BJP; ಮರಳಿ ಬಿಜೆಪಿ ಸೇರಿದ ಮಾಜಿ ಸಂಸದ ಶಿವರಾಮೇಗೌಡ
Team Udayavani, Apr 5, 2024, 3:28 PM IST
ಕೊಪ್ಪಳ: ಹತ್ತು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಶಿವರಾಮೇಗೌಡ ಅವರು ಶುಕ್ರವಾರ ಮರಳಿ ಬಿಜೆಪಿಗೆ ಸೇರ್ಪಡೆಯಾದರು.
ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು.
ಶಿವರಾಮೇಗೌಡ ಅವರು 2009 ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಭೂತ ಪೂರ್ವ ಗೆಲುವು ಕಂಡಿದ್ದರು. ಆದರೆ 2014 ರಲ್ಲಿ ಅವರಿಗೆ ಬಿಜೆಪಿ ಎಂಪಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಳೆದ 10 ವರ್ಷ ಕಾಂಗ್ರೆಸ್ ನಲ್ಲಿ ಸಂಘಟನೆ ಕೆಲಸ ಮಾಡಿದ್ದರು. ಈಗ ಮತ್ತೆ ಬಿಜೆಪಿಗೆ ಮರಳಿದ್ದಾರೆ.
ಪಕ್ಷಕ್ಕೆ ಸ್ವಾಗತಿಸಿದ ಸಮಯದಲ್ಲಿ ಮಾಜಿ ಸಿಎಂ ಬಿಎಸ್ವೈ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ ರವಿ ಸೇರಿ ಹಲವು ನಾಯಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.