ಶಿಶುವಿನ ಪುನರುಜ್ಜೀವನ ಕಾರ್ಯಾಗಾರ
ಕಾರ್ಯಾಗಾರಗಳಲ್ಲಿ ಒಟ್ಟಾರೆ 54 ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೇರೆ ಬೇರೆ ಕಾಲೇಜುಗಳಿಂದ ಆಗಮಿಸಿದ್ದರು.
Team Udayavani, Dec 10, 2021, 6:24 PM IST
ಕೊಪ್ಪಳ: ಇಂಡಿಯನ್ ಪಿಡಿಯಾಟ್ರಿಕ್ ಅಸೋಸಿಯಷನ್ ಹಾಗೂ ಕೊಪ್ಪಳ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿಜಯನಗರ ಕಾರಪಿಡಿಕಾನ್ -2021ನೇ ಭಾರತೀಯ ಚಿಕ್ಕ ಮಕ್ಕಳ ವೈದ್ಯಕೀಯ ಸಂಘದ 40ನೇ ವಾರ್ಷಿಕ ಸಮ್ಮೇಳನದ ಜನಿಸಿದ ಶಿಶುವಿನ ಪುನರುಜ್ಜೀವನ ಕಾರ್ಯಾಗಾರ ಜರುಗಿತು.
ಕಾರ್ಯಾಗಾರವನ್ನು ಕಿಮ್ಸ್ ನಿರ್ದೇಶಕ ಡಾ| ವಿಜಯನಾಥ ಇಟಗಿ, ರಾಜ್ಯದ ಮಕ್ಕಳ ಸಂಘದ ಅಧ್ಯಕ್ಷ ಡಾ| ಅಶೋಕ ದಾತರ ಉದ್ಘಾಟಿಸಿದರು. ದೇಶದ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಿಕ್ಕಮಕ್ಕಳ ವೈದ್ಯರ ಜೊತೆ ಹುಟ್ಟಿದ ಶಿಶುಗಳ ಪುನರುಜ್ಜೀವನ ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ರಾಜ್ಯದ ಬೇರೆ ಬೇರೆ ವೈದ್ಯಕೀಯ ಕಾಲೇಜುಗಳಿಂದ ವಿವಿಧ ಸ್ಥರದಲ್ಲಿ ಇರುವ ಮಕ್ಕಳ ವೈದ್ಯರು ಈ ಕಾರ್ಯಾಗಾರದಲ್ಲಿ ತರಬೇತಿ ಪಡೆದರು. ಕಾರ್ಯಾಗಾರದಲ್ಲಿ ವಿಶೇಷ ಆಸಕ್ತಿವಹಿಸಿ ಕಿಮ್ಸ್ ಕಾಲೇಜಿನ ಪ್ರಸೂತಿ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರು
ಪಾಲ್ಗೊಂಡಿದ್ದರು.
ಕಾರ್ಯಾಗಾರಗಳಲ್ಲಿ ಒಟ್ಟಾರೆ 54 ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೇರೆ ಬೇರೆ ಕಾಲೇಜುಗಳಿಂದ ಆಗಮಿಸಿದ್ದರು. ಚಿಕ್ಕ ಮಕ್ಕಳ ವೈದ್ಯಕೀಯ ಸಂಘದ ವಾರ್ಷಿಕ ಸಮ್ಮೇಳನವು ಪ್ರಥಮ ಬಾರಿಗೆ ಕಲ್ಯಾಣ ಕರ್ನಾಟಕದ ಕಿಮ್ಸ್ ಹಾಗೂ ಹೊಸಪೇಟೆಯಲ್ಲಿ ನಡೆದಿದ್ದು ವಿಶೇಷವಾಗಿತ್ತು. ಕಾರ್ಯಾಗಾರದಲ್ಲಿ ಕಿಮ್ಸ್ ನಿರ್ದೇಶಕ ಡಾ| ವಿಜಯನಾಥ ಇಟಗಿ, ಪ್ರಾಂಶುಪಾಲ ಡಾ| ರಾಘವೇಂದ್ರ ಬಾಬು, ವಿಜಯನಗರ ಚಿಕ್ಕಮಕ್ಕಳ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಎಸ್.ಜಿ. ಯಟ್ಟಿಯವರ, ಕಿಮ್ಸ್ ಕೊಪ್ಪಳ ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥ ಗಿರೀಶ ಹಿರೆಮಠ, 1 ಡಾ| ವೇಣುಗೋಪಾಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಈಶ್ವರ ಸವಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ
ಗಂಗಾವತಿ: “ಬ್ಯಾಂಕ್ನಿಂದ ಎಲ್ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’
Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!
Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ
Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ
Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ
Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.