![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 23, 2020, 11:31 AM IST
ಕೊಪ್ಪಳ: ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ದ ಗುಡುಗಿದರು.
ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500 ರೂ ಬೆಲೆ ಹೆಚ್ಚಳ ಮಾಡಬೇಕು. ಪ್ರತ ದಿನವೂ ಬೆಲೆ ಏರಿಕೆ ಆಗುತ್ತಿದೆ. ಈಗ ವಿದ್ಯುತ್ ಸಹ ಹೆಚ್ಚಳ ಮಾಡಲಾಗಿದೆ. ಸರ್ಕಾರ ಭತ್ತಕ್ಕೆ ಹೆಚ್ಚುವರಿ 500 ರೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. 40 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿದ್ದು, ಕೋವಿಡ್ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಶುಲ್ಕ ಇಳಿಕೆ ಮಾಡುವ ಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
ರೈತ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಮುಖ್ಯಮಂತ್ರಿಗಳು ಮೊದಲು ರೈತರನ್ನು ಉಳಿಸಲು ಆಧ್ಯತೆ ನೀಡಲಿ, ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ. ಕೂಡಲೇ ಖರೀದಿ ಕೇಂದ್ರ ಆರಂಭ ಮಾಡಲಿ ಎಂದರು.
ಇದನ್ನೂ ಓದಿ:ಮಹಾತ್ಮಗಾಂಧಿ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಕೋವಿಡ್ 19ನಿಂದ ಸಾವು
ಬಿಜೆಪಿ ಜಾತಿ ಜಾತಿಗಳನ್ನು ಕೂಡಿಸುವುದನ್ನು ಬಿಟ್ಟು ಒಡೆಯುವ ಕೆಲಸ ಮಾಡುತ್ತಿದೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಹೀಗೆ ಜಾತಿಗೊಂದು ನಿಗಮ ಮಾಡಲು ಹೊರಟಿದ್ದಾರೆ. ರೈತರ ಬೆಳೆಗೆ ಬೆಂಬಲ ಬೆಲೆ ಸೇರಿ ನಿಗಮಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲು ನ.30 ರಂದು ಹಿರಿಯರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ ಎಂದರು.
ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ ಗೆ ಬರ್ತಾರೆ ಎಂದರಲ್ಲದೇ, ಸರ್ಕಾರ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಸುತ್ತಿದೆ. ಅವರು ಏನು ನಿರ್ಧಾರ ಕೈಗೊಳ್ತಾರೋ ನೋಡೋಣ. ನಮ್ಮ ಅಭಿಪ್ರಾಯವನ್ನ ಅವರು ಕೇಳಿಲ್ಲ. ಈ ಹಿಂದೆ ಒಂದು ಬಾರಿ ನಮ್ಮ ಸಲಹೆ ಕೇಳಿದ್ದರು. ಶಾಲೆ ಆರಂಭದ ಕುರಿತು ಸರ್ಕಾರದ ನಿರ್ಧಾರದ ಮೇಲೆ ನಾವು ತೀರ್ಮಾನ ಹೇಳುತ್ತೇವೆ ಎಂದರು.
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಣ್ಣ ಅಂತರದಿಂದ ಸೋತ ಬಸವನಗೌಡ ತುರ್ವಿಹಾಳ ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದೇವೆ. ಎಲ್ಲರೂ ಚುನಾವಣಾ ತಯಾರಿ ನಡೆಸಲು ಸಿದ್ದರಾಗಿದ್ದಾರೆ ಎಂದರು.
ಈ ವೇಳೆ ಶಾಸಕರಾದ ಅಮರೆಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ವಿ ಎಸ್ ಉಗ್ರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.