ಕೋವಿಡ್ ಗೆ ಸೆಡ್ಡು ಹೊಡೆದ ಓಬಳಬಂಡಿಯ ರೈತ ಭರಮಪ್ಪ ಕುರಿ


Team Udayavani, May 2, 2021, 2:13 PM IST

ಕೋವಿಡ್ ಗೆ ಸೆಡ್ಡು ಹೊಡೆದ ಓಬಳಬಂಡಿಯ ರೈತ ಭರಮಪ್ಪ ಕುರಿ

ಗಂಗಾವತಿ: ಕೋವಿಡ್-19 ಮಹಾಮಾರಿ ಪ್ರತಿಯೊಬ್ಬರನ್ನು ಹೈರಾಣ ಮಾಡಿದೆ. ಹಲವು ನಿರೀಕ್ಷೆಗಳನ್ನಿಟ್ಟುಕೊಂಡು ಕಲ್ಲಂಗಡಿ ಬೆಳೆದ ರೈತನೋರ್ವ ಕರ್ಪ್ಯೂನಿಂದಾಗಿ ಲಕ್ಷಾಂತರ ರೂ.ಖರ್ಚು ಮಾಡಿ ಬೆಳೆದ ಹಣ್ಣನ್ನು ಬೀದಿಗೆ ಚೆಲ್ಲದೇ ಅಗತ್ಯ ಪರವಾನಿಗೆಯೊಂದಿಗೆ ತಮ್ಮ‌ ಟ್ರಾಕ್ಟರ್ ನಲ್ಲಿ ಮಾರಿದ್ದಾರೆ. ಟ್ರಾಕ್ಟರ್ ನಲ್ಲಿ ಕಲ್ಲಂಗಡಿ ಹಣ್ಣನ್ನು ಸಮೀಪದ ನಗರ ಪ್ರದೇಶಗಳಲ್ಲಿ ಬೆಳ್ಳಿಗ್ಗೆ 6-10 ಗಂಟೆಯ ಒಳಗೆ ಮಾರಾಟ ಮಾಡಿ ಸಂಭವನೀಯ ನಷ್ಟದಿಂದ ಪಾರಾಗಿ‌ ಕೋವಿಡ್ ಗೆ ಸೆಡ್ಡು ಹೊಡೆದು‌ ಇತರರಿಗೆ ಮಾದರಿಯಾಗಿದ್ದಾರೆ.

ಕನಕಗಿರಿ ತಾಲೂಕಿನ ಓಬಳಬಂಡಿ ಗ್ರಾಮದ ಭರಮಪ್ಪ ಕುರಿ ಎಂಬ ರೈತ ಈ‌ ಬಾರಿ‌ ಬೇಸಿಗೆ ಮತ್ತು ರಂಜಾನ್ ಹಬ್ಬವನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಲ್ಕು ಎಕರೆ ಭೂಮಿಯಲ್ಲಿ ಕಲ್ಲಂಗಡಿ ಹಣ್ಣನ್ನು ಬೆಳೆದಿದ್ದರು. ಹಣ್ಣಿನ ವ್ಯಾಪಾರಿಗಳು ಹೊಲಕ್ಕೆ ಬಂದು‌ ಹಣ್ಣಿನ‌ ವ್ಯಾಪಾರ ಮುಗಿಸಿದ ಮರುದಿನವೇ ಕೋವಿಡ್ ಕರ್ಪ್ಯೂ ಘೋಷಣೆ ಮಾಡಿದ್ದರಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಲು ವ್ಯಾಪಾರಿಗಳು ಮುಂದೆ ಬರಲಿಲ್ಲ. ನಾಲ್ಕು ಎಕರೆಯಲ್ಲಿ ಕಲ್ಲಂಗಡಿ ಬೆಳೆಯಲು ರೈತ ಭರಮಪ್ಪ ಕುರಿ ಸುಮಾರು1.50 ಲಕ್ಷ ರೂ. ಖರ್ಚು ಮಾಡಿದ್ದರು. ಇದನ್ನು ಹೇಗಾದರೂ ಮಾಡಿ ಹಿಂಪಡೆಯಬೇಕೆಂದು ಯೋಚಿಸಿ ಜಿಲ್ಲಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಪರವಾನಿಗೆ ಪಡೆದು ಗಂಗಾವತಿ, ಕೊಪ್ಪಳ, ಕನಕಗಿರಿ ಸೇರಿ ಸುತ್ತಮುತ್ತಲಿನ ಊರುಗಳಿಗೆ ಟ್ರಾಕ್ಟರ್ ನಲ್ಲಿ ಕಲ್ಲಂಗಡಿ ಹಣ್ಣನ್ನು ಹಾಕಿಕೊಂಡು ಭರಮಪ್ಪ ಕುರಿ ಹಾಗೂ ಕುಟುಂಬದವರು ಮಾರಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ:ಮಸ್ಕಿ ಉಪ ಕದನ : ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿನಹಾಳ

ಈಗಾಗಲೇ 60 ಸಾವಿರ ರೂ.ಗಳಷ್ಟು ಮೌಲ್ಯದ ಕಲ್ಲಂಗಡಿಯನ್ನು ಮಾರಿದ್ದು ಪ್ರತಿ ನಿತ್ಯ ಕಲ್ಲಂಗಡಿ ಹಣ್ಣನ್ನು ಮಾರಿ ನಷ್ಟ ತಪ್ಪಿಸಲು ಇಡೀ ಕುಟುಂಬ ಕಷ್ಟಪಡುತ್ತಿದೆ. ವ್ಯಾಪಾರಿಗಳು ವಿಧಿಸುವ ದುಪ್ಪಟ್ಟು ದರದ ಬದಲಿ ಸ್ವತಃ ರೈತರು ಮಾರುವ ಹಣ್ಣನ್ನು ಗ್ರಾಹಕರು ಕಡಿಮೆ ದರಕ್ಕೆ ಕೊಳ್ಳುವ ಮೂಲಕ ರೈತರಿಗೆ ಆಗುವ ನಷ್ಟ ತಪ್ಪಿಸಬಹುದಾಗಿದೆ. ರೈತರು ಬೆಳೆದ ತರಕಾರಿ ಹಣ್ಣು ಸೇರಿ ಇತರ ಬೆಳೆಗಳಿಗೆ ಮಾರುಕಟ್ಟೆ ಇಲ್ಲ ಎಂದು ಚಿಂತಿಸದೇ ತಿಪ್ಪೆಗೆ, ರಸ್ತೆಗೆ ಸುರಿಯದೇ ಓಬಳಬಂಡಿ ರೈತ ಭರಮಪ್ಪ ಕುರಿ ಅವರಂತೆ ಯೋಚಿಸಿ ಸ್ವಂತ ಮಾರಾಟ ಮಾಡಿ ಕನಿಷ್ಠ ಆಗುವ ನಷ್ಟವನ್ನು ತಪ್ಪಿಸಬಹುದಾಗಿದೆ.

ಹಾಕಿದ ಬಂಡವಾಳವಾದರೂ ಬರಲಿ: ಕರ್ಪ್ಯೂ ಸಂದರ್ಭದಲ್ಲಿ ಎಲ್ಲವೂ ಬಂದ್ ಆಗಿವೆ. ರಂಜಾನ್ ಹಾಗೂ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದರೆ ಲಾಭವಾಗುತ್ತದೆ ಎಂದು ಕಲ್ಲಂಗಡಿ ಬೆಳೆದು ಕರ್ಪ್ಯೂ ಆಗಿದ್ದರಿಂದ ವ್ಯಾಪಾರಿಗಳು ಖರೀದಿಸಲು ಮುಂದೆ ಬರಲಿಲ್ಲ. ನಮ್ಮ ಸಹೋದರ ರಾಮಣ್ಣ ಕುರಿ ಎಂಬುವರು ತೋಟಗಾರಿಕೆ ಇಲಾಖೆಯ ಪರವಾನಿಗೆ ಕೊಡಿಸಿದ್ದರಿಂದ ಕೊಪ್ಪಳ ಗಂಗಾವತಿ ಸೇರಿ ಸುತ್ತಲಿನ ಊರುಗಳಲ್ಲಿ ಟ್ರಾಕ್ಟರ್ ನಲ್ಲಿ ಕಲ್ಲಂಗಡಿಯನ್ನು ಹಾಕಿಕೊಂಡು ಮಾರಾಟ ಮಾಡುತ್ತಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಈಗಾಗಲೇ 60 ಸಾವಿರ ರೂ.ಗಳಷ್ಟು ಕಲ್ಲಂಗಡಿ ಮಾರಿದ್ದು ಇನ್ನೂ ಅರ್ಧ ಹೊಲದಲ್ಲಿ ಕಲ್ಲಂಗಡಿ ಇದ್ದು ಅದನ್ನು ಮಾರಿ ಬೆಳೆಯಲು ಖರ್ಚು ಮಾಡಿದ 1.50 ಲಕ್ಷ ರೂ.ವಾದರೂ ವಾಪಸ್ ಸಾಧ್ಯತೆ ಇದೆ ಎನ್ನುತ್ತಾರೆ ರೈತ ಭರಮಪ್ಪ ಕುರಿ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.