![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ
Team Udayavani, Jun 19, 2024, 10:45 AM IST
![8-kushtagi](https://www.udayavani.com/wp-content/uploads/2024/06/8-kushtagi-620x372.jpg)
ಕುಷ್ಟಗಿ: ನಮ್ಮ ಮನೆಯ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟಿಸಿದರೆ ಅರೆಸ್ಟ್ ಮಾಡಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಬೆದರಿಕೆಗೆ ಜಗ್ಗದ ಅಂಗನವಾಡಿ ಕಾರ್ಯಕರ್ತೆಯರು ಸಚಿವರ ಕಾರಟಗಿ ನಿವಾಸದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಎಲ್.ಕೆ.ಜಿ., ಯುಕೆಜಿ ಹಂತಗಳು ಕೊಡದೇ, ಅಂಗನವಾಡಿಗಳಿಗೆ ಅವುಗಳು ನಡೆಸಲು ಕೊಡಬೇಕೆಂದು ರಾಜ್ಯಾದ್ಯಂತ ಅಂಗನವಾಡಿ ನೌಕರ ಸಂಘಟನೆ ನಿರ್ದರಿಸಿವೆ.
ಈ ಹಿನ್ನೆಲೆ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಕಲಾವತಿ ಮೆಣೆದಾಳ ಅವರು, ಸಚಿವ ಶಿವರಾಜ ತಂಗಡಗಿ ಅವರಿಗೆ ಜೂನ್ 19 ಪ್ರತಿಭಟಿಸುವ ಕುರಿತು ಮನವಿ ಸಲ್ಲಿಸಿದ್ದರು.
ಇದಕ್ಕೆ ಸಚಿವ ತಂಗಡಗಿ ಅವರು, ನಮ್ಮ ಮನೆಯ ಮುಂದೆ ಪ್ರತಿಭಟಿಸಿದರೆ ಅರೆಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಿಮ್ಮ ಮನೆಯ ಖಾಸಗಿಯಾದರೆ ನಿಮ್ಮ ಶಾಸಕರ ಭವನ ಎಲ್ಲಿದೆ ಎಂದು ತಿಳಿಸಿ ಅಲ್ಲಿ ಪ್ರತಿಭಟಿಸುವುದಾಗಿ ಕಲಾವತಿ ಮೆಣೆದಾಳ ಪ್ರಶ್ನಿಸಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಜೂನ್ 19 ರಂದು ಕಾರಟಗಿ ಚಲೋ ಚಳುವಳಿ ಹಮ್ಮಿಕೊಂಡಿದ್ದೇವೆ. ಕಾರಟಗಿಯ ಸಚಿವರ ನಿವಾಸದ ಮುಂದೆ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದೇವೆ. ಸಚಿವರು ಅರೆಸ್ಟ್ ಮಾಡುವುದಾದರೆ ನಮ್ಮನ್ನೆಲ್ಲಾ ಅರೆಸ್ಟ್ ಮಾಡಿ ಎಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಎಲ್.ಕೆ.ಜಿ. ಯುಕೆಜಿ ಸರ್ಕಾರಿ ಶಾಲೆಗಳಿಗೆವಹಿಸದೇ ಮೊದಲಿನಂತೆ ಅಂಗನವಾಡಿಗಳಿಗೆ ವಹಿಸುವವರೆಗೂ ಪ್ರತಿಭಟನೆಗೆ ಜಾರಟಗಿಯಲ್ಲಿದ್ದೇವೆ ಎಂದು ಕಲಾವತಿ ಮೆಣೆದಾಳ ತಿಳಿಸಿದರು.
ಟಾಪ್ ನ್ಯೂಸ್
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
![T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ](https://www.udayavani.com/wp-content/uploads/2024/06/rohit-virat-150x83.jpg)
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
![2-kushtagi](https://www.udayavani.com/wp-content/uploads/2024/06/2-kushtagi-150x90.jpg)
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
![1-24-sunday](https://www.udayavani.com/wp-content/uploads/2024/06/1-24-sunday-3-150x90.jpg)
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
![Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ](https://www.udayavani.com/wp-content/uploads/2024/06/Madikeri-Glass-Bridge-150x84.jpg)
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.