ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

3 ಲಕ್ಷ ರೂ. ವ್ಯಯ ಮಾಡಿದ್ದ ಕೃಷಿಕ­! ಹೊದ್ದು ಮಲಗಿದ ಸರ್ಕಾರ, ಜಿಲ್ಲಾಡಳಿತ

Team Udayavani, Apr 15, 2021, 8:18 PM IST

ghhrre

ಕೊಪ್ಪಳ: ಕೋವಿಡ್ ಅಬ್ಬರ ಒಂದೆಡೆಯಾದರೆ ಬೇಸಿಗೆಯಲ್ಲಿ ನೀರಿನ ಕೊರತೆ ಮಧ್ಯೆಯೂ ಅನ್ನದಾತ ಬೆಳೆ ಉಳಿಸಿಕೊಳ್ಳುವುದು ಸವಾಲಾಗಿದೆ. ಈ ಮಧ್ಯೆ ಬೆಲೆ ಕುಸಿತದಿಂದ ರೈತರು ತಾವು ಉತ್ತಿ, ಬಿತ್ತಿ ಬೆಳೆದ ಬೆಳೆಯನ್ನೇ ಕೈಯಾರೆ ನಾಶಪಡಿಸುತ್ತಿರುವ ಘಟನೆ ಜಿಲ್ಲಾದ್ಯಂತ ನಡೆದಿವೆ.

ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಸ್ಥಿತಿಯಲ್ಲಿ ನಿಜಕ್ಕೂ ಹೊದ್ದು ಮಲಗಿದೆ ಎಂದೆನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಾಲೂಕಿನ ಅಳವಂಡಿ ಗ್ರಾಮದ ರೈತ ವಸಂತರಡ್ಡಿ ಅವರು ಕಳೆದ ವರ್ಷ 2.5 ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದರು. ಕಷ್ಟಪಟ್ಟು ಹನಿ ನೀರಾವರಿ ಮಾಡಿ ಕೃಷಿ ಮಾಡಿದ್ದ ಈ ರೈತ ಬಾಳೆ ಸಸಿಯನ್ನು ಮಕ್ಕಳಂತೆ ಪೋಷಣೆ ಮಾಡಿದ್ದರು. ಬಾಳೆಯು ಗೊನೆಯನ್ನು ಬಿಟ್ಟಿದೆ. ಆದರೆ ಮಾರುಕಟ್ಟೆಯಲ್ಲಿ ಬಾಳೆಯನ್ನು ಕೇಳುವವರೇ ಇಲ್ಲ ಎನ್ನುವಂತ ಸ್ಥಿತಿ ಬಂದಿದೆ. ಕೆಜಿಗೆ 4-5 ರೂ.ಗೆ ಕೇಳುತ್ತಿರುವುದು ನಿಜಕ್ಕೂ ರೈತರು ಕಂಗಾಲಾಗುವಂತೆ ಮಾಡಿದೆ. ರೈತ ವಸಂತರಡ್ಡಿ ಅವರು 2.5 ಎಕರೆ ಬಾಳೆಗೆ 3 ಲಕ್ಷ ರೂ. ವ್ಯಯ ಮಾಡಿದ್ದಾರೆ. ಈ ವರೆಗೂ ನಯಾಪೈಸೆ ಬಾಳೆಯಿಂದ ಆದಾಯ ಬಂದಿಲ್ಲ. ಬೆಲೆ ಕುಸಿತದಿಂದಾಗಿ ಕಂಗಾಲಾಗಿದ್ದಾರೆ. ಬಾಳೆ ಗೊನೆ ಕಡಿದು ನಗರದ ಮಾರುಕಟ್ಟೆಗೆ ತಂದರೂ ಖರೀದಿ ಮಾಡುವವರೂ ಇಲ್ಲದಂತಾಗಿದೆ. ಸಾರಿಗೆ ಹಾಗೂ ಗೊನೆ ಕಡಿತಕ್ಕೆ ಹೆಚ್ಚು ಕೂಲಿ ವ್ಯಯಿಸಿ ಅದನ್ನೂ ಮೈಮೇಲೆ ಮಾಡಿಕೊಳ್ಳುವಂತಹ ಸ್ಥಿತಿ ಎದುರಾಗಿ ರೈತನು ಬುಧವಾರ ಟ್ರ್ಯಾಕ್ಟರ್‌ ಮೂಲಕ ಇಡೀ 2.5 ಎಕರೆ ಬಾಳೆಯನ್ನೇ ರೂಟರ್‌ ಹೊಡೆಯಿಸಿ ನಾಶಪಡಿಸಿದರು.

ಮಕ್ಕಳಂತೆ ಹಗಲು-ರಾತ್ರಿ ಎನ್ನದೇ ಕಷ್ಟಪಟ್ಟು ಬೆಳೆಸಿದ್ದ ಬಾಳೆ ಬೆಳೆಯು ನೆಲ ಕಚ್ಚುತ್ತಿರುವುದನ್ನು ನೋಡಿದ ರೈತರು ಕಣ್ಣಾಲೆಗಳು ಒದ್ದೆಯಾಗಿದ್ದವು. ಇದು ಕೇವಲ ಬಾಳೆಯ ಬೆಳೆ ಒಂದೇ ಕತೆಯಲ್ಲ. ತರಕಾರಿಯ ಬೆಲೆಗಳು ಪಾತಾಳಕ್ಕೆ ಕುಸಿತ ಕಂಡಿವೆ. ಟಮೋಟಾ, ಚಳವೆ, ಬದನೆ ಸೇರಿ ಇತರೆ ಬೆಳೆಗಳ ದರವು ನಿಜಕ್ಕೂ ಹೇಳದಂತ ಸ್ಥಿತಿಯಿದೆ. ಇಷ್ಟೆಲ್ಲ ಅನ್ನದಾತನ ಕೋವಿಡ್‌ ಸಂಕಷ್ಟ ಎದುರಿಸಿದರೂ ಸರ್ಕಾರ, ಜಿಲ್ಲಾಡಳಿತವು ಮೌನ ವಹಿಸಿರುವುದು ರೈತಾಪಿ ವಲಯದ ಆಕ್ರೋಶಕ್ಕೂ ಕಾರಣವಾಗಿದೆ. ಇನ್ನಾದರೂ ರೈತರ ನೆರವಿಗೆ ಸರ್ಕಾರ, ಜಿಲ್ಲಾ ಆಡಳಿತದ ಅ ಧಿಕಾರಿಗಳು ಮಧ್ಯ ಪ್ರವೇಶ ಮಾಡಿ ರೈತರಿಗೆ ಆಗುತ್ತಿರುವ ನಷ್ಟವನ್ನು ತಡೆದು ಪರ್ಯಾಯ ವ್ಯವಸ್ಥೆ ಮಾಡಬೇಕಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.