
ತಾಂಡ ನಿವಾಸಿಗಳನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ: ಎಚ್.ಆರ್.ಶ್ರೀನಾಥ
Team Udayavani, Mar 5, 2022, 5:54 PM IST

ಗಂಗಾವತಿ: ತಾಲೂಕಿನ ವಿರೂಪಾಪೂರ, ಸಂಗಾಪೂರ, ಮಲ್ಲಾಪೂರ ಮತ್ತು ಸೂರ್ಯನಾಯಕನ ತಾಂಡಗಳಲ್ಲಿ ಕಳೆದ 100 ವರ್ಷಗಳಿಂದ ವಾಸ ಮಾಡುತ್ತಿರುವ ಬುಡಕಟ್ಟು ಲಮಾಣಿ ಜನಾಂಗದವರ ಮನೆಗಳನ್ನು ತೆರವುಗೊಳಿಸಿ ಒಕ್ಕಲೆಬ್ಬಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಿದರೆ ಶಾಸಕರು ಮತ್ತು ಸರಕಾರದ ವಿರುದ್ಧ ತಾವು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಮಾಡುವುದಾಗಿ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅವರು ತಮ್ಮ ನಿವಾಸದಲ್ಲಿ ತಾಲೂಕಿನ ವಿವಿಧ ತಾಂಡಗಳ ಲಮಾಣಿ ಜನಾಂಗದವರು ಅರಣ್ಯ ಇಲಾಖೆಯವರ ದೌರ್ಜನ್ಯ ಖಂಡಿಸಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲಮಾಣಿ, ವಾಲ್ಮೀಕಿ, ಕುರುಬರು, ಗೊಲ್ಲ ಜನಾಂಗ ಮತ್ತು ಕಬ್ಬೇರ್ ಜನಾಂಗದವರು ಪ್ರಕೃತಿಯ ಮಕ್ಕಳಾಗಿದ್ದಾರೆ. ಇವರು ಅರಣ್ಯ, ಗುಡ್ಡಗಾಡು ನದಿ ಇವರ ಜೀವನದ ದಾರಿಯಾಗಿದೆ. ಶತಮಾನಗಳಿಂದ ಅಲ್ಲೇ ವಾಸ ಮಾಡುತ್ತಿದ್ದು ಕೆಲವು ಕಂದಾಯ ಗ್ರಾಮಗಳಾಗಿದ್ದರೆ. ಲಮಾಣಿ ತಾಂಡಗಳು ಮತ್ತು ಆಂಧ್ರ ಕ್ಯಾಂಪ್ಗಳು ಇನ್ನೂ ಕಂದಾಯ ಗ್ರಾಮಗಳಾಗಿಲ್ಲ. ಇದನ್ನೆ ನೆಪವಾಗಿಟ್ಟುಕೊಂಡು ಅರಣ್ಯ ಇಲಾಖೆಯವರು ಲಮಾಣಿ ಜನಾಂಗದವರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಸರಕಾರ ಕೂಡಲೇ ಗ್ರಾಮ ಅರಣ್ಯ ಸಮೀತಿ ಮೂಲಕ ಮನೆ ಮತ್ತು ಉಳುವ ಭೂಮಿಗೆ ಹಕ್ಕು ಪತ್ರ ವಿತರಿಸಬೇಕು. ಇಲ್ಲದಿದ್ದರೆ ನಿರಾಶ್ರಿತ ಜತೆಗೂಡಿ ಸರಕಾರದ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಿನ ವಿರೂಪಾಪೂರ, ಸಂಗಾಪೂರ, ಮಲ್ಲಾಪೂರ ಮತ್ತು ಸೂರ್ಯನಾಯಕನ ತಾಂಡಗಳ ನಿವಾಸಿಗಳಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.