ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
Team Udayavani, Sep 20, 2024, 2:17 PM IST
ಉದಯವಾಣಿ ಸಮಾಚಾರ
ಕೊಪ್ಪಳ : ಕೇರಳ ಮಾದರಿಯ ಶಿಕ್ಷಣವೂ ರಾಜ್ಯದಲ್ಲಿಯೂ ದೊರೆಯಬೇಕಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದಲ್ಲಿ ಕೊಪ್ಪಳ ತಾಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ)ದಿಂದ ನಡೆದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರ ಪ್ರಶಸ್ತಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಳೆ ಮೈಸೂರು, ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಭಾಗ ಶೈಕ್ಷಣಿಕವಾಗಿ ಹಿಂದುಳಿದಿದೆ. ಸರ್ಕಾರ
ಶಾಲೆಗಳಿಗೆ ಸಾಕಷ್ಟು ಸೌಲಭ್ಯ ಒದಗಿಸಿದರೂ ಶೈಕ್ಷಣಿಕ ಪ್ರಗತಿ ಕಂಡುಬರುತ್ತಿಲ್ಲ. ಇದು ಬದಲಾಗಬೇಕಿದೆ. ಅನುದಾನ ರಹಿತ ಶಾಲೆಗಳಿಗೆ ಸವಲತ್ತು ಕೊಡಿಸುವ ಕುರಿತು ಕಲ್ಯಾಣ ಕರ್ನಾಟಕ ಮಂಡಳಿಯಲ್ಲಿ ಚರ್ಚೆಮಾಡಿದ್ದೇವೆ.
ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವಂತಾಗಬೇಕು. ಮಕ್ಕಳಲ್ಲಿ ಪ್ರತಿಭೆಗಳನ್ನು ಗುರುತಿಸುವ ಕೆಲಸ
ಮಾಡಬೇಕು. ಪಾಲಕರೂ ಸಹ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ ಕೊಡುವ ಕೆಲಸ ಮಾಡಿದ್ದೇವೆ ಎಂದರು.
ಕೋಚಿಂಗ್ ಸೆಂಟರ್, ಟ್ರೇನಿಂಗ್ ಸೆಂಟರ್ ತೆರೆಯುವ ಕೆಲಸ ಮಾಡಿದ್ದೇವೆ. ನಾನು ಜಿಪಂ ಅಧ್ಯಕ್ಷನಾಗಿದ್ದಾಗ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮ ಸ್ಥಾನ ಹೊಂದಿತ್ತು. ಆದರೆ ಈಗ ಫಲಿತಾಂಶದಲ್ಲಿ 25ರ ಆಸುಪಾಸಿನಲ್ಲಿದೆ. ನಮ್ಮ ಜಿಲ್ಲೆ ಸಹ ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರುವಂತಾಗಬೇಕು ಎಂದರು.
ಸಾನಿಧ್ಯ ವಹಿಸಿದ್ದ ಶಿರಹಟ್ಟಿ ಬಾಳೆಹೊಸುರ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ಸಾಕ್ಷರತೆ ಪ್ರಮಾಣ ಅಧಿಕವಾಗಿದ್ದರೂ ಜ್ಞಾನ ಸಂಪಾದನೆ ಕಡಿಮೆಯಾಗುತ್ತಿದೆ. ಕಲಿಯುವ ವಯಸ್ಸಿನಲ್ಲಿ ಸರಿಯಾಗಿ ಶಿಕ್ಷಣವನ್ನು ಕಲಿತಾಗ ಯಶಸ್ಸು ಸಿಗುತ್ತದೆ ಎಂದರು.
ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ವಿನಯಕುಮಾರ ಜಿ.ಬಿ ಉಪನ್ಯಾಸ ನೀಡಿದರು. ಎಂಎಲ್ಸಿ ಹೇಮಲತಾ ನಾಯಕ, ಕೊಪ್ಪಳ ಬಿಇಒ ಶಂಕರಯ್ಯ ಟಿ.ಎಸ್, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ| ಬಸವರಾಜ ಕ್ಯಾವಟರ್, ಕುಸ್ಮಾ ಸಂಘಟನೆ ಅಧ್ಯಕ್ಷ ಶಾಹೀದಹುಸೇನ ತಹಶೀಲ್ದಾರ್, ಕಾರ್ಯದರ್ಶಿ ನಾಗರಾಜ ಗುಡಿ, ಪತ್ರಕರ್ತ ಸಿರಾಜ್ ಬಿಸರಳ್ಳಿ, ಮಂಜುನಾಥ ದಿವಟರ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.