Gangavathi; ಆರ್ಯವೈಶ್ಯ ಸಮಾಜದ ಅಧ್ಯಕ್ಷರ ಪದಚ್ಯುತಿ ಅನಿರ್ಧಿಷ್ಟ ಹೋರಾಟಕ್ಕೆ ತಿರುವು


Team Udayavani, Aug 25, 2024, 10:51 AM IST

Gangavathi; ಆರ್ಯವೈಶ್ಯ ಸಮಾಜದ ಅಧ್ಯಕ್ಷರ ಪದಚ್ಯುತಿ ಅನಿರ್ಧಿಷ್ಟ ಹೋರಾಟಕ್ಕೆ ತಿರುವು

ಗಂಗಾವತಿ: ಗಂಗಾವತಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರ ಪದಚ್ಯುತಿಗಾಗಿ ಸಮಾಜದ ಪ್ರಮುಖರು ನಗರೇಶ್ವರ ದೇವಸ್ಥಾನದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟ ಹೋರಾಟಕ್ಕೆ ಮಹತ್ವದ ತಿರುವು ಬಂದಿದೆ.

ರವಿವಾರ ಬೆಳ್ಳಿಗ್ಗೆ ನಗರೇಶ್ವರ ದೇವಾಲದಯದಲ್ಲಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟ ಹೋರಾಟ ಸ್ಥಳದಲ್ಲಿ ಸಮಾಜದವರ ಸಮ್ಮುಖದಲ್ಲಿ ರೂಪ ರಾಯಚೂರು ಅವರು ತಾವು ಇಂದಿನಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾಗಿ ಸ್ವಯಂ ಘೋಷಿಸಿಕೊಂಡರು.

ಈ ಸಂದರ್ಭದಲ್ಲಿ ತಾವು ಸ್ವಯಂ ಘೋಷಿತ ಅಧ್ಯಕ್ಷರಾಗಿದ್ದು ಮುಂಬರುವ ದಿನಗಳಲ್ಲಿ ಸಮಸ್ತ ಆರ್ಯವೈಶ್ಯ ಸಮಾಜದ ಹಿರಿಯರು, ಪ್ರಮುಖರನ್ನು ಕಂಡು ಆಶೀರ್ವಾದ, ಸಲಹೆ ಮತ್ತು ಮಾರ್ಗದರ್ಶನ ಪಡೆದು ಸಮಾಜವನ್ನು ಸಂಘಟಿಸಿ ಅಭಿವೃದ್ಧಿ ಪಡಿಸಲಾಗುತ್ತದೆ. ಕಳೆದ 16 ವರ್ಷಗಳ ಹಿಂದೆಯೂ ದರೋಜಿ ಶ್ರೀರಂಗ ಅವರು ಸಹ ಸ್ವಯಂ ಘೋಷಿತ ಅಧ್ಯಕ್ಷರಾಗಿದ್ದು ಇದುವರೆಗೂ ಸಮಾಜದ ಮಹಾಸಭೆ ಕರೆದಿಲ್ಲ. ಲೆಕ್ಕಪತ್ರ ಒಪ್ಪಿಸಿಲ್ಲ. ಇದನ್ನು ಪ್ರತಿಭಟಿಸಿ ಅಧ್ಯಕ್ಷರ ಪದಚ್ಯುತಿ ಹಾಗೂ ಲೆಕ್ಕಪತ್ರ ಒಪ್ಪಿಸುವಂತೆ ನಗರೇಶ್ವರ ದೇವಾಲಯದ ಹೊರ ಆವರಣದಲ್ಲಿ ಕಳೆದ 20 ದಿನಗಳಿಂದ ಸಮಾಜದ ಮುಖಂಡರಾದ ದರೋಜಿ ವಸಂತಕುಮಾರ, ರಟ್ಟಿಹಳ್ಳಿ ಜಗದೀಶ ಹಾಗೂ ಸಿ.ಭಾಗ್ಯಮ್ಮ ಇತರೆ ಮುಖಂಡರ ನೇತೃತ್ವದಲ್ಲಿ ಶಾಂತಿಯುತ ಅನಿರ್ಧಿಷ್ಟ ಧರಣಿ ನಡೆಸಲಾಗುತ್ತಿದೆ. ಆದರೆ ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದ್ದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಮಾತಿಗೂ ದರೋಜಿ ಶ್ರೀರಂಗ ಅವರು ಕಿಮ್ಮತ್ತು ನೀಡುತ್ತಿಲ್ಲವಾದ್ದರಿಂದ ಸಮಾಜದ ಗೌರವ ಕಾಪಾಡಲು ಸ್ವಯಂ ಆಗಿ ಅಧ್ಯಕ್ಷರಾಗಿ ಘೋಷಣೆ ಮಾಡಿಕೊಂಡಿದ್ದು ಮುಂಬರುವ ದಿನಗಳಲ್ಲಿ ಇತರೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ ಎಂದರು.

ವಿಶೇಷ: ಆರ್ಯವೈಶ್ಯ ಸಮಾಜದ ಅಧ್ಯಕ್ಷರ ಪದಚ್ಯುತಿಗೆ ಆಗ್ರಹಿಸಿ ನಗರೇಶ್ವರ ನಡೆಸುತ್ತಿದ್ದ ಅನಿರ್ಧಿಷ್ಟ ಧರಣಿ ಹೋರಾಟದ ಸ್ಥಳಕ್ಕೆ ಆಗಮಿಸಿದ ರೂಪ ರಾಯಚೂರು ಅವರು ತಮ್ಮ ಮನೆಯಿಂದ ರಾಷ್ಟ್ರಧ್ವಜಾ, ಹಾರ ಮತ್ತು ಶಾಲು ತಂದು ಧರಣಿ ಸ್ಥಳದಲ್ಲಿ ತಾನು ಆರ್ಯವೈಶ್ಯ ಸಮಾಜದ ಸ್ವಯಂಘೋಷಿತ ಅಧ್ಯಕ್ಷರೆಂದು ಘೋಷಣೆ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಿಠಾಗಾರ ವೀರಭದ್ರಪ್ಪ, ಭಾಗ್ಯಮ್ಮ, ಚಂದ್ರಶೇಖರ, ಪ್ರಸಾದ, ಪಾನಘಂಟಿ ,ರಟ್ಟಿಹಳ್ಳಿ ಜಗದೀಶ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.