![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 21, 2022, 12:27 PM IST
ಗಂಗಾವತಿ: ಶಿವಮೊಗ್ಗ ನಗರದ ಯುವಕ ಹರ್ಷವರ್ಧನ್ ಕೊಲೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಪಾತ್ರ ಎದ್ದು ಕಾಣುತ್ತಿದ್ದು ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ಬಂಧಿಸುವಂತೆ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅವರು ಸೋಮವಾರ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವ ಈಶ್ವರಪ್ಪನವರ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭಾರತದ ಹೆಮ್ಮೆಯ ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸುವುದಾಗಿ ಹೇಳಿಕೆ ನೀಡಿರುವ ಈಶ್ವರಪ್ಪ ಒಬ್ಬ ದೇಶದ್ರೋಹಿಯಾಗಿದ್ದಾರೆ .ಸರಕಾರ ಅವರ ಪರವಾಗಿ ನಿಂತಿರುವುದು ಖಂಡನೀಯ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು .ಶಿವಮೊಗ್ಗದಲ್ಲಿ ಜರುಗಿದ ಹರ್ಷ ಅವರ ಕೊಲೆ ಪ್ರಕರಣವನ್ನು ನೇರವಾಗಿ ಮುಸಲ್ಮಾನ ಯುವಕರು ಮಾಡಿದ್ದಾರೆಂದು ಹೇಳುವ ಈಶ್ವರಪ್ಪ ಗಂಗಾವತಿಯಲ್ಲಿ ಮುಸ್ಲಿಂ ಯುವಕರಿಗೆ ಬಿಜೆಪಿ ಕಾರ್ಯಕರ್ತರು ಹೊಡಿಬಡಿಮಾಡಿ ಚೂರಿ ಇರಿತ ಮಾಡಿದ್ದಾರೆ ಇದು ಈಶ್ವರಪ್ಪನವರೇ ಕಣ್ಣಿಗೆ ಕಾಣಲಿಲ್ಲವೇ .ಆದ್ದರಿಂದ ಕೂಡಲೇ ರಾಜ್ಯಪಾಲರು ಸಚಿವ ಸಂಪುಟದಿಂದ ವಜಾ ಮಾಡಬೇಕು .ಅವರನ್ನು ಕೊಲೆ ಆರೋಪದಲ್ಲಿ ಬಂಧಿಸುವಂತೆ ಅನ್ಸಾರಿಯವರು ಒತ್ತಾಯಿಸಿದರು .
ಮಾಜಿ ಸಂಸದ ಎಸ್ ಶಿವರಾಮನಗೌಡ ಕಾಂಗ್ರೆಸ್ ಮುಖಂಡರಾದ ಶಾಮೀದ್ ಮನಿಯಾರ್ ,ಬ್ರೇಸ್ ಗೋನಾಳ್ ಮನೋಹರ್ ಸ್ವಾಮಿ ಫಕೀರಪ್ಪ ಯಮಿ ಸಲ್ಮಾ ಬಿಚ್ಗತ್ತಿ, ನೀಲಕಂಠಪ್ಪ ಹೊಸಳ್ಳಿ ,ಕೆ ರಾಘವೇಂದ್ರ, ಎಸ್ ಬಿ ಖಾದ್ರಿ ಅರ್ಜುನ್ ನಾಯಕ, ಸೋಮನಾಥ ಭಂಡಾರಿ ,ಹನುಮಂತಪ್ಪ ವಳಬಳ್ಳಾರಿ ,ಕಮ್ಲಿಬಾಬಾ ,ರೇಣುಕನಗೌಡ, ಅಂಬಿಗೇರ್ ಅಂಜಿನಪ್ಪ ಸೇರಿ ಅನೇಕರಿದ್ದರು .
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.