ವಾಯುವಿಹಾರಿಗಳಿಗೆ ಜವರಾಯನಾದ ಟಿಪ್ಪರ್; ಒಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಟಿಪ್ಪರ್‌ ಚಾಲಕ ಪರಾರಿ

Team Udayavani, Oct 20, 2023, 8:11 AM IST

2-kushtagi

ಕುಷ್ಟಗಿ: ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಇಬ್ವರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ‌ಮೃತನಾಗಿದ್ದು, ಮತ್ತೊಬ್ಬರಿಗೆ ತೀವ್ರ ಗಾಯವಾದ ಘಟನೆ ಕೊಪ್ಪಳ ರಸ್ತೆಯ ಡಾ.ಅನೂಪ್ ಶೆಟ್ಟಿ ಪೊಲೀಸ್ ಕಾಲೋನಿ ಬಳಿ ಆ.20ರ ಶುಕ್ರವಾರ ‌ನಡೆದಿದೆ.

ದುರ್ಮರಣಕ್ಕೀಡಾದ ವ್ಯಕ್ತಿ ಕುಷ್ಟಗಿ ಪಟ್ಟಣದ ದೊಡ್ಡಪ್ಪ ಕಂಚಿ  ಎಂದು ಗುರುತಿಸಲಾಗಿದೆ. ಇನ್ನೋರ್ವ ಕುಷ್ಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಶೇಖರಪ್ಪ ಅಬ್ಬಿಗೇರಿ ಅವರಿಗೆ ಕೈ ಮುರಿದಿದೆ.

ಶುಕ್ರವಾರ ಎಂದಿನಂತೆ ಬೆಳಗಿನ ಜಾವ ಸುಮಾರು 5.30ಕ್ಕೆ ಕೊಪ್ಪಳ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದರು. ಡಾ.ಅನೂಪ್ ಶೆಟ್ಟಿ ಪೊಲೀಸ್ ಕಾಲೋನಿ ರಸ್ತೆಯಲ್ಲಿ ರಾಜ್ಯ ಹೆದ್ದಾರಿಯಿಂದ ಐದಾರು ಅಡಿ ದೂರದಲ್ಲಿ ವ್ಯಾಯಾಮ ಮಾಡುತ್ತಿದ್ದರು. ಅದೇ ವೇಳೆ ಗದಗ- ವಾಡಿ ರೈಲ್ವೆ ಮಾರ್ಗದ ಕಾಮಗಾರಿಗೆ ಲಿಂಗಲಬಂಡಿಯಿಂದ ಮರಂ‌ ಮಣ್ಣನ್ನು ಹೇರಿಕೊಂಡು ಬರುವ ಟಿಪ್ಪರ್ ಈ ವ್ಯಕ್ತಿಗಳ ಮೇಲೆ ಹರಿದು ದುರಂತ ಸಂಭವಿಸಿದೆ.

ನಿದ್ದೆ ಮಂಪರಿನಲ್ಲಿದ್ದ ಟಿಪ್ಪರ್ ಚಾಲಕ ಡಾ. ಅನೂಪ ಶೆಟ್ಟಿ ಕಾಲೋನಿಯ ರಸ್ತೆ ಎಂದು ಭಾವಿಸಿ ಏಕಾಏಕಿ ಟಿಪ್ಪರ್ ವಾಹನವನ್ನು ತಿರುಗಿಸಿದ  ವೇಳೆ ಅಲ್ಲಿದ್ದ ಇಬ್ಬರ ಮೇಲೆ ಹರಿದಿದೆ.

ಟಿಪ್ಪರ್ ವಾಹನ ಹರಿದ ರಭಸಕ್ಕೆ ದೊಡ್ಡಪ್ಪ ಕಂಚಿ ಅವರ ದೇಹದ ಅರ್ಧ ಭಾಗ‌ ಛಿದ್ರಗೊಂಡಿದೆ. ಅವರ ಶವ ಮರಣೋತ್ತರ ಪರೀಕ್ಷೆಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.

ಟಿಪ್ಪರ್ ವಾಹನ ಹನುಮಸಾಗರ ಮೂಲದ್ದು, ಚಾಲಕ‌ ಲಕ್ಷ್ಮಣ ಭೋವಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

5-pavagada

Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

6

Mangaluru: ಕಾಂಕ್ರೀಟ್‌ ರಸ್ತೆಯ ನಡುವೆ ಹಣ್ಣಿನ ಫ‌ಸಲು!

5(1

Mangaluru: ಕದ್ರಿ ಹಿಲ್ಸ್‌  ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

4(1

Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.