ಅವೈಜ್ಞಾನಿಕ ಕಾಮಗಾರಿ : ಹೆದ್ದಾರಿಯ ಮೇಲ್ಸೇತುವೆ ಮೇಲೆ ಅಪಘಾತಗಳ ಸರಮಾಲೆ
Team Udayavani, Jun 12, 2022, 7:26 PM IST
ಕುಷ್ಟಗಿ : ಸ್ವಲ್ಪ ಮಳೆಯಾದರೂ ಸಾಕು ಕುಷ್ಟಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಮೇಲೆ ನಿಲ್ಲುತ್ತಿರುವ ನೀರಿನಿಂದ ಅಪಘಾತಗಳು ಸಂಭವಿಸುತ್ತಿವೆ .
ಸುಗಮ ಸಂಚಾರಕ್ಕಾಗಿ ಹೆದ್ದಾರಿ ಅಪಘಾತ ನಿಯಂತ್ರಿಸಲು ಕುಷ್ಟಗಿ ಹೆದ್ದಾರಿಗೆ 66 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲಾಗಿದ್ದು ಅಪಘಾತ ನಿಯಂತ್ರಣದಲ್ಲಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧೀಕಾರ (ಎನ್.ಎಚ್.ಎ.ಐ) ನಿರ್ಲಕ್ಷೆಯಿಂದಾಗಿ ಹೆದ್ದಾರಿ ಮೇಲ್ಸೇತುವೆ ಮೇಲೆ ವಿನಾಕಾರಣ ಅಪಘಾತ ಸಂಭವಿಸುತ್ತಿವೆ.
ಹೆದ್ದಾರಿ ಮೇಲ್ಸೇತುವೆ ( ಸಹದೇವಪ್ಪ ಕಟ್ಟಿಗೆ ಅಡ್ಡೆ ಪಕ್ಕದಲ್ಲಿ) ಮಳೆ ನೀರು ಹರಿಯದೇ ಒಂದೆಡೆ ತಗ್ಗು ಪ್ರದೇಶದಲ್ಲಿ ನಿಲ್ಲುತ್ತಿದ್ದು, ಇದರಿಂದ ಚಾಲಕರು ಸಹಜ ಹೆದ್ದಾರಿ ಎಂದು ಗ್ರಹಿಸಿ ಚಾಲನೆಯಿಂದ ವಾಹನಗಳು ಮುಗುಚಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸುತ್ತಿವೆ. ಇದೇ ರೀತಿ ಎಂಟು ಅಪಘಾತಗಳು ಸಂಭವಿಸಿವೆ. ಈ ಅವಸ್ಥೆಯ ಬಗ್ಗೆ ಸ್ಥಳೀಯರು ಹೆದ್ದಾರಿ ಪ್ರಾಧೀಕಾರದ ಗಮನಕ್ಕೆ ತಂದರೂ ಪ್ರಯೋಜನೆ ಆಗಿಲ್ಲ. ಮೇಲ್ಸೇತುವೆ ಮೇಲೆ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಸ್ಥಳೀಯರ ಆಗ್ರಹವಾಗಿದೆ.
ಈ ಕುರಿತು ಸಿಪಿಐ ಈ ವಿಷಯ ಗಮನಕ್ಕೆ ಬಂದಿರಲಿಲ್ಲ ಈ ಕೂಡಲೇ ಹೆದ್ದಾರಿ ಗುತ್ತಿಗೆವಹಿಸಿಕೊಂಡಿರುವ ಓಎಸ್ ಇ ಕಂಪನಿ ಯೋಜನಾ ವ್ಯವಸ್ಥಾಪಕ ರಾಮಪ್ಪ ಕುಬಕಡ್ಡಿ ಸಂಪರ್ಕಿಸಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.
ಇದನ್ನೂ ಓದಿ : ಸನಾತನ ಮೌಲ್ಯಗಳನ್ನು ಮಕ್ಕಳ ತಲೆಯಲ್ಲಿ ತುರುಕುವುದು ಅಪಾಯಕಾರಿ: ಕುಂ.ವೀರಭದ್ರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.