ಡ್ಯಾಂ ಇದ್ದರೂ ನೀರಿಗೆ ಹಾಹಾಕಾರ


Team Udayavani, May 17, 2019, 5:31 PM IST

kopala-tdy-1…

ಕೊಪ್ಪಳ: ತುಂಗಭದ್ರಾ ಜಲಾಶಯ ಜಿಲ್ಲೆಯಲ್ಲೇ ಇದ್ದರೂ 282ಕ್ಕೂ ಹೆಚ್ಚು ಹಳ್ಳಿಗಳು ಇಂದಿಗೂ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಪ್ರತಿ ಬೇಸಿಗೆಯಲ್ಲಿ ಜನರ ಗೋಳಾಟ, ಪರಿಪಾಟಲು ಯಾರಿಗೂ ಹೇಳತೀರದಂತ ಸ್ಥಿತಿಯಿದೆ. ಜಿಲ್ಲಾಡಳಿತ ಪ್ರತಿ ವರ್ಷ ಕೋಟ್ಯಂತರ ರೂ. ಹಣ ವೆಚ್ಚ ಮಾಡಿದರೂ ಜನರು ನೀರಿಗೆ ಬಿಕ್ಕುವ ಸ್ಥಿತಿ ತಪ್ಪಿಲ್ಲ.

ಜಿಲ್ಲೆ ಮೊದಲೇ ಬರಪೀಡಿತ ಎಂಬ ಹಣೆಪಟ್ಟಿ ಹೊತ್ತಿದೆ. ಮಳೆಯ ಅಭಾವದಿಂದ ಈ ಭಾಗದಲ್ಲಿ ಅಂತರ್ಜಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಕೆರೆ, ಬಾವಿ ನೀರಿನ ಮೂಲಗಳನ್ನೇ ನಂಬಿ ಜೀವನ ನಡೆಸುವ ಜನತೆ ಕೊಡ ನೀರಿಗೆ ತೋಟ, ಗದ್ದೆಗಳಿಗೆ ಅಲೆದಾಡುತ್ತಿದ್ದಾರೆ.

•ಜಿಲ್ಲೆಯಲ್ಲಿ ನೀರಿಗೆ ಬಾಯ್ದೆರೆದ 282 ಹಳ್ಳಿಗಳು

•ತುಂಗಭದ್ರೆ ಪಕ್ಕದಲ್ಲೇ ಇದ್ದರೂ ಬಿಕ್ಕುವ ಜನ

•13 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು

•ಕೋಟಿ ಕೋಟಿ ಬಂದರೂ, ಸಮಸ್ಯೆ ಕಗ್ಗಂಟು

ಜಿಲ್ಲೆಯ 737 ಜನವಸತಿ ಪ್ರದೇಶಗಳಲ್ಲಿ 282 ಗ್ರಾಮಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳೆಂದು ಜಿಲ್ಲಾಡಳಿತದ ವರದಿಯೇ ಹೇಳುತ್ತದೆ. ಪ್ರತಿ ಬೇಸಿಗೆಯಲ್ಲಿ ಏಪ್ರಿಲ್, ಮೇನಲ್ಲಿ ಸಮಸ್ಯಾತ್ಮಕ ಹಳ್ಳಿಗಳ ಸಂಖ್ಯೆ 330ರ ಗಡಿದಾಟುತ್ತದೆ. ನೀರಿನ ಹಾಹಾಕಾರ ಉಲ್ಭಣಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಎದ್ದು ಬಿದ್ದು ಕ್ರಿಯಾಯೋಜನೆ ರೂಪಿಸಲು ಓಡಾಡುತ್ತಿರುತ್ತಾರೆ. ಆದರೆ ಪೂರ್ವ ಯೋಜನೆ ಅವರಲ್ಲಿ ಕಾಣಲ್ಲ.

ವಿಶೇಷವೆಂಬಂತೆ, ತುಂಗಭದ್ರಾ ಡ್ಯಾಂ ಜಿಲ್ಲೆಯಲ್ಲೇ ಇದ್ದರೂ ನೀರಿನ ಬವಣೆ ಮಾತ್ರ ನೀಗಿಲ್ಲ. ಕಳೆದ ವರ್ಷ ಡ್ಯಾಂ ಭರ್ತಿಯಾದರೂ ಜಿಲ್ಲೆಯ ಜನ ತೋಟ, ಗದ್ದೆ, ಕೆರೆ, ಬಾವಿಗಳಲ್ಲಿ ನಿಂತ ನೀರನ್ನೇ ಬಳಸುತ್ತಿದ್ದಾರೆ. ಪರ ಊರುಗಳಿಂದ ಜನರು ನೀರು ತಂದು ಜೀವನ ನಡೆಸುವಂತಹ ಸ್ಥಿತಿಯಿದೆ. ಇಲ್ಲಿನ ಶಾಸಕ, ಸಂಸದರು ಶಾಶ್ವತ ಯೋಜನೆ ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ.

ಕ್ರಿಯಾಯೋಜನೆ: ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಬವಣೆ ನಿವಾರಿಸಲು ಸರ್ಕಾರ ಜಿಪಂನ ಟಾಸ್ಕ್ ಫೋರ್ಸ್‌ನಡಿ 3.75 ಕೋಟಿ, ಎಸ್‌ಡಿಆರ್‌ಎಫ್‌ನಡಿ 1.30 ಕೋಟಿ, ಜಿಲ್ಲಾಧಿಕಾರಿ ಬರ ಪರಿಹಾರದಲ್ಲಿ 3.43 ಕೋಟಿ ಸೇರಿದಂತೆ ಒಟ್ಟು ಕುಡಿಯುವ ನೀರು ಪೈಪ್‌ಲೈನ್‌ ದುರಸ್ತಿ, ಕೊಳವೆ ಬಾವಿ ಬಾಡಿಗೆ, ಕೊಳವೆಬಾವಿ ಕೊರೆಯಿಸುವುದು ಸೇರಿ ಜನರಿಗೆ ನೀರು ಪೂರೈಕೆಗೆ 8.48 ಕೋಟಿ ರೂ.ನಲ್ಲಿ ಕ್ರಿಯಾಯೋಜನೆ ರೂಪಿಸಿ ಬಿಡುಗಡೆಯನ್ನೂ ಮಾಡಿದೆ. ಆದರೆ ಜಿಲ್ಲೆಯ 110 ಗ್ರಾಮಗಳಲ್ಲಿ 138 ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸುವಂತಹ ಸ್ಥಿತಿಯಿದೆ. ಇನ್ನೂ ಕುಷ್ಟಗಿ ತಾಲೂಕಿನ ಗುಡ್ಡದ ದೇವಲಾಪುರ, ಹನುಮನಾಳ, ಸಾಸ್ವಿಹಾಳ, ಅಡವಿಬಾವಿ, ರ್ಯಾವಣಕಿ, ಚಂದ್ರಗಿರಿ ಸೇರಿ ಜಿಲ್ಲೆಯ 13 ಹಳ್ಳಿಗಳಲ್ಲಿ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದ್ದು, ಮೇ ಕೊನೆಯಲ್ಲಿ ಈ ಹಳ್ಳಿಗಳ ಸಂಖ್ಯೆ 40ರ ಗಡಿ ದಾಟಬಹುದು ಎಂದು ಜಿಲ್ಲಾಡಳಿತ ಲೆಕ್ಕಾಚಾರ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಹಲವು ಕಡೆ ಕೆಟ್ಟಿವೆ. ದುರಸ್ತಿಗೆ ಗ್ರಾಪಂಗಳು ನರಳಾಡುತ್ತಿದ್ದರೆ, ಸಂಘ-ಸಂಸ್ಥೆಗಳ ಆಶ್ರಯದಲ್ಲಿರುವ ಘಟಕಗಳು ಸರಿಯಾಗಿವೆ. ಹಲವೆಡೆ ಘಟಕಗಳಿಗೆ ನೀರಿಗೆ ಬರ ಬಂದಿದೆ. ಪ್ರತಿ ವರ್ಷ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ಬಂದರೂ ಸಮಸ್ಯೆ ಕಗ್ಗಂಟಾಗುತ್ತಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.