![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 20, 2020, 7:12 AM IST
ಕೊಪ್ಪಳ: ಭೂ ಸುಧಾರಣೆ ಕಾಯ್ದೆಯಡಿ ಕಲಂ 79ಎ ಮತ್ತು ಬಿ ಯನ್ನು ತೆಗೆದು ಹಾಕುವುದರೊಂದಿಗೆ ಕಾಯ್ದೆಯ ತಿದ್ದುಪಡಿ ಮಾಡಿರುವ ಸರಕಾರದ ವಿರುದ್ಧ ಹೋರಾಟ ರೂಪಿಸಲು ಶುಕ್ರವಾರ ನಗರ ಸಮೀಪದ ಭಾಗ್ಯನಗರದಲ್ಲಿ ರೈತಪರ ಸಂಘಟನೆಗಳ ಸಭೆ ನಡೆಸಿ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿತು.
ಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ತಿದ್ದುಪಡಿ ಕುರಿತು ಚರ್ಚೆ ನಡೆಸಿ ಸಭೆ ತೀವ್ರವಾದ ವಿರೋಧ ವ್ಯಕ್ತಪಡಿಸಿತು. ಸಭೆಯಲ್ಲಿ ರೈತ ಸಂಘಟನೆಗಳ ಸಮನ್ವಯ ಸಮಿತಿ ರಚಿಸಲಾಯ್ತು. ಸಮಿತಿಯ ಪ್ರಧಾನ ಸಂಚಾಲಕರಾಗಿ ವಿಠಪ್ಪ ಗೋರಂಟಿ ಹಾಗೂ ಅಲ್ಲಮಪ್ರಭು ಬೆಟ್ಟದೂರು ಅವರನ್ನು ಆಯ್ಕೆ ಮಾಡಲಾಯಿತು.
ಸಂಚಾಲಕರಾಗಿ ಜೆ.ಭಾರದ್ವಾಜ, ನಜೀರಸಾಬ ಮೂಲಿಮನಿ, ಡಿ.ಎಚ್. ಪೂಜಾರ್, ಮದ್ದಾನಯ್ಯ ಹಿರೇಮಠ, ಶಿವಣ್ಣ ಭೀಮನೂರ, ಮರಿಯಪ್ಪ ಸಾಲೋಣಿ, ಫಕೀರರೆಡ್ಡಿ ಹ್ಯಾಟಿ, ಭೀಮಸೇನ ಕಲಕೇರಿ, ತಿಪ್ಪಯ್ಯ ಹಿರೇಮಠ, ಗಣೇಶರೆಡ್ಡಿ ಕನಕಗಿರಿ, ಸುಂದರರಾಜ ಕಾರಟಗಿ, ಶರಣಯ್ಯ ಮುಳ್ಳೂರ ಮಠ, ಬಸವರಾಜ ಶೀಲವಂತರ, ಕೆ.ಬಿ.ಗೋನಾಳ, ಖಾಸೀಂ ಸರದಾರ, ಬಾಳಪ್ಪ ಕೊಡದಾಳ, ಮಹಾಂತೇಶ ಕೊತಬಾಳ, ಹನುಮಂತಪ್ಪ ಎಳೆನೀರು, ಮಮತಾಜಬೇಗಂ, ಪುಷ್ಪಾಮೇಸ್ತಿ ಅವರನ್ನು ಆಯ್ಕೆ ಮಾಡಲಾಯಿತು. ಜೂ.24ರಂದು ಸಭೆ ನಡೆಸಲು ಮತ್ತೆ ನಿರ್ಧರಿಸಲಾಯಿತು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.