![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 18, 2018, 5:27 PM IST
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ರೈತ ಸಂಘ, ಕೂಲಿಕಾರರ ಸಂಘದ ಹೆಸರಿನಲ್ಲಿ ತಾಪಂ ಎದುರು ಪದೇ ಪದೇ ಧರಣಿ ನಡೆಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ತಾಪಂ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ತಾಪಂ ಇಒ ಡಾ| ಡಿ. ಮೋಹನ್, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ, ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷ ವೆಂಕಟೇಶ ವಂದಾಲ, ಅಧ್ಯಕ್ಷ ಬಡಿಗೇರ ಅವರ ನೇತೃತ್ವದಲ್ಲಿ ಪಿಡಿಒಗಳು ಪಿಎಸ್ಐ ವಿಶ್ವನಾಥ ಹಿರೇಗೌಡ್ರು ಅವರಿಗೆ ದೂರು ಸಲ್ಲಿಸಿದರು. ತಾಲೂಕಿನಲ್ಲಿ ನರೇಗಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕೆಲ ಸಂಘಟನೆಗಳ ಸದಸ್ಯರು ಅಡ್ಡಿಯಾಗುತ್ತಿದ್ದಾರೆ. ಈ ಸಂಘದ ಮುಖಂಡರು ವಿವಿಧ ಗ್ರಾಮಗಳಿಗೆ ತೆರಳಿ ಸರ್ಕಾರದ ಸೌಲಭ್ಯಗಳನ್ನು ಕೊಡಿಸುವ ಆಮಿಷವೊಡ್ಡಿ ಜನರನ್ನು ಕರೆತಂದು ಪ್ರತಿಭಟನೆಗೆ ಬಳಸಿಕೊಳ್ಳುತಿದ್ದಾರೆ.
ಸಂಘಟನೆ ಮುಖಂಡ ಆರ್.ಕೆ. ದೇಸಾಯಿ ಅವರು ಅಮಾಯಕರನ್ನು ಕರೆದುಕೊಂಡು ಬಂದು ಅಧಿಕಾರಿಗಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಅಮಾಯಕ ಮಹಿಳೆಯರು, ವೃದ್ಧರು, ರೋಗಿಗಳಿಗೆ ಏನೂ ಗೊತ್ತಿರದಿದ್ದರೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೇ ಸರ್ಕಾರಿ ಕೆಲಸಕ್ಕೂ ಅಡ್ಡಿಯಾಗುತ್ತಿದ್ದಾರೆ. ಹಲಗಿ ಬಾರಿಸುವುದು, ಘೋಷಣೆ ಕೂಗುವುದು, ಸಂಜೆ ವೇಳೆ ಪಾನಮತ್ತರಾಗಿ ಅಧಿಕಾರಿಗಳನ್ನು ಹೀಯಾಳಿಸುವುದು, ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ತಿಂಗಳಲ್ಲಿ ಎರಡ್ಮೂರು ಬಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅ. 4ರಿಂದ ನರೇಗಾ ಯೋಜನೆಯ ಕಾಯಕ ಬಂಧುಗಳು (ಮೇಟಿ) ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ವೇಳೆಯಲ್ಲೂ ವಿನಾಕಾರಣ ತೊಂದರೆ ನೀಡಲಾಗಿದೆ. ಇದಕ್ಕೆಲ್ಲ ರೈತ ಮುಖಂಡ ಆರ್.ಕೆ. ದೇಸಾಯಿ ಕಾರಣೀಕರ್ತರು. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ವಿವರಿಸಿ 67 ಜನ ಅಧಿಕಾರಿಗಳು ಸಹಿ ಹಾಕಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.