ಕುಷ್ಟಗಿ: 63 ಸಾವಿರ ಸಸಿ ನೆಡಲು ಅರಣ್ಯ ಇಲಾಖೆ ಆಂದೋಲನ


Team Udayavani, Jun 6, 2024, 4:55 PM IST

ಕುಷ್ಟಗಿ: 63 ಸಾವಿರ ಸಸಿ ನೆಡಲು ಅರಣ್ಯ ಇಲಾಖೆ ಆಂದೋಲನ

ಉದಯವಾಣಿ ಸಮಾಚಾರ
ಕುಷ್ಟಗಿ: ಈ ಬಾರಿ ನಿರೀಕ್ಷೆಯಂತೆ ಮಳೆಯಾಗುತ್ತಿದ್ದಂತೆ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಅರಣ್ಯೀಕರಣಕ್ಕಾಗಿ 63,030 ಸಸಿಗಳನ್ನು ನೆಡಲು ಮುಂದಾಗಿದೆ. ಡೀಮ್ಡ್ ಆರಣ್ಯ ಸೇರಿದಂತೆ ಕಾಯ್ದಿಟ್ಟ ಅರಣ್ಯ ಪ್ರದೇಶ, ರಸ್ತೆ ಬದಿ ನೆಡುತೋಪುಗಳಲ್ಲಿ ಆದ್ಯತೆಯಾಗಿ ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು, ಮಳೆಯಾದ ಪ್ರದೇಶಗಳಲ್ಲಿ ಸಸಿಗಳನ್ನು ನೆಡುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತಲ್ಲೀನರಾಗಿದ್ದಾರೆ.

ಪರಿಸರ ಸಂರಕ್ಷಣೆ ಹಾಗೂ ಸಮರ್ಪಕ ಮಳೆಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಡಬೇಕೆನ್ನುವ ಉದ್ದೇಶದೊಂದಿಗೆ ಈ ಬಾರಿ ಮೇ ತಿಂಗಳ ಕೊನೆಯ ವಾರದಲ್ಲಿ ಉತ್ತಮ ಮಳೆಯಾಗಿದೆ. ಜೂನ್‌ ತಿಂಗಳ ಆರಂಭವಾಗುತ್ತಿದ್ದಂತೆ ಮುಂಗಾರು ಹಂಗಾಮಿನಲ್ಲಿ ಸಸಿ ನೆಡುವ ಕಾರ್ಯಕ್ಕೆ ವೇಗ ಸಿಕ್ಕಿದೆ.

ಇಲ್ಲಿನ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಕಲಕೇರಿ ಸಸ್ಯ ಕ್ಷೇತ್ರದಲ್ಲಿ ಪೋಷಣೆ ಮಾಡಿದ ವಿವಿಧ ಜಾತಿಗಳ ಸಸಿಗಳನ್ನು ಯೋಜನೆಯಂತೆ ನೆಡಲು ಸಿದ್ದತೆಯಲ್ಲಿದ್ದು ರೈತರಿಗೂ ರಿಯಾಯಿತಿ ದರದಲ್ಲಿ ಮಾರಾಟಕ್ಕೂ ಸರ್ವ ಸಿದ್ಧತೆ ಮಾಡಿಕೊಂಡಿದೆ. ಕಲಕೇರಿ ಸಸ್ಯ ಪಾಲನ ಕ್ಷೇತ್ರದಲ್ಲಿ ಅರಳಿ, ಬಸರಿ, ಹೊಂಗೆ, ಬೇವು, ತಪಸಿ, ಕರಿಬೇವು, ನೇರಳೆ, ಚಾಲೆ, ಸೀತಾಫಲ, ಬಸವಪಾದ, ಅಶೋಕ, ನಿಂಬು, ರೇನ್‌ ಟ್ರೀ, ಹುಣಸೆ, ನಾಯಿ ನೇರಳೆ, ಶ್ರೀಗಂಧ, ಬದಾಮಿ, ಮಹಾಗನಿ, ಆಲ, ಗೋಣಿ, ಅತ್ತಿ, ಹೊಳೆಮತ್ತಿ, ಚಾರಿ, ನೋನಿ, ಬಿಲ್ವಪತ್ರೆ, ಆಕ್ಲೆಪಾ, ಪಾಮ್‌, ಪೇರಲ, ಪಾರಿಜಾತ, ದಾಸವಾಳ, ಸಿಹಿ ಹುಣಸೆ, ಗಂಟೆ ಹೂ ಲಭ್ಯ ಇದೆ.

ಪ್ರಾದೇಶಿಕ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ತಾವರಗೇರ, ಹನುಮನಾಳ, ಹನುಮಸಾಗರ ಹಾಗೂ ಕುಷ್ಟಗಿ ಶಾಖಾ ವಲಯ ವ್ಯಾಪ್ತಿಯಲ್ಲಿ ಅರಣ್ಯೀಕರಣ ಹಾಗೂ ರಸ್ತೆ ಬದಿಗಳಲ್ಲಿ ಆದ್ಯತೆಯಾಗಿ ಗಿಡಗಳನ್ನು ನೆಡಲು ಆರಂಭಿಸಲಾಗಿದೆ. ಇಲ್ಲಿನ ಕಲಕೇರಿ ಸಸ್ಯ ಕ್ಷೇತ್ರದಲ್ಲಿ ವಿವಿಧ ಜಾತಿಯ 63,030 ಸಸಿಗಳನ್ನು ಬೆಳೆಸಲಾಗಿದೆ. ಅರಣ್ಯ ಪ್ರದೇಶಗಳಲ್ಲಿ 28,050, ರೈತರಿಗೆ ರಿಯಾಯಿತಿ ದರದಲ್ಲಿ 33 ಸಾವಿರ ಹಾಗೂ ರಸ್ತೆ ಬದಿ ನೆಡುತೋಪಿಗಾಗಿ 1,980 ಸಸಿಗಳನ್ನು ಬೆಳೆಸಲಾಗಿದೆ. ಮಳೆಯಾಗಿರುವ ಪ್ರದೇಶದಲ್ಲಿ ಗಿಡಗಳನ್ನು ಸಾಗಿಸಿ ನೆಡುವ ಕಾರ್ಯ ಆರಂಭಿಸಲಾಗಿದೆ. ಈಗಾಗಲೇ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶ ಹಾಗೂ ತಾವರಗೇರಾ ಕಾಯ್ದಿಟ್ಟ ಅರಣ್ಯ ಪ್ರದೇಶಗಳಲ್ಲಿ ಸಸಿ ನಾಟಿ ಮಾಡಲಾಗಿದೆ.

ಕೆಲವೆಡೆ ಅರಣ್ಯ ಒತ್ತುವರಿ ಜಮೀ ನುಗಳಲ್ಲಿ ಸಸಿಗಳನ್ನು ನಾಟಿ ಮಾಡಲಾಗಿದೆ. ಈಗಾಗಲೇ ಕ್ಯಾದಿಗುಪ್ಪ ಕೈಗಾರಿಕಾ ಪ್ರದೇಶದಲ್ಲಿ
750 ಗಿಡ, ವೆಂಕಟಾಪೂರ ಕ್ರಾಸ್‌ ರಸ್ತೆ ಬದಿ 500 ಹಾಗೂ ಹನುಮನಾಳ-ಮಾಲಗಿತ್ತಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 2,500 ಸಸಿ ನಾಟಿ ಮಾಡಲಾಗಿದೆ.

2024-25ನೇ ಸಾಲಿಗೆ 100 ಹೆಕ್ಟೇರ್‌ನಲ್ಲಿ ಸಸಿ ಬೆಳೆಸಲು ಗುರಿ ಹೊಂದಲಾಗಿದೆ. ಈ ಕುರಿತು ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಬಾರಿ ಉತ್ತಮ ಮಳೆಯಾಗಿದೆ. ಗುಡ್ಡಗಾಡು ಪ್ರದೇಶ ಹಾಗೂ ಅರಣ್ಯ ಪ್ರದೇಶದ ಒತ್ತುವರಿ ಜಮೀನುಗಳಲ್ಲಿ ಗಿಡ ನೆಡಲಾಗುವುದು. ಸಾರ್ವಜನಿಕರು, ರೈತರು, ಸಂಘ ಸಂಸ್ಥೆ ಅವರು ಗಿಡ ನೆಡುವುದಷ್ಟೇ ಅಲ್ಲ ವರ್ಷದುದ್ದಕ್ಕೂ ಕಾಳಜಿ ವಹಿಸಬೇಕು ಎನ್ನುವುದು ಅರಣ್ಯ ಇಲಾಖೆಯ ಕಾಳಜಿ.
*ರಿಯಾಜ್‌ ಗನಿ,
ಪ್ರಭಾರ ಅರಣ್ಯಾಧಿಕಾರಿ ಪ್ರಾದೇಶಿಕ ವಲಯ ಕುಷ್ಟಗಿ

*ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

1-qweqewqe

Anegundi; ಕೆಂಪೇಗೌಡರನ್ನು ಬಂಧನದಲ್ಲಿಟ್ಟಿದ್ದ ಆನೆಗೊಂದಿ ಸೆರೆಮನೆ ಪತ್ತೆ

1-kushtagi

Kushtagi: ವಿದ್ಯುತ್ ಪ್ರವಹಿಸಿದ ಸ್ಟಾರ್ಟರ್ ಬಟನ್ ಸ್ಪರ್ಶಿಸಿ ರೈತ ದುರ್ಮರಣ

Minister Shivraj Thangadagi deeply mourns the demise of Dr. Kamala Hampana

ಡಾ.ಕಮಲಾ ಹಂಪನಾ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.