ಸಾಮಾಜಿಕ ಅಂತರ ಮರೆತು ಬಟ್ಟೆ ಅಂಗಡಿಗಳಲ್ಲಿ ಜನದಟ್ಟಣೆ 40ಸಾವಿರ ರೂ.ದಂಡ


Team Udayavani, May 8, 2020, 10:07 PM IST

ಸಾಮಾಜಿಕ ಅಂತರ ಮರೆತು ಬಟ್ಟೆ ಅಂಗಡಿಗಳಲ್ಲಿ ಜನದಟ್ಟಣೆ 40ಸಾವಿರ ರೂ.ದಂಡ

ಗಂಗಾವತಿ: ಕೊವಿಡ್-19 ಸಂಬಂಧಿತ ಸಾಮಾಜಿಕ ಅಂತರದ ಮುನ್ನೆಚ್ಚರಿಕೆಯನ್ನು ಮರೆತ ಇಲ್ಲಿಯ ಬಟ್ಟೆ ಅಂಗಡಿ ಮಾಲಿಕರು ತುಂಬು ಗ್ರಾಹಕರ ನಡುವೆ ಭರ್ಜರಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯನ್ನು ಗ್ರೀನ್ ಝೋನ್ ಗೆ ಸೇರ್ಪಡೆ ಮಾಡಿದ ನಂತರ ಗಂಗಾವತಿಯಲ್ಲಿ ವ್ಯಾಪಾರ ವಹಿವಾಟು ನಡಸಲು ಲಾಕ್ ಡೌನ್ ಸಡಿಲಿಸಲಾಗಿದೆ. ಸಾಮಾಜಿಕ ಅಂತರ ಮತ್ತು ಕೋವಿಡ್ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆ ಮಧ್ಯ ನಗರದಲ್ಲಿ ಬಟ್ಟೆ ಅಂಗಡಿಗಳನ್ನು ಆರಂಭಿಸಲು ಪರವಾನಿಗೆ ನೀಡಲಾಗಿದೆ.

ಆದರೆ ಈ ನಿಯಮಗಳನ್ನೆಲ್ಲಾ ಗಾಳಿಗೆ ತೂರಿರುವ ಇಲ್ಲಿನ ಬಟ್ಟೆ ಅಂಗಡಿ ಮಾಲಿಕರು ಕಳೆದ ಒಂದು ವಾರದಿಂದ ಅಂಗಡಿ ಆರಂಭಿಸಿದ್ದು, ಮಾಸ್ಕ್ ಸ್ಯಾನಿಟೈಜರ್ ಸೇರಿ ಗ್ರಾಹಕರ ಮತ್ತು ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಯಾವುದೆ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲ.

ಇನ್ನೊಂದೆಡೆ ಬಟ್ಟೆ ಅಂಗಡಿಗಳಲ್ಲಿ ಗ್ರಾಹಕರ ದಟ್ಟಣೆಯೂ ಹೆಚ್ಚಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ಜನರು ಬಟ್ಟೆ ಖರೀದಿಗೆ ಆಗಮಿಸುತ್ತಿದ್ದಾರೆ ಮತ್ತು ಇವರಲ್ಲಿ ಯಾರಾದರೂ ಸೋಂಕು ಪೀಡಿತರಿದ್ದರೆ ಅಥವಾ ಸೋಂಕುಪೀಡಿತರೊಂದಿಗೆ ಸಂಪರ್ಕ ಹೊಂದಿದವರಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಆದರೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಇಲ್ಲಿನ ಬಟ್ಟೆ ವ್ಯಾಪಾರಿಗಳು ಕೇವಲ ಲಾಭದ ದೃಷ್ಟಿಯಿಂದ ವ್ಯಾಪಾರ ಮಾಡುತ್ತಿರುವುದು ಕಳವಳಕಾರಿ ವಿಷಯವಾಗಿದೆ.

ಬಟ್ಟೆ ಅಂಗಡಿ ಬಂದ್ ಗೆ ಆಗ್ರಹ: ನಗರದಲ್ಲಿ ಬಟ್ಟೆ ಅಂಗಡಿಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೆ ಅಂಗಡಿಗಳಲ್ಲಿ ನೂರಾರು ಜನರು ಸೇರುತ್ತಿದ್ದು ಮುಂದೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಿರಾಣಿ ಮತ್ತು ಅಗತ್ಯ ವಸ್ತುಗಳ ಅಂಗಡಿಗಳ ಹೊರತು ಬಟ್ಟೆ ಅಂಗಡಿ ಸೇರಿ ಇತರೆ ಅಂಗಡಿ ಬಂದ್ ಮಾಡಿಸುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ.

40ಸಾವಿರ ರೂ.ದಂಡ

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷ್ಯ ಮಾಡಿ ಜನದಟ್ಟಣೆಯಿಂದ ಬಟ್ಟೆ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು ಹತ್ತು ಬಟ್ಟೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಈ ಅಂಗಡಿಗಳ ಮಾಲಿಕರಿಂದ 40 ಸಾವಿರ ರೂ.ದಂಡ ಪಡೆದುಕೊಂಡಿದ್ದಾರೆ. ಈತನ್ಮಧ್ಯೆ ಬಟ್ಟೆ ಅಂಗಡಿಗಳನ್ನು ಬಂದ್ ಮಾಡುವಂತೆ ವಿವಿಧ ಸಂಘಟನೆಯ ಮುಖಂಡರು ಒತ್ತಾಯಿಸಿರುವುದು ಹೌದು ಎಂದು ಪೌರಾಯುಕ್ತ ಗಂಗಾಧರ ಅವರು ಉದಯವಾಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.