ಧೈರ್ಯವಾಗಿರಿ ಎಂದವನು ಮರಳಿ ಬರಲಿಲ್ಲ

•ಯುದ್ಧಭೂಮಿಯಲ್ಲಿ ಪ್ರಾಣ ಬಿಟ್ಟ ಮಲ್ಲಯ್ಯ•ಅಳವಂಡಿ ಹೆಮ್ಮೆಯ ಪುತ್ರನ ಸ್ಮರಣೆ

Team Udayavani, Jul 26, 2019, 9:04 AM IST

kolar-tdy-1

ಕೊಪ್ಪಳ: ಅಳವಂಡಿಯ ಹುತಾತ್ಮ ಯೋಧ ಮಲ್ಲಯ್ಯ ಅವರ ಮನೆ.

ಕೊಪ್ಪಳ: ಕಾರ್ಗಿಲ್ ಯುದ್ಧದ ಸಿದ್ಧತೆ ನಡೆದಿದೆ. ಭಾರತ ಮಾತೆಯ ಸೇವೆ ಮಾಡಲು ನನಗೆ ಅವಕಾಶ ಒದಗಿ ಬಂದಿದೆ. ನೀವೆಲ್ಲರೂ ಕ್ಷೇಮದಿಂದಿರಿ, ನಾನೂ ಕ್ಷೇಮವಾಗಿದ್ದೇನೆಂದು ತಾಯಿಗೆ ಕೊನೆಯದಾಗಿ ಪತ್ರ ಬರೆದಿದ್ದ ವೀರ ಯೋಧ ಮಲ್ಲಯ್ಯ ಮೇಗಳಮಠ ಅವರು ಯುದ್ಧದಲ್ಲಿ ಹುತಾತ್ಮರಾಗಿ ದೇಶಕ್ಕೆ ಬೆಳಕಾಗಿದ್ದಾರೆ.

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಚನ್ನಬಸಯ್ಯ, ಗಂಗಮ್ಮ ಅವರ ಪುತ್ರ, 1-6-1962ರಲ್ಲಿ ಜನಿಸಿದ ಅವರು ಹೈಸ್ಕೂಲ್ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದಿದ್ದರು. ದೇಶ ಸೇವೆ ಮಾಡಬೇಕು, ಭಾರತ ಮಾತೆಗೆ ನನ್ನ ಸೇವೆ ಸಲ್ಲಿಸಬೇಕೆಂಬ ಮಹದಾಸೆಯಿಂದ ಮಲ್ಲಯ್ಯ ಅವರು ಮೊದಲು ಸಿಂಗಟಾಲೂರುನಲ್ಲಿ ನಡೆದ ಸೇನಾ ಭರ್ತಿಗೆ ತೆರಳಿದ್ದರಂತೆ. ಆದರೆ ಅಲ್ಲಿ ಸೇನಾ ಭರ್ತಿ ಮುಗಿದಿದ್ದರಿಂದ ಪುನಃ ಹೊಸಪೇಟೆ ಭಾಗದಲ್ಲಿ ನಡೆದ ಸೇನಾ ಭರ್ತಿಯಲ್ಲಿ ನೇಮಕ ಹೊಂದಿ ದೇಶ ಸೇವೆಗೆ ತೆರಳಿದ್ದರು ಎಂದು ತಾಯಿ ಗಂಗಮ್ಮ ಗದ್ಗದಿತ ಧ್ವನಿಯಲ್ಲೇ ಮಾತನಾಡಿದರು.

ಮನೆಯಲ್ಲಿ ಬಡತನ, ಮಕ್ಕಳು ವಿದ್ಯಾವಂತರನ್ನಾಗಿ ಮಾಡಬೇಕೆಂದು ಹಗಲು-ರಾತ್ರಿ ಕಷ್ಟಪಟ್ಟು ನಾವು ಓದಿಸಿದ್ವಿ. ಮನೆ ಮನೆಗೆ ತೆರಳಿ ಹಿಟ್ಟು ಸಂಗ್ರಹಿಸಿ ಉಪ ಜೀವನ ಮಾಡಿದ್ವಿ. ನನ್ನ ಮಗ ಸೇನೆ ಸೇರಿದ ವಿಷಯ ನಮಗೆ ಹೇಳಿ ಹೋಗಿದ್ದ. ಅತಿ ಸಂತೋಷದಿಂದಲೇ ಮದುವೆ ಮಾಡಿದ್ವಿ. ಆದರೆ, ಕಾರ್ಗಿಲ್ ಯುದ್ಧ ನಡೆಯುವ ಮುನ್ನ ನಮಗೊಂದು ಪತ್ರ ಬರೆದು ನೀವೆಲ್ಲರೂ ಧೈರ್ಯವಾಗಿರಿ. ನಾನೂ ಕ್ಷೇಮವಾಗಿದ್ದೇನೆಂದು ಪತ್ರದಲ್ಲಿ ತಿಳಿಸಿದ್ದ ಎನ್ನುತ್ತಲೇ ಯೋಧನ ತಾಯಿ ಕಣ್ಣಾಲೆಗಳಲ್ಲಿ ನೀರು ತುಂಬಿಕೊಂಡಿದ್ದವು.

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾಗಿತ್ತು. ದೇಶದೆಲ್ಲೆಡೆ ಯುದ್ಧದ ಮಾತು ಮೊಳಗಿದ್ದವು. ಅದಾಗಲೇ ಹವಾಲ್ದಾರ್‌ ಹುದ್ದೆಯಿಂದ ಲಾಸ್‌ ಹವಾಲ್ದಾರ್‌ ಹುದ್ದೆಗೆ ಬಡ್ತಿ ಪಡೆದಿದ್ದ ಹುತಾತ್ಮ ಯೋಧ ಮಲ್ಲಯ್ಯ ಅವರು ಯುದ್ಧದಲ್ಲಿ ಹೋರಾಡಿ 02-07-1999ರಂದು ದೇಶ ಸೇವೆ ಮಾಡುತ್ತಲೇ ಹುತಾತ್ಮರಾದರು. ಈ ವಿಷಯ ಕುಟುಂಬ ಸದಸ್ಯರಿಗೆ ಸೇನಾ ಪಡೆ ಮಾಹಿತಿ ರವಾನಿಸಿ ಸಕಲ ಸರ್ಕಾರಿ ಗೌರವದೊಂದಿಗೆ ವೀರ ಯೋಧನ ದೇಹವನ್ನು ಬೆಂಗಳೂರಿಗೆ ತಂದು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತರಲಾಯಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಳವಂಡಿ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ತಂದು ಕುಟುಂಬಕ್ಕೆ ಅರ್ಪಿಸಿದರು. ಜಿಲ್ಲಾಡಳಿತ ಸರ್ಕಾರಿ ಗೌರವ ಸಲ್ಲಿಸಿ ಅಳವಂಡಿಯಲ್ಲಿ ಸಮಾಧಿ ಮಾಡಲಾಯಿತು. ಯೋಧನ ಅಸ್ತಿಯನ್ನು ಕೂಡಲಸಂಗಮದಲ್ಲಿ ಅರ್ಪಣೆ ಮಾಡಲಾಯಿತು.

ಇಂದಿಗೂ ಆ ಸಮಾಧಿಗೆ ಕುಟುಂಬ ವರ್ಗ ಸೇರಿದಂತೆ ಇತರರು ಪೂಜೆ ಸಲ್ಲಿಸಿ ನಮಿಸಿ ಬರುತ್ತಿದ್ದಾರೆ. ಹುತಾತ್ಮ ಯೋಧ ಮಲ್ಲಯ್ಯ ಹೋರಾಡಿದ ಸಂದರ್ಭವನ್ನು ಸ್ಮರಿಸುತ್ತಲೇ ಅವರಿಂದ ಪ್ರೇರೇಪಿತರಾಗಿ ಅಳವಂಡಿಯ ನಾಲ್ವರು ಯುವಕರು ಇಂದು ಸೇನೆ ಸೇರಿ ದೇಶದ ಗಡಿ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.