Koppal: ಪತ್ನಿಯನ್ನು ಹ*ತ್ಯೆಗೈದು ರಾತ್ರೋ ರಾತ್ರಿ ಸು*ಟ್ಟು ಹಾಕಿದ ಕ್ರೂರಿ ಗಂಡ!
ಮಕ್ಕಳಾಗಲಿಲ್ಲ ಎಂದು ರಾಕ್ಷಸಿ ಕೃತ್ಯ ಮೆರೆದ!
Team Udayavani, Sep 8, 2024, 9:52 PM IST
ಕೊಪ್ಪಳ: ಪತ್ನಿ ಶೀಲ ಶಂಕಿಸಿ, ಮಕ್ಕಳಾಗಲಿಲ್ಲ ಎಂದು ತನ್ನ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿ ಗಂಡ ರಾಕ್ಷಸಿ ಕೃತ್ಯ ಮೆರೆದ ಘಟನೆ ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಹತ್ಯೆಯಾದ ದುರ್ದೈವಿ . ದೇವರೆಡ್ಡೆಪ್ಪ ಮಲ್ಲಾರೆಡ್ಡೆಪ್ಪ ಭಾವಿಕಟ್ಟಿ ಕೊಲೆಗೈದ ಪಾಪಿ. ಪತ್ನಿಯ ಶೀಲದ ಮೇಲೆ ಶಂಕಿಸಿ ಮಕ್ಕಳಾಗದ ಕಾರಣ ಅವಳೊಂದಿಗೆ ಜಗಳ ಮಾಡಿ ಸೆ.7 ರಂದು ತಡ ರಾತ್ರಿ ಸುಮಾರಿಗೆ ಬೆಡ್ ರೂಮಿನಲ್ಲಿ ಕಟ್ಟಿಗೆಯಿಂದ ಮುಖಕ್ಕೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬದೊಂದಿಗೆ ಸೇರಿ ಕೊಲೆ ಮಾಡಿದ ವಿಷಯವನ್ನು ಮುಚ್ಚಿಟ್ಟು ರಾತ್ರೋ ರಾತ್ರಿ ಆಕೆಯ ಮೃತದೇಹ ಹೊಲದಲ್ಲಿ ಸುಟ್ಟು ಹಾಕಿದ್ದಾರೆ.
ಬೆಳಗ್ಗೆ ಕೊಲೆಯಾದ ಗೀತಾಳ ಮಾವ ಮಲ್ಲಾರಡ್ಡೆಪ್ಪ ಮೃತಳ ತಂದೆ, ತಾಯಿಗೆ ವಿಷಯ ತಿಳಿಸಿದ್ದಾರೆ. ಈ ಕೊಲೆ ಮಾಡಿದವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಎಂದು ಮೃತಳ ಸಹೋದರ ಸಿದರೆಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆಗೈದ ಆರೋಪಿ ಹಾಗು ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ
Delhi CM; ಕೇಜ್ರಿವಾಲ್ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.