Kushtagi: ನವಿಲು ಗರಿಯಿಂದ ಮಹಿಳೆಗೆ ಹಲ್ಲೆ; ದೂರು ದಾಖಲು
Team Udayavani, Jul 31, 2023, 2:23 PM IST
ಕುಷ್ಟಗಿ: ಮೊಹರಂ ಕತ್ತಲ ರಾತ್ರಿ ಅಲಾಯಿ ದೇವರ ಮುಂದೆ ಮಳೆ-ಬೆಳೆ ಕುರಿತು ಹೇಳಿಕೆ ಸಂದರ್ಭದಲ್ಲಿ ನೆರೆದ ಜನಸ್ತೋಮದ ಮದ್ಯೆ ವ್ಯಕ್ತಿಯೋರ್ವ ನವಿಲು ಗರಿಯಿಂದ ಏಕಾಏಕಿ ಹಲ್ಲೆ ನಡೆಸಿದ ವಿಲಕ್ಷಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಲಾಯಿ ದೇವರು ಅಶುರ್ಖಾನ ಬಳಿ ದೇವರನ್ನು ಹಿಡಿಯುವ ಹಸನಸಾಬ್ ಬೇವಿನಕಟ್ಟಿ ಭಕ್ತಾಧಿಗಳಿಗೆ ಫಲ ಆಶೀರ್ವಾದ ನೀಡುವ ಸಂದರ್ಭದಲ್ಲಿ ಅದೇ ಗ್ರಾಮದ ಮಂಜುನಾಥ ಹಾಬಲಕಟ್ಟಿ ಏಕಾಏಕಿ ನುಗ್ಗಿ ನವಿಲು ಗರಿಯಿಂದ ಗ್ರಾಮದ ವಿವಾಹಿತ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿದ್ದಲ್ಲದೇ ಸೀರೆ ಹಿಡಿದು ಎಳೆದಾಡಲು ಯತ್ನಿಸಿದ್ದಾನೆ. ಅದೇ ಸಂದರ್ಭದಲ್ಲಿ ಸ್ಥಳೀಯರು ಮದ್ಯೆ ಪ್ರವೇಶಿಸಿಸಿ ನಿಯಂತ್ರಿಸಿದ್ದರು.
ಸಾರ್ವಜನಿಕರ ಮಧ್ಯೆ ಅವಮಾನಿಸಿದ್ದು, ಜಾತಿ ನಿಂದನೆ ಮಾಡಿದ ಹಿನ್ನೆಲೆ ನೊಂದ ಮಹಿಳೆ ಮಂಜುನಾಥ ಹಾಬಲಕಟ್ಟಿ ಹಾಗೂ ಈತನಿಗೆ ಸಾಥ್ ನೀಡಿದ ಮಲ್ಲಿಕಾರ್ಜುನ ಬೂದಿಹಾಳ ಎಂಬವರ ವಿರುದ್ದ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಆರೋಪಿಗಳ ವಿರುದ್ಧ ಹನುಮಸಾಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323, 324, 353, 504 ಮತ್ತು ಎಸ್ಸಿ, ಎಸ್ಟಿ ಕಾಯ್ದೆ ಅಡಿ ದೂರು ದಾಖಲಾಗಿದೆ ಎಂದು ಪಿಎಸೈ ಅಶೋಕ ಬೇವೂರು ತಿಳಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.