ಹನಮಸಾಗರ ಗ್ರಾಪಂ ಆಡಳಿತ ನಿಷ್ಕ್ರಿಯ


Team Udayavani, Dec 28, 2019, 2:31 PM IST

kopala-tdy-2

ಹನಮಸಾಗರ: ಜಿಲ್ಲೆಯೇ ಅತಿ ದೊಡ್ಡ ಗ್ರಾಮ ಪಂಚಾಯತ್‌ ಎಂಬ ಹಣೆಪಟ್ಟಿ ಹೊಂದಿರುವ ಹನುಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲದೇ ಆಡಳಿತ ಯಂತ್ರ ಸ್ಥಗಿತಗೊಂಡಾಗಿದ್ದು, ಸಾರ್ವಜನಿಕರು ಅಗತ್ಯ ಕೆಲಸಗಳಿಗಾಗಿ ಪರದಾಡುವಂತಾಗಿದೆ. ಗ್ರಾಪಂನಲ್ಲಿ ಪಿಡಿಒ ಇಲ್ಲದ ಕಾರಣ ಸಾರ್ವಜನಿಕರು ಮನೆ ಉತಾರ, ಕಟ್ಟಡ ಪರವಾನಗಿ, ಜಿಪಿಎಸ್‌ ಇತ್ಯಾದಿ ಕೆಲಸ ಕಾರ್ಯಗಳಿಗೆ ನಿತ್ಯ 5-6 ಬಾರಿ ಅಲೆದಾಡುವಂತಾಗಿದೆ. ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ಸಾರ್ವಜನಿಕರು ಗ್ರಾಪಂಗೆ ಎಡತಾಕುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಪಿಡಿಒ ಇಲ್ಲ, ಬಂದ ಮೇಲೆ ಬನ್ನಿ ಎಂದು ಗ್ರಾಪಂ ಸಿಬ್ಬಂದಿಯಿಂದ ಸಿದ್ಧ ಉತ್ತರ ಸಿಗುತ್ತದೆ.

ಒಂದು ವಾರದ ಹಿಂದೆ ಪಿಡಿಒ ದೇವೇಂದ್ರ ಕಮತರ ಅವರ ಬದಲಾಗಿ ನಿಂಗಪ್ಪ ಮೂಲಿಮನಿ ಎನ್ನುವವರು ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ ವಹಿಸಿಕೊಂಡ ಬಳಿಕ ಅವರು ಮರಳಿ ಪಂಚಾಯತ್‌ ಕಡೆ ತಲೆಯನ್ನೇ ಹಾಕಿಲ್ಲ. ಪಂಚಾಯತಿಯಲ್ಲಿ ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಈ ಹಿಂದೆಯೂ ಪಿಡಿಒ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಪಿಡಿಒ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ತಿಳಿಸಿದ್ದರು. ಆಗಲೂ ಅವರು ಒಂದು ದಿನ ಅಧಿಕಾರ ವಹಿಸಿಕೊಂಡು ನಂತರ ಬರಲೇ ಇಲ್ಲ. ದಿಢೀರನೇ ಈ ಮೊದಲಿನ ಪಿಡಿಒ ಅವರು ವರ್ಗಾವಣೆಯಾಗಿದ್ದಾರೆ.

ಅವರ ಸ್ಥಾನಕ್ಕೆ ನಿಂಗಪ್ಪ ಮೂಲಿಮನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರಭಾರ ಅಧಿಕಾರ ವಹಿಸಿಕೊಂಡಿರುವ ಜಹಗೀರ ಗುಡದೂರ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಮಾತನಾಡಿ, ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕಾರವಹಿಸಿಕೊಂಡಿದ್ದೆ. ಆದರೆ ತಾತ್ಕಾಲಿಕವಾಗಿ ಬೇಡ ಎಂದು ತಿಳಿಸಿದ್ದರಿಂದ ಪುನಃ ಪಂಚಾಯಿತಿಗೆ ತೆರಳಿಲ್ಲ ಎಂದು ಹೇಳಿದರು.

ಅಧಿಕಾರಿಗಳ ಈ ನಡೆ ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿದೆ. ಹನುಮಸಾಗರ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ನಿಯೋಜಿಸಿ ಅವರಿಗೆ ಸಂಪೂರ್ಣ ಅಧಿಕಾರ ಹಸ್ತಾಂತರಿಸುವ ಮೂಲಕ ಕುಂಠಿತಗೊಂಡಿರುವ ಗ್ರಾಪಂ ಕಾರ್ಯಗಳಿಗೆ ವೇಗ ನೀಡಬೇಕು. ಇಲ್ಲವಾದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಪ್ರಸ್ತುತ ಪಿಡಿಒ ದೇವೆಂದ್ರ ಕಮತರ ವೈದ್ಯಕೀಯ ರಜೆ ಮೇಲೆ ತೆರಳಿದ್ದು, ಬಂದ ಬಳಿಕ ಅವರು ಮುಂದುವರಿಯುತ್ತಾರೆ. ಪಿಡಿಒ ನಿಂಗಪ್ಪ ಮೂಲಿಮನಿ ಅವರು ಅದೇ ಪಂಚಾಯಿತಿಯಲ್ಲಿ ಅಮಾನತು ಆಗಿದ್ದರಿಂದ ಅಲ್ಲಿ ಪುನಃ ನೇಮಿಸಲು ಬರುವುದಿಲ್ಲ. ಆದ್ದರಿಂದ ತಾತ್ಕಾಲಿತವಾಗಿ ಪ್ರಭಾರಿಯಾಗಿ ಚಳಗೇರಾ ಪಿಡಿಒ ಬಸವರಾಜ ಸಂಕನಾಳ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಸೋಮವಾರ ಅವರು ಅಧಿಕಾರ ಸ್ವೀಕರಿಸುವರು. –ತಿಮ್ಮಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಕುಷ್ಟಗಿ

 

-ವಸಂತ ಶಿನ್ನೂರು

ಟಾಪ್ ನ್ಯೂಸ್

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.