2015 ರಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣ: ಅಪರಾಧಿಗೆ 6 ವರ್ಷ ಜೈಲು, 15 ಸಾವಿರ ದಂಡ
ಕಿಷ್ಕಿಂಧಾ ಅಂಜನಾದ್ರಿ ಬಳಿ 2015 ರಲ್ಲಿ ನಡೆದ ಪ್ರಕರಣ
Team Udayavani, May 29, 2024, 8:24 PM IST
ಗಂಗಾವತಿ: ಮಹಿಳೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗೆ 06 ವರ್ಷ ಜೈಲು ಮತ್ತು 15 ಸಾವಿರ ರೂ.ಗಳ ದಂಡ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ, ಶಿಕ್ಷೆ ಘೋಷಣೆ ಮಾಡಿ ತೀರ್ಪು ನೀಡಿದ್ದಾರೆ.
ತಾಲೂಕಿ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಬಳಿ ಕ್ಷುಲ್ಲಕ ವಿಚಾರದಲ್ಲಿ ಎಳೆನೀರು ವ್ಯಾಪಾರ ಮಾಡಿಕೊಂಡಿದ್ದ ದೇವರಾಜ ಇವರ ಅಕ್ಕನ (ಮಹಿಳೆ) ಮೇಲೆ ಅಪರಾಧಿ ಬಸವರಾಜ ಕಂದಾರಿ ಎಳೆನೀರು ಕಡಿಯುವ ಮಚ್ಚಿನಿಂದ ಹಲ್ಲೇ ಮಾಡಿ ತೀವ್ರ ಸ್ವರೂಪದ ಗಾಯೊಳಿಸಿದ ಆರೋಪ ಸಾಬಿತಾಗಿದ್ದು ಕೊಪ್ಪಳದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಅಪರಾಧಿಗೆ ಶಿಕ್ಷೆ ವಿಧಿಸಿರುತ್ತಾರೆ.
ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದಲ್ಲಿ ಎಳೆನೀರು ಮಾರಿಕೊಂಡು ವಾಸವಾಗಿದ್ದ ಮಹಿಳೆಯ ಮೇಲೆ ಅಪರಾಧಿ ಬಸವರಾಜ ಕಂದಾರಿ ಇತನು ಅಂಗಡಿಯ ಪಕ್ಕದಲ್ಲಿರುವ ಮನೆಗೆ ಬರುವುದು ಹೋಗುವುದು ಮಾಡುತ್ತಿದ್ದು ಮಹಿಳೆ ಅಪರಾಧಿ ಬಸವರಾಜನಿಗೆ ಬರದಂತೆ ತಾಕೀತು ಮಾಡಿದ್ದನ್ನೆ ನೆಪ ಮಾಡಿಕೊಂಡು ಮಹಿಳೆಯೊಂದಿಗೆ ವಾದ ಮಾಡುತ್ತಾ ಅಂಗಡಿಯಲ್ಲಿದ್ದ ಎಳೆನೀರು ಕಡಿಯುವ ಮಚ್ಚನ್ನು ತೆಗೆದುಕೊಂಡು ದೇವಮ್ಮಳ ಎಡಗೈ, ಬಲಗೈಗೆ, ಮೂಗಿನ ಮೇಲೆ ಹಾಗೂ ಹಣೆಯ ಮೇಲೆ ಹೊಡೆದು ಗಾಯಗೊಳಿಸಿದ ಪ್ರಕರಣ ಜರುಗಿ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅಂದಿನ ಡಿಎಸ್ಪಿ ವಿನ್ಸೆಂಟ್ ಶಾಂತಕುಮಾರ ತನಿಖೆ ಮಾಡಿ ಆರೋಪಿಯ ಮೇಲೆ ದೋಷಾರೋಪಣೆಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಹಾಂತಪ್ಪ ಎ. ಪಾಟೀಲ, ನಾಗರಾಜ್ ಆಚಾರ್, ಸವಿತಾ ಎಂ ಸಿಗ್ಲಿ, ಟಿ. ಅಂಬಣ್ಣ ಹಾಗೂ ಬಂಡಿ ಅಪರ್ಣಾ ಮನೋಹರ ಪ್ರಕರಣ ನಡೆಸಿದ್ದರು.
ಇದನ್ನೂ ಓದಿ: Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.