Koppala; ಬಿಜೆಪಿಯವರು ಸುಳ್ಳಿನ ಗಿರಾಕಿಗಳು: ಸಚಿವ ಶಿವರಾಜ ತಂಗಡಗಿ


Team Udayavani, Mar 1, 2024, 1:17 PM IST

Koppala; ಬಿಜೆಪಿಯವರು ಸುಳ್ಳಿನ ಗಿರಾಕಿಗಳು: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ನಮಗೆ ಮೊದಲು ದೇಶ, ಆ ಮೇಲೆ ಪಕ್ಷ. ಆದರೆ ಬಿಜೆಪಿಯವರಿಗೆ ಮೊದಲು ಪಕ್ಷ, ಆಮೇಲೆ ದೇಶನೂ ಇಲ್ಲ ಬರೀ ಮೋದಿ. ಬಿಜೆಪಿಯವರು ಜನರು ಮನಸ್ಸು ಕೆಡಿಸಲು ಹೊರಟಿದ್ದಾರೆ. ಜನರ ಮನಸ್ಸು ಕೆಡಲು ಸಾಧ್ಯವಿಲ್ಲ. ಜನರಿಗೂ ಬಿಜೆಪಿ ಬಗ್ಗೆ ಗೊತ್ತಾಗಿದೆ. ಇವರು ಸುಳ್ಳರು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಜನರಿಗೆ ಗೊತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಸಿಕ್ಕರೆ ನನ್ನ ಬಳಿ ಕರೆಯಿರಿ. ಒಂದು ರೂಪಾಯಿಗೆ 15 ಡಾಲರ್ ಬರುತ್ತದೆಂದು ಹೇಳಿದ್ದರು. ಇದೀಗ 1 ರೂ.ಗೆ 84 ಡಾಲರ್  ಆಗಿದೆ. ಬಿಜೆಪಿಯವರು ಒಂದು ದೊಡ್ಡದು ಸುಳ್ಳಿನ ಫ್ಯಾಕ್ಟರಿ ಕಟ್ಟಿಸಿದ್ದಾರೆ. ಆ ಸುಳ್ಳಿನ ಫ್ಯಾಕ್ಟರಿಯಲ್ಲಿ ಟ್ರೈನಿಂಗ್ ಆದ ಗಿರಾಕಿಗಳು ಈ ಬಿಜೆಪಿಯವರು. ಸಿ.ಟಿ.ರವಿ ಸೇರಿದಂತೆ ಎಲ್ಲ ನಾಯಕರು ಸುಳ್ಳಿನ ಫ್ಯಾಕ್ಟರಿಯಲ್ಲಿ ಟ್ರೈನಿಂಗ್ ಪಡೆದ ಗಿರಾಕಿಗಳು ಎಂದು ಟೀಕಿಸಿದರು.

ಜಾತಿ ಗಣತಿ ವರದಿ ಸ್ವೀಕಾರ ವಿಚಾರವಾಗಿ ಮಾತನಾಡಿದ ಅವರು, ವರದಿಯನ್ನು ಯಾರೂ ಸಹ ಓದಿಲ್ಲ. ವರದಿ ಓದಲಾರದೆ ಯಾಕೆ ವಿರೋಧ ಮಾಡುತ್ತಾರೆ. ಸಾರ್ವಜನಿಕರ ಮುಂದೆ ವರದಿ ತಂದು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚೆಯಾಗುತ್ತದೆ. ವರದಿಯನ್ನು ಓದಲಾರದೆ ಅವೈಜ್ಞಾನಿಕವೆಂದು ಹೇಳುವುದು ತಪ್ಪು. 168 ಕೋಟಿ ಖರ್ಚು ಮಾಡಿ ವರದಿ ಮಾಡಲಾಗಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ವರದಿ ಮಾಡಿದೆ. ಕೇವಲ ಜಾತಿಗಣತಿಗೆ ವರದಿ ಸೀಮಿತವಾಗಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲಾ ಜಾತಿಗಳಿಗೆ ವಿಶ್ವಾಸ ತೋರಿಸುವ ಪಕ್ಷ. ಅಹಿಂದ ಮಾತ್ರವಲ್ಲ, ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಸೇರಿದಂತೆ ಎಲ್ಲಾ ಜಾತಿಗಳಿರುವ ಪಾರ್ಟಿ ಕಾಂಗ್ರೆಸ್. ನಾನು ಬಿಜೆಪಿ ಬಗ್ಗೆ ನುಡಿದ ಭವಿಷ್ಯ ನಿಜವಾಗುತ್ತಿದೆ ಎಂದರು.

ಚುನಾವಣೆ ಬಂದಾಗ ಬಿಜೆಪಿಯವರಿಗೆ ನೆನಪಾಗುವುದು ಪಾಕಿಸ್ತಾನ. ಚುನಾವಣೆ ಬಂದಾಗ ನೆನಪಾಗುವುದು ರಾಮ, ಆಂಜನೇಯ, ಪಾಕಿಸ್ತಾನ. ಚುನಾವಣೆ ಮುಗಿದ ಮೇಲೆ ಶ್ರೀರಾಮ, ಆಂಜನೇಯ, ಪಾಕಿಸ್ತಾನವೂ ಬಿಜೆಪಿಗೆ ನೆನಪು ಆಗುವುದಿಲ್ಲ. ವಿಧಾನಸೌದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ತಪ್ಪು. ಅದನ್ನು ನಾವು ಪಾಲನೆ, ಪೋಷಣೆ ಮಾಡುವುದಿಲ್ಲ. ಯಾರೇ ಕೂಗಿದರೂ ಶಿಕ್ಷೆಗೆ ಗುರಿ ಪಡಿಸುತ್ತೇವೆ. ಬಿಜೆಪಿ ದೇಶ ಭಕ್ತಿಯ ಬಗ್ಗೆ ನಮಗೇನು ಹೇಳೂವುದು ಅವಶ್ಯಕತೆಯಿಲ್ಲ. ಬಿಜೆಪಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಯಾರಾದರೂ ನಾಯಕರು ಇದ್ದಾರಾ? ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಬಿಜೆಪಿಯ ಒಬ್ಬರೂ ಇಲ್ಲ. ಕಾಂಗ್ರೆಸ್ ನಲ್ಲಿ ಮಾತ್ರ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಇದ್ದಾರೆ ಎಂದು ತಂಗಡಗಿ ಹೇಳಿದರು.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.