ದಾಸೋಹಕ್ಕೆ ಭಕ್ತರಿಂದ ದವಸ-ಧಾನ್ಯ


Team Udayavani, Jan 15, 2019, 10:24 AM IST

15-january-19.jpg

ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಮಹಾ ರಥೋತ್ಸವಕ್ಕೆ ಆಗಮಿಸುವ ಲಕ್ಷ ಲಕ್ಷ ಸಂಖ್ಯೆಯಲ್ಲಿ ಆಗಮಿಸುವ ಭಕ್ತ ಸಮೂಹದ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಾತ್ರೋತ್ಸವಕ್ಕೂ ಮುನ್ನ ನಡೆಯುವ ತೆಪ್ಪೋತ್ಸವಕ್ಕೆ ಕೆರೆ ಸಿದ್ಧಗೊಳಿಸಲಾಗಿದೆ. ದಾಸೋಹಕ್ಕೂ ಭಕ್ತ ಸಮೂಹದಿಂದ ಧವಸ-ಧಾನ್ಯ ಹರಿದು ಬರುತ್ತಿದೆ.

ಹೊಸಪೇಟೆ, ಗಂಗಾವತಿ ಮಾರ್ಗದಿಂದ ಬರುವ ವಾಹನಗಳಿಗೆ ಕುಟೀರ ಫ್ಯಾಮಿಲಿ ರೆಸ್ಟೋರೆಂಟ್ ಪಕ್ಕದಿಂದ ಗೋಪನಕೊಪ್ಪ ಆಸ್ಪತ್ರೆಯ ಬದಿಯ ಮೂಲಕ ಡಾಲರ್ಸ್‌ ಕಾಲೋನಿಯಿಂದ ನೇರವಾಗಿ ಮಠದ ಹತ್ತಿರ ಬರಲು ಹೊಸ ರಸ್ತೆ ನಿರ್ಮಾಣವಾಗಿದೆ. ಅಲ್ಲಿ ದ್ವಿಚಕ್ರ, ಕಾರು, ಟ್ರ್ಯಾಕ್ಟರ್‌, ಲಾರಿಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಕುಷ್ಟಗಿ ರಸ್ತೆಯಿಂದ ಬರುವ ವಾಹನಗಳಿಗಾಗಿ ಕುಷ್ಟಗಿ ರೈಲ್ವೆ ಗೇಟ್ ಮತ್ತು ಬಜಾಜ್‌ ಶೋರೂಂ ಹಿಂದುಗಡೆ ಬಳಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಗದಗ ರಸ್ತೆಯಿಂದ ಬರುವ ವಾಹನಗಳಿಗಾಗಿ ಹಳೆಯ ಸಾರ್ವಜನಿಕ ಮೈದಾನ, ಎಪಿಎಂಸಿ ಯಾರ್ಡ್‌ನಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಕುಣಿಕೇರಿ ಮತ್ತು ಹಾಲವರ್ತಿ ರಸ್ತೆಗಳಿಂದ ಬರುವ ವಾಹನಗಳಿಗಾಗಿ ಶ್ರೀಮಠದ ಹಿಂಭಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸಿಂದೋಗಿ, ಗೊಂಡಬಾಳ ಕಡೆಯಿಂದ ಗಡಿಯಾರ ಕಂಬದ ಮೂಲಕ ಬರುವ ವಾಹನಗಳಿಗೆ ಪಾಂಡುರಂಗ ದೇವಸ್ಥಾನದ ಹಿಂಭಾಗದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ವರ್ಷ ಗವಿಸಿದ್ಧೇಶ್ವರ ಮಹಾರಥೋತ್ಸವದಲ್ಲಿ 5 ಲಕ್ಷಕ್ಕಿಂತಲೂ ಹೆಚ್ಚು ಭಕ್ತರು ಪಾಲ್ಗೊಳ್ಳುವುದರಿಂದ ರಥೋತ್ಸವ ಜರುಗಲಿರುವ ಮೈದಾನದ ಒಳಗಡೆ ಶಾಂತಿ ಹಾಗೂ ಶಿಸ್ತಿನ ಅಗತ್ಯವಿದೆ. ಆದ್ದರಿಂದ ಎತ್ತಿನ ಬಂಡಿಗಳನ್ನು, ದ್ವಿಚಕ್ರ, ಕಾರು, ಟ್ರ್ಯಾಕ್ಟರ್‌, ಟಂಟಂ ಹಾಗೂ ಲಾರಿಗಳನ್ನು ಆಯಾ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿ ನಂತರ ಮೈದಾನದ ಒಳಗಡೆ ಆಗಮಿಸಿ ರಥೋತ್ಸವದಲ್ಲಿ ಭಾಗವಹಿಸಬೇಕು.

ತೆಪ್ಪೋತ್ಸವಕ್ಕೆ ಕೆರೆ ಸಿದ್ಧ: ಜಾತ್ರಾ ಮಹೋತ್ಸವದ ಅಂಗವಾಗಿ ಜ. 19ರಂದು ಜರುಗುವ ತೆಪ್ಪೋತ್ಸವ ಕಾರ್ಯಕ್ರಮಕ್ಕೆ ಶ್ರೀ ಗವಿಮಠದ ಕೆರೆಯು ಸಂಪೂರ್ಣ ಸಿದ್ಧಗೊಳ್ಳುತ್ತಿದೆ. 4.20 ಎಕರೆ ವಿಶಾಲವಾದ ಜಾಗೆಯಲ್ಲಿ ಪುನರ್‌ ನಿರ್ಮಾಣಗೊಂಡಿದೆ. 600 ಅಡಿ ಉದ್ದ 280 ಅಡಿ ಅಗಲ ಮತ್ತು 18 ಅಡಿ ಆಳವಿರುವ ಈ ಕೆರೆಯು 4.86 ಕೋಟಿ ಲೀಟರ್‌ಗಳಷ್ಟು ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಕಾಸನಕಂಡಿ ಗ್ರಾಮದ ಹತ್ತಿರವಿರುವ ತುಂಗಭದ್ರಾ ನದಿಯಿಂದ ಕೆರೆಗೆ ನೀರನ್ನು ತುಂಬಿಸಿಕೊಳ್ಳಲಾಗುತ್ತಿದೆ. ತುಂಬಿರುವ ಈ ಕೆರೆಯ ಮಧ್ಯಭಾಗದಲ್ಲಿನ ಮಂದಿರದಲ್ಲಿ ಗವಿಮಠದ 15ನೇ ಪೀಠಾಧಿಪತಿ ಲಿಂ.ಶ್ರೀ ಶಿವಶಾಂತವೀರ ಸ್ವಾಮಿಗಳ ಮೂರ್ತಿಯಿದ್ದು, ದರ್ಶನಕ್ಕೆ ಹೋಗಿ ಬರಲು ಭಕ್ತರಿಗೆ ಸೇತುವೆ ನಿರ್ಮಾಣ ಮಾಡಲಾಗಿದೆ. ನೀರಿನಿಂದ ತುಂಬಿರುವ ಈ ಕೆರೆಯು ಪ್ರಕೃತಿಯ ರಮ್ಯತೆಯನ್ನು ಮೆರೆಯುತ್ತಿದೆ. ಈ ಕೆರೆಯಲ್ಲಿ ಜ. 19ರಂದು ತೆಪ್ಪೋತ್ಸವ ಕಾರ್ಯಕ್ರಮ ಸಂಜೆ 5ಕ್ಕೆ ಜರುಗಲಿದೆ. ಅಂದು ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡು ಮತ್ತಷ್ಟು ಮೆರಗನ್ನು ಹೆಚ್ಚಿಸಲಿದೆ.

ಜಾತ್ರೆ ಮಹಾದಾಸೋಹಕ್ಕೆ ಈಗಾಗಲೇ ದವಸ-ಧಾನ್ಯ, ರೊಟ್ಟಿಗಳನ್ನು ಭಕ್ತರು ಅರ್ಪಿಸುತ್ತಿದ್ದಾರೆ. ಸೋಮವಾರ ಕಾಮನೂರಿನ ಭಕ್ತರು 5 ಕ್ವಿಂಟಾಲ್‌ ಜೋಳ, 10 ಸಾವಿರ ರೊಟ್ಟಿ, ದವಸ-ಧಾನ್ಯ, ಚಿಕ್ಕಬೊಮ್ಮನಾಳ ಗ್ರಾಮದ ಭಕ್ತರು 3 ಸಾವಿರ ರೊಟ್ಟಿ, ದವಸ ಧಾನ್ಯಗಳು, ಆಗೋಲಿ ಗ್ರಾಮದ ಭಕ್ತರಿಂದ 500 ರೊಟ್ಟಿ, ದವಸ-ಧಾನ್ಯ, ನಿಡಶೇಸಿ ಗ್ರಾಮದ ಭಕ್ತರು 6 ಸಾವಿರ ರೊಟ್ಟಿಗಳು, ಕೆಸಲಾಪುರ ಗ್ರಾಮದಿಂದ 500 ರೊಟ್ಟಿ, ದವಸ-ಧಾನ್ಯ ಗವಿಮಠದ ಮಹಾದಾಸೋಹಕ್ಕೆ ಸಮರ್ಪಿಸಿದ್ದಾರೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.