ಅಂತೂ ಇಂತೂ ವಿಜಯನಗರ ಬಡಾವಣೆಗೆ ನೀರು ಬಂತು
Team Udayavani, May 14, 2019, 3:40 PM IST
ಕೊಪ್ಪಳ: ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಇಲ್ಲಿನ 26ನೇ ವಾರ್ಡ್ನ ವಿಜಯನಗರ ಬಡಾವಣೆಗೆ ಕೊನೆಗೂ ನೀರು ಪೂರೈಕೆ ಪ್ರಾರಂಭವಾಗಿದೆ. ವಾರ್ಡ್ ಸದಸ್ಯೆ ದೇವಕ್ಕ ಕಂದಾರಿ ಅವರ ಸತತ ಪ್ರಯತ್ನದಿಂದ ವಾರ್ಡ್ಗೆ ನೀರು ಪೂರೈಕೆಯಾಗಿದ್ದು, ಸೋಮವಾರ ಓಣಿಯಲ್ಲಿ ಸಂಭ್ರಮ ಮನೆ ಮಾಡಿತ್ತು.
ಹೌದು.. ತುಂಗಭದ್ರಾ ಜಲಾಶಯ ಪಕ್ಕದಲ್ಲೇ ಇದ್ದರೂ ಕೊಪ್ಪಳದ ಜನತೆ ಕುಡಿಯುವ ನೀರಿಗೆ ಎಲ್ಲೆಡೆ ಅಲೆದಾಡುವಂತ ಪರಿಸ್ಥಿತಿ ಇದೆ. ಹೊಲ, ಗದ್ದೆಗಳಿಗೆ, ಹಳ್ಳದ ತಟದಲ್ಲಿನ ಬೋರ್ವೆಲ್ಗೆ ತೆರಳಿ ನೀರು ತರುವಂತ ಸ್ಥಿತಿಯಿದೆ. ಅಲ್ಲದೇ, 26ನೇ ವಾರ್ಡಿನಲ್ಲಂತೂ ಅತೀವ ನೀರಿನ ಸಮಸ್ಯೆ. ವಾರ್ಡ್ ಸದಸ್ಯರ ಪರಿಶ್ರಮದಿಂದ ಕೊನೆಗೂ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಇಲ್ಲಿನ ಜನತೆ ಹಬ್ಬದಂತೆ ನೀರಿಗೆ ಪೂಜೆ ಮಾಡಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ನೀರಿನ ಸಮಸ್ಯೆಯಿಂದಾಗಿ ವಾರ್ಡ್ನಲ್ಲಿನ ಹಾಸ್ಟೆಲ್ಗೆ ವಿದ್ಯಾರ್ಥಿನಿಯರು ಆಗಮಿಸಲು ಹಿಂದೇಟು ಹಾಕುವಂತ ಸ್ಥಿತಿಯಿತ್ತು. ಅಂತೂ ವಿಜಯನಗರದ ಬಡಾವಣೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ತುಂಗಭದ್ರಾ ನೀರನ್ನು ಓಣಿಗೆ ತಂದಿದ್ದಕ್ಕೆ ಬಡಾವಣೆಯ ಜನರ ಮನಸ್ಸಿನಲ್ಲಿ ಉಲ್ಲಾಸ ತುಂಬಿ ತುಳುಕುತ್ತಿತ್ತು.
ಈ ಸಂಭ್ರಮದಲ್ಲಿ ನಗರಸಭೆ ಸದಸ್ಯೆ ದೇವಕ್ಕ ಕಂದಾರಿ, ಮುಖಂಡರಾದ ಹಾಲೇಶ ಕಂದಾರಿ ಬಸವರಾಜ ಬನ್ನಿಕೊಪ್ಪ, ರಾಘವೇಂದ್ರ ನರಗುಂದ, ಶರಣಯ್ಯ ಹಿರೇಮಠ, ಶಿವಣ್ಣ ಹಟ್ಟಿ, ನಿವಾಸಿಗಳಾದ ಕಾಸೀಂ, ಸಂಜೀವ, ಪಾಪಣ್ಣ ನಾಯಕ, ಸಿದ್ದು ಭಾಗ್ಯನಗರ, ಕುಮಾರ, ಜೀಲಾನಸಾಬ್, ನಜೀರಸಾಬ್ ಚಿಲವಾಡ್ಗಿ, ಮುರುಳೀಧರ ಭಜಂತ್ರಿ, ರಾಯನಗೌಡ, ಮಂಜುನಾಥ ಗುಗ್ರಿ, ಮೈಲಾರಪ್ಪ ವಕೀಲರು, ಯಾಕುಬ್ ಸಾಬ್, ಗೈಬು ಮೇಸ್ತ್ರಿ, ನಾಗಪ್ಪ ಚಳ್ಳಾರಿ ಸೇರಿ ಇತರರು ಇದ್ದರು.
•ದೇವಕ್ಕ ಲಕ್ಷ್ಮಣ ಕಂದಾರಿ,ವಾರ್ಡ್ ಸದಸ್ಯೆ
•ಪಾಪಣ್ಣ ನಾಯಕ, ಸ್ಥಳೀಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.