![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 25, 2023, 4:52 PM IST
ಗಂಗಾವತಿ: ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ನಗರದ 17ನೇ ವಾರ್ಡ್ ನಲ್ಲಿ ನಡೆದಿದೆ. ಖುಷಿ (08) ಎಂಬ ಬಾಲಕಿ ಅಂಗಡಿಗೆ ತೆರಳಿ ತಿನಿಸುಗಳನ್ನು ತೆಗೆದುಕೊಂಡು ರಸ್ತೆಯಲ್ಲಿ ತೆರಳುವ ಸಂದರ್ಭದಲ್ಲಿ ಎರಡು ಬೀದಿ ನಾಯಿಗಳು ದಾಳಿ ನಡೆಸಿ ಎಳೆದಾಡಿದ್ದು, ಕಾಲು ಮತ್ತು ದೇಹದ ಇತರ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಕೂಡಲೇ ಅಕ್ಕಪಕ್ಕದವರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಇದೇ ರಸ್ತೆಯಲ್ಲಿ ಹಲವು ಮಕ್ಕಳಿಗೆ ಮತ್ತು ಹಿರಿಯರಿಗೆ ಒಂದೇ ವಾರದಲ್ಲಿ ಬೀದಿ ನಾಯಿಗಳು ಕಚ್ಚಿ ತೀವ್ರ ಗಾಯಗೊಳಿಸಿವೆ. ಬಾಲಕಿ ಖುಷಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಎಂಟು ಹೊಲಿಗೆಗಳನ್ನು ಹಾಕಲಾಗಿದೆ. ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಅವುಗಳನ್ನು ಸೆರೆಹಿಡಿದು ಬೇರೆ ಕಡೆ ಸ್ಥಳಾಂತರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ನಗರದ ನೀಲಕಂಠೇಶ್ವರ ಕ್ಯಾಂಪ್ ಹೊಸಳ್ಳಿ ರಸ್ತೆ ಜೂನಿಯರ್ ಕಾಲೇಜ್ ಗ್ರೌಂಡ್ ದುರ್ಗಮ್ಮನ ಹಳ್ಳ ಹೀಗೆ ಹಲವು ಕಡೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಮಾಂಸ, ತುಂಡುಗಳನ್ನು ಎಸೆಯುವ ಪರಿಣಾಮ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದೆ. ನಗರಸಭೆಯವರು ಕೂಡಲೇ ನಾಯಿಗಳನ್ನು ಸೆರೆಹಿಡಿಳದು ಬೇರಡೆಗೆ ಸ್ಥಳಾಂತರಿಸುವಂತೆ ಸಂಘ ಸಂಸ್ಥೆಯವರು ಒತ್ತಾಯಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.