ಕುಷ್ಟಗಿ: ಗಿಡಗಳಿಗೆ ನೀರುಣಿಸಿ ಪರಿಸರ ಪ್ರೇಮ ಮೆರೆದ ಯುವಕರು


Team Udayavani, Feb 26, 2022, 12:29 PM IST

10plants

ಕುಷ್ಟಗಿ: ತಾಲೂಕಿನ ನಿಡಶೇಸಿ ಕೆರೆಯ ಒಡ್ಡು ಪ್ರದೇಶದಲ್ಲಿ ನೆಟ್ಟ ಗಿಡಗಳು ನೀರಿಲ್ಲದೇ ಒಣಗುತ್ತಿರುವುದನ್ನು ಗಮನಿಸಿದ ಯುವಕರು ಸ್ವಯಂ ಪ್ರೇರಿತರಾಗಿ ಗಿಡಗಳಿಗೆ ನೀರುಣಿಸಿ ಪರಿಸರ ಪ್ರೇಮ ಮೆರೆದಿದ್ದಾರೆ.

2018ರಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಂಡ‌‌ ನಿಡಶೇಸಿ ಕೆರೆಗೆ ಸುತ್ತಲೂ ಒಡ್ಡು ನಿರ್ಮಿಸಿದ್ದರು. ಈ ಒಡ್ಡಿನ ಅಕ್ಕ ಪಕ್ಕದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ನೆರವಿನಿಂದ 800 ಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ನಿರ್ವಹಣೆಗೆ ವನಪಾಲಕರನ್ನು ನೇಮಿಸಿತ್ತು. ಆರಂಭಿಕ ವರ್ಷದಲ್ಲಿ ಅರಣ್ಯ ಇಲಾಖೆ ಬೇಸಿಗೆ ಸಂದರ್ಭದಲ್ಲಿ ನೀರುಣಿಸಿತ್ತು.

ಆದರೆ ಪ್ರಸಕ್ತ ವರ್ಷದಲ್ಲಿ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರುಣಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಹುತೇಕ ಗಿಡಗಳು ಒಣಗಲಾರಂಭಿಸಿದ್ದವು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ದ್ವಾರಕಾಮಯಿ‌ ಸೇವಾ ಟ್ರಸ್ಟ್ ಯುವಕರು ತಾವೇ ವಂತಿಗೆ ಸಂಗ್ರಹಿಸಿಕೊಂಡು ಶುಕ್ರವಾರ 150 ಕ್ಕೂ ಅಧಿಕ ಗಿಡಗಳಿಗೆ ಒಟ್ಟು ನಾಲ್ಕು ಟ್ಯಾಂಕರ್ ನೀರನ್ನು ಉರಿ ಬಿಸಿಲು‌ ಲೆಕ್ಕಿಸದೇ ನೀರುಣಿಸಿದ್ದಾರೆ.

ಇದನ್ನೂ ಓದಿ:ಗಮನ ಸೆಳೆದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ

ದ್ವಾರಕಾಮಯಿ ಸಾಯಿ ಸೇವಾ ಟ್ರಸ್ಟ್ ನ ಕೃಷ್ಣ ಕಂದಕೂರು, ರಾಜು ಕತ್ರಿ, ಸತೀಶ್ ಕಂದಗಲ್, ನವೀನ್ ಕಲಾಲ್, ಶ್ರೀಧರ ಮೊದಲಾವರು ಬೆಳಗ್ಗೆ 10 ರಿಂದ ಸಂಜೆ 5 ರವರೆಗೂ ನೀರುಣಿಸಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಪಾತೀ ಮಾಡಲು ಸಹಕರಿಸಿದ್ದಾರೆ.

ಈ ಕುರಿತು ಉದಯವಾಣಿ ಯೊಂದಿಗೆ ಮಾತನಾಡಿದ ಕೃಷ್ಣಾ ಕಂದಕೂರು, ನಿಡಶೇಷಿ ಕೆರೆಯ ದಡದ ಒಡ್ಡಿನಲ್ಲಿ ಗಿಡಗಳಿಗೆ ಈಗಿನ ಸಂದರ್ಭದಲ್ಲಿ ನೀರು ಅಗತ್ಯವಾಗಿತ್ತು. ಅರಣ್ಯ ಇಲಾಖೆಯ ಮರ್ಜಿ ಕಾಯದೇ ನಾವೇ ಸ್ನೇಹಿತರು ಪಾಕೇಟ್ ಮನಿಯನ್ನು ಪ್ರತಿ ಟ್ಯಾಂಕರ್ ಗೆ 500 ರೂ. ನಂತೆ ಈ ದಿನ ನಾಲ್ಕು‌ ಟ್ಯಾಂಕರ್ ನೀರುಣಿಸಿರುವುದು ಸಾರ್ಥಕ ಭಾವನೆ ವ್ಯಕ್ತವಾಗಿದೆ. ಇನ್ನೂ ವಾರ ಬಿಟ್ಟು ಇನ್ನುಳಿದ ಗಿಡಗಳಿಗೆ ನೀರುಣಿಸುತ್ತೇವೆ. ಹುಟ್ಟು ಹಬ್ಬದ ಆಚರಣೆ ವೇಳೆ ಸಾವಿರಾರು ಖರ್ಚು ಮಾಡುವ ಬದಲಿಗೆ ಅದೇ ಹಣದಲ್ಲಿ ಇಲ್ಲಿನ ಗಿಡಗಳಿಗೆ ತಾವೇ ಖುದ್ದಾಗಿ ನೀರುಣಿಸಬೇಕು ಅಂದಾಗ ಮಾತ್ರ ಹುಟ್ಟು ಹಬ್ಬ ಸಾರ್ಥಕವಾಗುತ್ತಿದೆ‌ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.