ಕಿಷ್ಕಿಂದಾ ಅಂಜನಾದ್ರಿ ಇತಿಹಾಸ ತಿರುಚಿದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಾಮ ಫಲಕಗಳು


Team Udayavani, Sep 7, 2021, 2:20 PM IST

Kishkinda Anjanadri History Nomination plates of twisted Hampi Development Authority : Report

ಗಂಗಾವತಿ : ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದ ಪ್ರಮುಖ ಸ್ಥಳಗಳ ಪರಿಚಯಿಸುವ ನಾಮಫಲಕಗಳನ್ನು ಇತ್ತೀಚೆಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಅಳವಡಿಸಿದೆ.ಸುಗ್ರೀವ ಗುಹೆ ಮಾತಂಗ ಬೆಟ್ಟದ ಕುರಿತು ಮಾಹಿತಿಯನ್ನು ಬರೆಯಲಾಗಿದೆ.

ಪ್ರಮುಖವಾಗಿ ಅಂಜನಾದ್ರಿ ಬೆಟ್ಟದ ಕೆಳಗೆ  ರಾಮಾಯಣ ಮಾಹಿತಿವುಳ್ಳ ಬೋರ್ಡ್ ಗಳನ್ನು ಹಾಕಿದ್ದು ಇದರಲ್ಲಿ ಆಂಜನೇಯನ ಜನನ ಶ್ರೀರಾಮ ಚಂದ್ರನ ದರ್ಶನ ಮಾತಂಗ ಪರ್ವತ ಋಷಿಮುಖ ಪರ್ವತ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು, ಈ ಮಾಹಿತಿ ರಾಮಾಯಣ ಮಹಾಭಾರತದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡು ಬಂದಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ .

ಇದನ್ನೂ ಓದಿ : ಯುವಕರಿಗೆ ಹೇಳಿ ಮಾಡಿಸಿದಂತಿದೆ ನಾಯ್ಸ್‌ ಫಿಟ್ ಕೋರ್ ಸ್ಮಾರ್ಟ್‌ ವಾಚ್..! ಇಲ್ಲಿದೆ ಮಾಹಿತಿ

ಹಲವು ರಾಮಾಯಣಗಳಲ್ಲಿ ಹನುಮನಹಳ್ಳಿ ತುಂಗಭದ್ರಾ ತಟದಲ್ಲಿರುವ ಋಷ್ಯಮೂಕಪರ್ವತ ಸುಗ್ರೀವನ ವಾಸಸ್ಥಳವಾಗಿತ್ತು ಅಲ್ಲಿಗೆ ಶ್ರೀರಾಮಚಂದ್ರ ಲಕ್ಷ್ಮಣ ಸಮೇತ ಆಗಮಿಸಿದ್ದ ಸಂದರ್ಭದಲ್ಲಿ ಆಂಜನೇಯ ಸುಗ್ರೀವ ಮತ್ತು ರಾಮ ಲಕ್ಷ್ಮಣರನ್ನು ಪರಿಚಯಿಸುವ ಮಾಹಿತಿಯಿದೆ.ಪ್ರಾಧಿಕಾರದವರು ಅಳವಡಿಸಿರುವ ಬೋರ್ಡಿನಲ್ಲಿ ಮಾತಂಗ ಬೆಟ್ಟದ ಹತ್ತಿರ ಶ್ರೀರಾಮನ ದರ್ಶನ ವನ್ನು ಆಂಜನೇಯ ಮಾಡಿದ್ದಾನೆ ಎಂದು ಹೇಳಲಾಗಿದೆ.

ಪುರಾಣಗಳ ಪ್ರಕಾರ ಈ ಋಷ್ಯಮೂಕಪರ್ವತದಲ್ಲಿ ಶ್ರೀರಾಮ ಲಕ್ಷ್ಮಣ ಆಂಜನೇಯರು ಮೊದಲ ಭೇಟಿಯಾಗುತ್ತದೆ.ಆಂಜನಾದ್ರಿಯ ಬೆಟ್ಟದ ಕೆಳಗೆ ಅಳವಡಿಸಿರುವ ಇನ್ನೊಂದು ನಾಮಫಲಕದಲ್ಲಿ ಅಂಜನಾದ್ರಿ ಬೆಟ್ಟದ ಮಹತ್ವವನ್ನು ವರ್ಣಿಸಲಾಗಿದೆ ಬಾಲ ಆಂಜನೇಯ ಎಂದು ಬರೆಯಲಾಗಿದೆ .ಸೂರ್ಯನನ್ನು ಆಂಜನೇಯ ನುಂಗುವ ಪ್ರಸಂಗವನ್ನು ಮಾತ್ರ ಬರೆದು ಆಂಜನೇಯನ ಜನನ ಸೀತಾಮಾತೆಯ ವಾಸ ಇವುಗಳ ಬಗ್ಗೆ ಏನನ್ನೂ ಹೇಳಲಾಗಿಲ್ಲ ಎರಡೂ ನಾಮಫಲಕಗಳಲ್ಲಿ ಕಿಷ್ಕಿಂದಾ ಅಂಜನಾದ್ರಿ ಮಾತಂಗ ಪರ್ವತ ಋಷಿಮುಖ ಪರ್ವತ ಗಳ ಬಗ್ಗೆ ಅಂತೆ ಕಂತೆಗಳ ಮಾಹಿತಿಯನ್ನು ನೀಡಲಾಗಿದೆ ಹೊರತು ಖಚಿತವಾಗಿ ಏನನ್ನೂ ಹೇಳಿಲ್ಲ.

ತಿರುಪತಿಯಲ್ಲಿ ಆಂಜನೇಯ ಜನಿಸಿದ್ದ ವಾಸ ಮಾಡಿದ್ದ ಎಂದು ಟಿಟಿಡಿ ಯವರು ವಾದ ಮಂಡಿಸುವ ಈ ಸಂದರ್ಭದಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ದವರು ಅಳವಡಿಸಿರುವ ಮಾಹಿತಿ ನೀಡುವ ನಾಮಫಲಕಗಳಲ್ಲಿ  ಆಂಜನೇಯರ ಜನನ ಹಾಗೂ ಕಿಷ್ಕಿಂಧ ಆನೇಗುಂದಿ ಪ್ರದೇಶ ಪಂಪಾಸರೋವರ ಪಂಪಾನದಿ ಈಗಿನ ತುಂಗಭದ್ರ ನದಿ ಬಗ್ಗೆ ಯಾವುದೇ ಮಾಹಿತಿಯನ್ನು ಅಳವಡಿಸಿಲ್ಲ ಎನ್ನುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.  ಕೂಡಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರ ದವರು ಇತಿಹಾಸ ತಜ್ಞರನ್ನು ಮತ್ತು ಮಹಾಭಾರತ ರಾಮಾಯಣ ಪುರಾಣಗಳಲ್ಲಿ ಬರುವಂತ ಮಾಹಿತಿಯನ್ನು ಮತ್ತೊಮ್ಮೆ ಸರಿಯಾಗಿ ನಾಮಫಲಕಗಳಲ್ಲಿ ಅಳವಡಿಸುವಂತೆ ಒತ್ತಾಯವನ್ನು ಮಾಡಲಾಗಿದೆ.

ಇದನ್ನೂ ಓದಿ : ಪ್ರತಿಭಟನೆ ನಿರತ ರೈತರ ವಿರುದ್ಧ ಬಲ ಪ್ರಯೋಗ ಮಾಡುವವರಿಗೆ ಕ್ರಮ ಕೈಗೊಳ್ಳುವಂತೆ ರೈತರ ಒತ್ತಾಯ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.