![Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’](https://www.udayavani.com/wp-content/uploads/2025/02/Dubai1-415x234.jpg)
![Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’](https://www.udayavani.com/wp-content/uploads/2025/02/Dubai1-415x234.jpg)
Team Udayavani, Jan 29, 2025, 3:28 PM IST
ಕೊಪ್ಪಳ: ಕೊಪ್ಪಳ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ ಕನಕಗಿರಿ ಮಾಜಿ ಶಾಸಕ ಬಸವರಾಜ್ ದಡೆಸಗೂರ್ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ಒಲೆದು ಬಂದಿದೆ. ಒಂದೇ ವರ್ಷದ ಅವಧಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ಬದಲಾವಣೆ ಮಾಡಿದ್ದು ಬಿಜೆಪಿ ವಲಯದಲ್ಲೂ ಸಹ ಆಶ್ಚರ್ಯ ತರಿಸಿದೆ.
ಕಳೆದ ಒಂದು ವರ್ಷದ ಹಿಂದಷ್ಟೇ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಯುವನಾಯಕ ನವೀನ್ ಗುಳಗಣ್ಣನವರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕಲ್ಪಿಸಿತು. ಆದರೆ ಒಂದೇ ವರ್ಷದ ಅವಧಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಸವರಾಜ್ ದಡೆಸಗೂರ್ ಅವರನ್ನ ಆಯ್ಕೆ ಮಾಡುವ ಮೂಲಕ ಪಕ್ಷದ ಆಂತರಿಕ ವಲಯದಲ್ಲೂ ಸಹ ಅಚ್ಚರಿ ತರಿಸಿದೆ.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಪೇಕ್ಷಿತರಾಗಿ ಎಂಟು ಜನ ಸ್ಪರ್ಧೆ ಇಂಗಿತ ವ್ಯಕ್ತಪಡಿಸಿದ್ದರು. ಅದರಲ್ಲೂ ಪ್ರಮುಖವಾಗಿ ಹಾಲಿ ಜಿಲ್ಲಾಧ್ಯಕ್ಷ ನವೀನ್ ಗುಳಗನ್ನನವರ್, ಮಾಜಿ ಶಾಸಕ ಬಸವರಾಜ ದಡೇಸುಗೂರು, ಮಾಜಿ ಶಾಸಕ ಪರಣ್ಣ ಮಳವಳ್ಳಿ, ಮಹಾಂತೇಶ ಪಾಟೀಲ್ ಮೈನಹಳ್ಳಿ, ಮಹೇಶ ಅಂಗಡಿ, ಶಿವಲೀಲಾ ದಳವಾಯಿ, ಚಂದ್ರಶೇಖರ ಕವಲೂರ್, ಮಂಜುನಾಥ ಅಂಗಡಿ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಪೇಕ್ಷಿತ ರಾಗಿದ್ದರು ಚುನಾವಣಾ ಉಸ್ತುವಾರಿಗಳಾಗಿ ಎಂಎಲ್ಸಿ ಹನುಮಂತ ನಿರಾಣಿ ಪಾಲ್ಗೊಂಡಿದ್ದರು. ಆರಂಭದಲ್ಲಿ ಎಂಟು ಜನರು ಸಹಿತ ತನಗೆ ಅವಕಾಶ ಕೊಡುವಂತೆ ಮನವಿ ಮಾಡಿದರು. ಅ ನವೀನ್ ಗುಳ್ಗಣ್ಣನವರ ಸಹಿತ ತಮ್ಮನ್ನು ಮುಂದುವರಿಸುವಂತೆ ಪಕ್ಷದ ಹಿರಿಯ ನಾಯಕರಲ್ಲಿ ಕೋರಿಕೊಂಡಿದ್ದರು. ಆದರೆ ರಾಜ್ಯ ಬಿಜೆಪಿಯ ನಿರ್ಣಯದಂತೆ ಜಿಲ್ಲಾಧ್ಯಕ್ಷ ಸ್ಥಾನದ ಪಟ್ಟವನ್ನ ಬಸವರಾಜ್ ದಡೆಸಗೂರ ಅವರಿಗೆ ಕೊಡುವ ಮೂಲಕ ಎಸ್ಸಿ ಸಮುದಾಯಕ್ಕೆ ಬಿಜೆಪಿ ಆದ್ಯತೆ ನೀಡಿದೆ ಎನ್ನುವ ಸೂಚನೆಯನ್ನು ಕೊಟ್ಟಿದೆ.
ಬಿಜೆಪಿ ಆಂತರಿಕ ವಲಯದಲ್ಲಿ ನವೀನ್ ಗುಳಗಣ್ಣನವರನ್ನು ಮುಂದುವರಿಸಲು ಮಾಜಿ ಸಚಿವ ಹಾಲಪ್ಪ ಆಚಾರ್ ಅವರು ಒಪ್ಪಲಿಲ್ಲ ಎನ್ನುವಂತ ಮಾತುಗಳು ಸಹಿತ ಆಂತರಿಕ ವಲಯದಲ್ಲಿ ಕೇಳಿ ಬಂದವು. ಒಂದೇ ವರ್ಷದ ಅವಧಿಯಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದು ಪಕ್ಷದಲ್ಲಿ ನಾನಾ ಚರ್ಚೆಗಳಿಗೆ ಎಡಿ ಮಾಡಿಕೊಟ್ಟಿದೆ. ನವೀನ್ ಗುಳ್ಕಣ್ಣನವರ್ ಅವರು ಪಕ್ಷ ಸಂಘಟನೆ ಮಾಡಿ ಎಲ್ಲರ ಗಮನ ಸೆಳೆದಿದ್ದರು. ಆದರೆ ಒಂದೇ ವರ್ಷದ ಅವಧಿಯಲ್ಲಿ ಪಕ್ಷವು ತಮ್ಮ ನಿರ್ಧಾರ ಬದಲಿಸಿದ್ದು ನವೀನ್ ಅವರಲ್ಲೂ ಸಹಿತ ಮುನಿಸು ತರಿಸಿದೆ ಎನ್ನುವಂತ ಮಾತು ಕೇಳಿ ಬಂದಿವೆ. ಒಟ್ಟಿನಲ್ಲಿ ಬಿಜೆಪಿಯಲ್ಲಿನ ಈ ಬೆಳವಣಿಗೆಯು ಕಾರ್ಯಕರ್ತರಲ್ಲಿ ಹಾಗೂ ಕೆಲ ಪದಾಧಿಕಾರಿಗಳು ಅಚ್ಚರಿಯನ್ನು ಮೂಡಿಸಿದೆ.
ಪಕ್ಷವೂ ನವೀನ್ ಗುಳಗಣ್ಣನವರವನ್ನು ಒಂದು ವರ್ಷದ ಅವಧಿಗೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಅವಕಾಶ ಕಲ್ಪಿಸಿತ್ತು. ಈಗ ಪಕ್ಷದ ನಿರ್ಧಾರದಂತೆ ಜಿಲ್ಲಾಧ್ಯಕ್ಷ ಸ್ಥಾನವನ್ನ ನನಗೆ ನೀಡಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಪಕ್ಷವನ್ನು ಸಂಘಟನೆ ಮಾಡಿ ಎಲ್ಲ ಕಾರ್ಯಕರ್ತರಿಗೂ ಶಕ್ತಿ ತುಂಬ ಕೆಲಸ ಮಾಡುವೆನು. ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಹಂತದ ಪದಾಧಿಕಾರಿಗಳನ್ನು ನೇಮಕ ಮಾಡಿ ಸಂಘಟನೆ ಕೆಲಸವನ್ನು ಆರಂಭಿಸುವೆನು.
– ಬಸವರಾಜ್ ದಡೇಸುಗೂರು, ಬಿಜೆಪಿ ನೂತನ ಜಿಲ್ಲಾಧ್ಯಕ್ಷ, ಕೊಪ್ಪಳ
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ
You seem to have an Ad Blocker on.
To continue reading, please turn it off or whitelist Udayavani.