![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 12, 2022, 7:26 PM IST
ಕುಷ್ಟಗಿ : ಸ್ವಲ್ಪ ಮಳೆಯಾದರೂ ಸಾಕು ಕುಷ್ಟಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಮೇಲೆ ನಿಲ್ಲುತ್ತಿರುವ ನೀರಿನಿಂದ ಅಪಘಾತಗಳು ಸಂಭವಿಸುತ್ತಿವೆ .
ಸುಗಮ ಸಂಚಾರಕ್ಕಾಗಿ ಹೆದ್ದಾರಿ ಅಪಘಾತ ನಿಯಂತ್ರಿಸಲು ಕುಷ್ಟಗಿ ಹೆದ್ದಾರಿಗೆ 66 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲಾಗಿದ್ದು ಅಪಘಾತ ನಿಯಂತ್ರಣದಲ್ಲಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧೀಕಾರ (ಎನ್.ಎಚ್.ಎ.ಐ) ನಿರ್ಲಕ್ಷೆಯಿಂದಾಗಿ ಹೆದ್ದಾರಿ ಮೇಲ್ಸೇತುವೆ ಮೇಲೆ ವಿನಾಕಾರಣ ಅಪಘಾತ ಸಂಭವಿಸುತ್ತಿವೆ.
ಹೆದ್ದಾರಿ ಮೇಲ್ಸೇತುವೆ ( ಸಹದೇವಪ್ಪ ಕಟ್ಟಿಗೆ ಅಡ್ಡೆ ಪಕ್ಕದಲ್ಲಿ) ಮಳೆ ನೀರು ಹರಿಯದೇ ಒಂದೆಡೆ ತಗ್ಗು ಪ್ರದೇಶದಲ್ಲಿ ನಿಲ್ಲುತ್ತಿದ್ದು, ಇದರಿಂದ ಚಾಲಕರು ಸಹಜ ಹೆದ್ದಾರಿ ಎಂದು ಗ್ರಹಿಸಿ ಚಾಲನೆಯಿಂದ ವಾಹನಗಳು ಮುಗುಚಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸುತ್ತಿವೆ. ಇದೇ ರೀತಿ ಎಂಟು ಅಪಘಾತಗಳು ಸಂಭವಿಸಿವೆ. ಈ ಅವಸ್ಥೆಯ ಬಗ್ಗೆ ಸ್ಥಳೀಯರು ಹೆದ್ದಾರಿ ಪ್ರಾಧೀಕಾರದ ಗಮನಕ್ಕೆ ತಂದರೂ ಪ್ರಯೋಜನೆ ಆಗಿಲ್ಲ. ಮೇಲ್ಸೇತುವೆ ಮೇಲೆ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಸ್ಥಳೀಯರ ಆಗ್ರಹವಾಗಿದೆ.
ಈ ಕುರಿತು ಸಿಪಿಐ ಈ ವಿಷಯ ಗಮನಕ್ಕೆ ಬಂದಿರಲಿಲ್ಲ ಈ ಕೂಡಲೇ ಹೆದ್ದಾರಿ ಗುತ್ತಿಗೆವಹಿಸಿಕೊಂಡಿರುವ ಓಎಸ್ ಇ ಕಂಪನಿ ಯೋಜನಾ ವ್ಯವಸ್ಥಾಪಕ ರಾಮಪ್ಪ ಕುಬಕಡ್ಡಿ ಸಂಪರ್ಕಿಸಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.
ಇದನ್ನೂ ಓದಿ : ಸನಾತನ ಮೌಲ್ಯಗಳನ್ನು ಮಕ್ಕಳ ತಲೆಯಲ್ಲಿ ತುರುಕುವುದು ಅಪಾಯಕಾರಿ: ಕುಂ.ವೀರಭದ್ರಪ್ಪ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.