ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ


Team Udayavani, May 18, 2022, 1:13 PM IST

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: ಕಳೆದ 25 ವರ್ಷಗಳಿಂದ ಒಂದಿಲ್ಲ ಒಂದು ಕಾರಣದಿಂದ ಅಭಿವೃದ್ಧಿ ವಂಚಿತವಾಗಿರುವ ಕುಷ್ಟಗಿ ಪಟ್ಟಣದ 3ನೇ ವಾರ್ಡಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ವಾರ್ಡಿನ ನಿವಾಸಿಗಳು ಬುಧವಾರ ಪುರಸಭೆಗೆ ಮನವಿ ಸಲ್ಲಿಸಿದರು.

3ನೆ ವಾರ್ಡಿನ ವಾಪ್ತಿಯಲ್ಲಿರುವ ಶ್ರೀ ಅನ್ನದಾನೇಶ್ವರ ನಗರ, ಶ್ರೀ ಬುತ್ತಿಬಸವೇಶ್ವರ ನಗರ, ಗೌರಿನಗರ ಈ ಬಡಾವಣೆಗಳಲ್ಲಿ ಕಳೆದ 25 ವರ್ಷಗಳಿಂದ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲಿಯವರೆಗೆ ಸಮರ್ಪಕವಾಗಿ ಸಿಕ್ಕಿಲ್ಲ. ಸದರಿ ವಾರ್ಡ ಪ್ರತಿನಿಧಿಸುವ ವಾರ್ಡ ಸದಸ್ಯರ ನಿರ್ಲಕ್ಷವೂ ಇದೆ. ವಾರ್ಡಿನ ಈಗಿನ ಸದಸ್ಯೆ ಗೀತಾ ತುರಕಾಣಿ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವುದು ಬಿಟ್ಟರೆ ಅಭಿವೃದ್ಧಿಗೆ ಗಮನ ಹರಿಸದೇ ಇರುವುದು ಈ ವಾರ್ಡಿನ ದೌರ್ಭಾಗ್ಯ ಆಗಿದೆ.

ಇಲ್ಲಿನ ನಿವಾಸಿಗಳು ತಪ್ಪದೇ ತಮ್ಮ ಗೃಹ ಹಾಗೂ ನಿವೇಶನಗಳಿಗೆ ಪುರಸಭೆ ನಿಗದಿಪಡಿಸಿದ ತೆರಿಗೆಯನ್ನು ಭರಣ ಮಾಡಿದರೂ ಸಹ ಇಲ್ಲಿನ ನಾಗರೀಕರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿಯೇ ಇದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆ ಮೊದಲಾದ್ಯತೆಯಾಗಿದೆ.

ಮುಖ್ಯ ಹಾಗೂ ಸಂಪರ್ಕ ರಸ್ತೆಗಳ ಜೋಡಣೆ ಮತ್ತು ಅಭಿವೃದ್ಧಿ, ವಿದ್ಯುತ್ ಕಂಬಗಳು ಮತ್ತು ದೀಪಗಳನ್ನು ಸಕಾಲದಲ್ಲಿ ನಿರ್ವಹಣೆ. ಕಸ ಹಾಗೂ ಘನತ್ಯಾಜ್ಯಗಳನ್ನು ಶೀಘ್ರ ವಿಲೇವಾರಿ ಮಾಡುವುದು. ರಾಜಕಾಲುವೆಯ ಗಡಿ ಗುರುತಿಸಿ, ಆತಿಕ್ರಮಣ ತೆರವುಗೊಳಿಸಿ ಕೂಡಲೇ ನಿರ್ಮಿಸಬೇಕಿದೆ. ಸದರಿ ವಾರ್ಡಿನ ವ್ಯಾಪ್ತಿಯ ಉದ್ಯಾನವನಗಳನ್ನು ಗುರುತಿಸಿ, ಒತ್ತುವರಿ ತೆರವು, ಪರಿವರ್ತಿತ ಉದ್ಯಾನವನಗಳನ್ನು ಮೂಲಸ್ವರೂಪದಲ್ಲಿ ನಾಮಫಲಕ ಅಳವಡಿಸಿ ಅಭಿವೃದ್ಧಿಪಡಿಸುವುದು.

ಈ ವಾರ್ಡಿಗೆ ಹೊಂದಿಕೊಂಡಿರುವ ಕೊಪ್ಪಳ ರಸ್ತೆಗೆ ಬೇಕಾಬಿಟ್ಟಿಯಾಗಿ ಬಿಸಾಡಿರುವ ತ್ಯಾಜ್ಯವಸ್ತುಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ, ಕಂದಾಯ ಅಧಿಕಾರಿ ಖಾಜಾ ಹುಸೇನ್, ರಾಘವೇಂದ್ರ ಬೇನಾಳ ಅವರಿಗೆ ಮನವಿ ಸಲ್ಲಿಸಿದರು.

3ನೇ ವಾರ್ಡ ರಹವಾಸಿ ಸಂಘದ ಶಾರದಾ ಕಟ್ಟಿಮನಿ, ಡಿ.ಬಿ.ಗಡೇದ, ಅಭಿನಂದನ್ ಗೋಗಿ,ಎ.ವೈ.ಲೋಕರೆ, ಶುಕರಾಮಪ್ಪ ಗೋತಗಿ, ಈಶಪ್ಪ ತಳವಾರ, ರಾಘವೇಂದ್ರ ನೀಲಿ, ಶಶಿಧರ ಗುಮಗೇರಿ,ಬಸವರಾಜ ಗಾಣಗೇರ, ತಿರುಮಲರಾವ್ ದಂಡಿನ, ನಾಗರಾಜ ಶೆಟ್ಟರ್ ಮತ್ತೀತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.