![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಹೆದ್ದಾರಿ ತಡೆದ ಅನ್ನದಾತರು
ಹಿಟ್ನಾಳ ಟೋಲ್ಗೇಟ್ ಬಳಿ 2 ಗಂಟೆ ಹೆದ್ದಾರಿ ತಡೆ! ಕಾಯ್ದೆಗಳ ವಿರುದ್ಧ ಹೋರಾಟಗಾರರ ಆಕ್ರೋಶ
Team Udayavani, Feb 7, 2021, 6:33 PM IST
![farmer protest (1)](https://www.udayavani.com/wp-content/uploads/2021/02/farmer-protest-1-620x372.jpg)
ಕೊಪ್ಪಳ: ದೆಹಲಿ ರೈತ ಹೋರಾಟ ಬೆಂಬಲಿಸಿ ಜಿಲ್ಲೆಯ ವಿವಿಧ ರೈತಪರ ಸಂಘಟನೆಗಳು ಜಂಟಿಯಾಗಿ ತಾಲೂಕಿನ ಹಿಟ್ನಾಳ ಟೋಲ್ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-13ನ್ನು 2 ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಆಮ್ ಆದ್ಮಿ ಪಾರ್ಟಿ, ಕರ್ನಾಟಕ ರೈತ ಸಂಘ,ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸಿಐಟಿಯು, ಎಐಡಿವೈಒ, ರೈತ ಸಂಘಟನೆಗಳ ಸಮನ್ವಯ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಜಂಟಿಯಾಗಿ ತಾಲೂಕಿನ ಹಿಟ್ನಾಳ ಟೋಲ್ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-16ರ ಸಂಚಾರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಕೇಂದ್ರ ಸರ್ಕಾರವು ರೈತ ವಿರೋ ಧಿ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರಿಂದ ರೈತರಿಗೆ ದೊಡ್ಡ ಅಪಾಯ ಎದುರಾಗಲಿದೆ. ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಹಲವು ದಿನಗಳಿಂದ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದಾರೆ.
ಗಣರಾಜ್ಯೊತ್ಸವ ದಿನದಂದು ರೈತರು ಹೋರಾಟ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರವು ಕೆಂಪು ಕೋಟೆ ಮೇಲೆ ಭಾವುಟ ಹಾರಾಡಿಸಿದರು ಎನ್ನುವ ಕಾರಣದಿಂದ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ರಸ್ತೆಗಳಿಗೆ ಮೊಳೆ ಹೊಡೆಯಿತು. ಈ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿ ರೈತರ ಪರ ಹಲವರು ಧ್ವನಿ ಎತ್ತಿದ್ದಿರಿಂದ ತಮ್ಮ ಮಾನ ಉಳಿಸಿಕೊಳ್ಳಲು ರಸ್ತೆಯ ಮೇಲೆ ಹೊಡೆದಿದ್ದ ಮೊಳೆ ತೆಗೆಸಿದರು. ಪ್ರಸ್ತುತ ಪ್ರತಿಯೊಂದು ವಸ್ತುಗಳ ಬೆಲೆಯೂ ಏರಿಕೆಯಾಗಿವೆ. ಸರ್ಕಾರವು ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳೆಗೆ ವೈಜ್ಞಾನಿಕ ಬೆಲೆ ಕೊಟ್ಟರೆ ಅನ್ನದಾತ ಸಮುದಾಯ ಉಳಿಯಲಿದೆ. ಇಲ್ಲದಿದ್ದರೆ ಆಹಾರ ಭದ್ರತೆ ಕೊರತೆ ಎದುರಾಗಲಿದೆ. ಇಂದು ರೈತ ಸಮೂಹ ಸಿಡಿದೆದ್ದಿದೆ. ದೆಹಲಿ ಮಟ್ಟದಲ್ಲಿ ದೊಡ್ಡ ಹೋರಾಟಕ್ಕೆ ನಿಂತಿದೆ. ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ನಲ್ಲಿ ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಪ್ರತಿಭಟನಾ ಸ್ಥಳಕ್ಕೆ ಭೇಟಿಯೂ ನೀಡಿಲ್ಲ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಇಂದು ದೇಶವನ್ನು ಬಿಜೆಪಿ ಆಳುತ್ತಿಲ್ಲ. ಬದಲಾಗಿ ಆರ್ಎಸ್ ಎಸ್, ಸಂಘ ಪರಿವಾರ ಆಡಳಿತ ನಡೆಸುತ್ತಿವೆ ಎಂದು ಆರೋಪಿಸಿದರು.
ಇದನ್ನೂ ಓದಿ :ಭಂಗಿ ಭೂತಪ್ಪ ದೇವರ ವಾರ್ಷಿಕೋತ್ಸವ
ರೈತ ಸಂಘದ ಜಿಲ್ಲಾಧ್ಯಕ್ಷ ನಜೀರ್ಸಾಬ್ ಮೂಲಿಮನಿ, ರೈತ ಸಂಘದ ಅಧ್ಯಕ್ಷ ಡಿ.ಎಚ್. ಪೂಜಾರ, ಕೆ.ಬಿ. ಗೋನಾಳ, ಬಸವರಾಜ ಶೀಲವಂತರ್, ಶಿವಪ್ಪ ಮುಂಗೋಲಿ, ಎಐಡಿವೈಒನ ಶರಣು ಪಾಟೀಲ್, ಆಮ್ ಆದ್ಮಿ ಪಾರ್ಟಿಯ ಹುಸೇನಸಾಬ್ ಗಂಗನಾಳ, ಶರಣಪ್ಪ ಸಜ್ಜಿಹೊಲ, ಚನ್ನಬಸವ ಜಕ್ಕಿನ್, ಗಣೇಶ ಕಾಟಾಪೂರ, ದೊಡ್ಡಬಸಪ್ಪ, ಗಣೇಶ ಜಂತಕಲ್ ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![3-gangavathi](https://www.udayavani.com/wp-content/uploads/2024/12/3-gangavathi-1-150x90.jpg)
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
![2-koppala](https://www.udayavani.com/wp-content/uploads/2024/12/2-koppala-150x90.jpg)
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
![ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ](https://www.udayavani.com/wp-content/uploads/2024/12/Hanumamala-150x106.jpg)
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
![5-govt-office](https://www.udayavani.com/wp-content/uploads/2024/12/5-govt-office-150x90.jpg)
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
![1-gangavathi](https://www.udayavani.com/wp-content/uploads/2024/12/1-gangavathi-150x90.jpg)
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.