ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ


Team Udayavani, Jun 27, 2024, 9:54 AM IST

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಉದಯವಾಣಿ ಸಮಾಚಾರ
ಕಾರಟಗಿ: ಪಟ್ಟಣದ ಗ್ರಾಮದೇವತೆ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಆರಂಭಿಸುವ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಲಿನ ಅನಧಿಕೃತ ಗುಡಿಸಲು ಮತ್ತು ಶೆಡ್‌ಗಳನ್ನು ಪುರಸಭೆ ಸಿಬ್ಬಂದಿ ಜನರ ಸಹಕಾರದೊಂದಿಗೆ ಬುಧವಾರ ತೆರವು ಕಾರ್ಯ ಆರಂಭಿಸಿದರು.

ಕಳೆದ ಮೂರ್‍ನಾಲ್ಕು ತಿಂಗಳ ಹಿಂದೆ ದೇಗುಲ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ದೇಗುಲ ಸುತ್ತಲಿನ ಸ್ಥಳ ಪರಿಶೀಲನೆ ಬಳಿಕ ಸುತ್ತಲಿನ ಪ್ರದೇಶದಲ್ಲಿ ಅನಧಿಕೃತ ಶೆಡ್‌ ಹಾಗೂ ಗುಡಿಸಲು ತೆರವಿಗೆ ಸೂಚನೆ ನೀಡಿದ್ದರು.

ಇದೇ ವೇಳೆ ದೇವಿಕ್ಯಾಂಪ್‌ನ ಗುಡ್ಡದ ಬಳಿ ನಿವೇಶನ ನೀಡುವ ಭರವಸೆ ನೀಡಿ ತೆರವು ಕಾರ್ಯಕ್ಕೆ ಕಾಲಾವಕಾಶವನ್ನು
ಸಚಿವರು ನೀಡಿದ್ದರು. ಆದರೆ ನೀಡಿದ್ದ ಕಾಲಾವಕಾಶ ಮುಗಿದರೂ ನಿವಾಸಿಗಳ್ಯಾರು ತೆರವು ಕಾರ್ಯಕ್ಕೆ ಮುಂದಾಗಿರಲಿಲ್ಲ. ಅಲ್ಲದೆ ಅನಧಿಕೃತ ಶೆಡ್‌ ತೆರವಿಗೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಪಟ್ಟಣದ ವಿವಿಧ ಸಂಘಟನೆ, ಜನರು ಹಾಗೂ ಸರ್ವ ಧರ್ಮಿಯರು ತಾಲೂಕು ದಂಡಾಧಿಕಾರಿ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಮನವಿ ಸಲ್ಲಿಸಿದ್ದರು. ತೆರವು ಕಾರ್ಯಕ್ಕೆ ಬುಧವಾರ ಆಗಮಿಸಿದ ಬುಲ್ಡೊಜರ್‌ ವಾಹನಕ್ಕೆ ದೇಗುಲದ ಅರ್ಚಕ ಬಸವರಾಜ ಬಡಿಗೇರ ಪೂಜೆ ಸಲ್ಲಿಸಿದರು.

ನಂತರ ತೆರವು ಕಾರ್ಯ ಆರಂಭಗೊಂಡಿತು. ಮಂಗಳವಾರದಿಂದಲೇ ಅಲ್ಲಿನ ಕೆಲ ನಿವಾಸಿ ತಮ್ಮ ಗುಡಿಸಲು ಮತ್ತು ಶೆಡ್‌ಗಳನ್ನು ಸ್ವಯಂ ಪ್ರೇರಿತರಾಗಿ ತೆರವಿಗೆ ಮುಂದಾಗಿದ್ದರು. ಅಲ್ಲದೆ ದ್ಯಾವಮ್ಮ ದೇವಿ ದೇಗುಲದ ಸುತ್ತಲಿನ ಪರಿಸರದಲ್ಲಿ ಅನಧಿಕೃತವಾಗಿ ಹಾಕಿರುವ ಶೆಡ್‌ ಮತ್ತು ಗುಡಿಸಲು ತೆರವಿಗೆ ಧ್ವನಿವರ್ಧಕದ ಮೂಲಕ ಸೂಚನೆ ನೀಡಿದ್ದರು.

ಈ ಸಂದರ್ಭದಲ್ಲಿ ಪಿಐ ಪ್ರದೀಪ್‌ ಬಿಸೆ, ಪಿಎಸ್‌ಐ ಕಾಮಣ್ಣ, ಎಎಸ್‌ಐ ಬೊರಣ್ಣ, ಪುರಸಭೆ ವ್ಯವಸ್ಥಾಪಕ ಪರಮೇಶ್ವರ, ಪುರಸಭೆ
ಅಧಿಕಾರಿಗಳಾದ ಆದೇಪ್ಪ, ಅನಂತ ಸೇರಿದಂತೆ ಪಟ್ಟಣದ ಹಿರೇಮಠದ ಮರುಳಸಿದ್ಧಯ್ಯಸ್ವಾಮಿ, ಕಲ್ಲನಗೌಡ ಮಾ.ಪಾಟೀಲ್‌, ಮರಿಯಪ್ಪ ಸಾಲೋಣಿ, ನಾರಾಯಣ ಇಡಿಗೇರ, ತಾಯಪ್ಪ ಕೊಟ್ಯಾಳ, ಯೂಸುಫ ಸಾಬ್‌, ಅಯ್ಯಪ್ಪ ಬಂಡಿ,
ರಮೆಶ ಬಂಗಿ, ಹನಮಂತ ಸಿಂಗ್‌ ಕೋಟೆ, ವಿರುಪಣ್ಣ ಸಾಲೋಣಿ, ಖಾಜಾ ಹುಸೇನ್‌ ಮುಲ್ಲಾ, ಶ್ರೀನಿವಾಸ ಗೋಮರ್ಸಿ, ಹನುಮಂತಪ್ಪ ಸಿಂಗಾಪೂರ, ವೆಂಕಟೇಶ ಈಡಿಗೇರ, ನ್ಯಾಯವಾದಿ ವೀರೇಶ, ಶಂಕ್ರಪ್ಪ ಮೆಗೂರ, ಸೇರಿದಂತೆ ಸಮುದಾಯದ ಪ್ರಮುಖರು, ಜೆಸ್ಕಾಂ ಸಿಬ್ಬಂದಿ, ಪುರಸಭೆ ಪೌರಕಾರ್ಮಿಕರು ಇದ್ದರು.

ಮೂರು ಎಕರೆ ಭೂಮಿ ಎಂದು ಅಂದಾಜಿಸಿ ನಕ್ಷೆ ಸಿದ್ಧಪಡಿಸಲಾಗಿದೆ. ಇನ್ನೆರೆಡು ದಿನದಲ್ಲಿ ಸಂಪೂರ್ಣ ತೆರವು ಕಾರ್ಯ ಮುಗಿಸಿ ಬಳಿಕ ಸರ್ವೇ ನಡೆಸಿ ಜಾಗವನ್ನು ಸಂಪೂರ್ಣ ಹದ್ದು ಬಸ್ತು ಮಾಡಲಾಗುವುದು.
ಸುರೇಶ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.