಿಶ್ರಮದ ಫಲವಾಗಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರುವಂತಾಗಿದೆ. ಇದೀಗ ಬೆಂಗಳೂರು ಸುತ್ತಮುತ್ತಲಿನ ಕೆಲ ಸ್ವಾರ್ಥ ಈಡಿಗ ಸಮಾಜದವರು ಸಿದ್ದರಾಮಯ್ಯನವರಿಗೆ ದಾರಿ ತಪ್ಪಿಸುತ್ತಿದ್ದು ಸಮಾಜದ ಜಗದ್ಗುರು ಪ್ರಣವಾನಂದಸ್ವಾಮೀಜಿಯವರನ್ನು ನಿರ್ಲಕ್ಷ್ಯ ಮಾಡಿ ಡಿ.10 ರಂದು ಬೆಂಗಳೂರಿನಲ್ಲಿ ಈಡಿಗರ ಸಮಾವೇಶ ಏರ್ಪಡಿಸಿರಿವುದು ಖಂಡನೀಯವಾಗಿದೆ ಎಂದರು.
ಸಮಾಜವನ್ನು ಇಬ್ಬಾಗ ಮಾಡುವ ಶಕ್ತಿಗಳ ಮಾತನ್ನು ಸಿಎಂ ಸಿದ್ದರಾಮಯ್ಯ ಕೇಳಬಾರದು. ಒಬ್ಬ ಹಿಂದುಳಿದ ನಾಯಕರಾಗಿ ಸರ್ವ ಹಿಂದುಳಿದ ಜನಾಂಗದವರ ಹಿತ ಕಾಯುವ ಕಾರ್ಯ ಸಿದ್ದರಾಮಯ್ಯ ಮಾಡಬೇಕು. ಡಿ.10 ರಂದು ಗಂಗಾವತಿಯಲ್ಲಿ ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮೀಜಿ ಸೇರಿ ಇತರೆ ಹಿಂದುಳಿದ ಸಮಾಜಗಳ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈಗಲೂ ಕಾಲ ಮಿಂಚಿಲ್ಲ ಸಿದ್ದರಾಮಯ್ಯನವರು ಹಿತಶತ್ರುಗಳ ಮಾತು ಕೇಳದೇ ಈಡಿಗ ಸಮಾಜದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ಹಿಂದುಳಿದವರ ಹಿತ ಕಾಪಾಡುವ ಕೆಲಸ ಮಾಡುವಂತೆ ಶ್ರೀನಾಥ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.