ಕಾಂಗ್ರೆಸ್ ಭಿನ್ನರ ಬಗ್ಗೆ ಕುಷ್ಟಗಿ ಶಾಸಕ ಬಯ್ಯಾಪೂರ ನೋ ಕಾಮೆಂಟ್
Team Udayavani, Nov 11, 2022, 7:15 PM IST
ಕುಷ್ಟಗಿ: ಕಾಂಗ್ರೆಸ್ ಪಕ್ಷದ ಅತೃಪ್ತ ಕೆಲವರ ಬಂಡಾಯದ ಬಗ್ಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ನೋ ಕಾಮೆಂಟ್ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲವು ಭಿನ್ನಮತೀಯರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪಕ್ಷವೆಂದ ಮೇಲೆ ಹಲವು ಜನ ಆಕಾಂಕ್ಷಿ ಇರಬಹುದು ಅವರಲ್ಲಿ ಇವರು ( ಪ್ರಭಾಕರ ಚಿಣಿ) ಒಬ್ಬರಾಗಿದ್ದಾರೆ. ಇದರ ಬಗ್ಗೆ ಮಾಹಿತಿ ಇಲ್ಲ ಮಾಧ್ಯಮಗಳಿಂದ ತಿಳಿದುಕೊಂಡಿರುವೆ ಎಂದಿದ್ದಾರೆ.
ಬೆಳವಣಿಗೆ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ, ಪ್ರತಿಕ್ರಿಯಿಸುವ ಅಗತ್ಯವೂ ನನಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಅರ್ಜಿ ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಭಿನ್ನಮತ ಸಹಜವಾಗಿರುತ್ತದೆ ಇದನ್ನು ನಮ್ಮ ನಾಯಕರು ಸರಿಪಡಿಸಲಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೆಬಿಜೆ ಎನ್ ಎಲ್ ನಿವೃತ್ತ ಪ್ರಧಾನ ಇಂಜಿನಿಯರ್ ಪ್ರಭಾಕರ ಚಿಣಿ ಟಿಕೆಟ್ ಆಕಾಂಕ್ಷಿ ಎಂದು ಗುರುವಾರ ಬೆಂಗಳೂರಿನಲ್ಲಿ ಪಕ್ಷದ ಕಾರ್ಯದರ್ಶಿ ನಾರಾಯಣ ಅವರಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪರಶುರಾಮ ನಾಗರಾಳ, ಚಂದಪ್ಪ ತಳವಾರ, ಹನುಮಂತಪ್ಪ ಚೌಡಕಿ, ಅಶೋಕ ಬಳೂಟಗಿ, ಸಯ್ಯದಸಾಬ್ ಅತ್ತಾರ, ಪುರಸಭೆ ಕಾಂಗ್ರೆಸ್ ಸದಸ್ಯ ವಸಂತ ಮೇಲಿನಮನಿ, ಯಲ್ಲಪ್ಪ ಗದ್ದಿ,ಚಂದಪ್ಪ ಹೊಟ್ಟಿ, ಶಂಕ್ರಯ್ಯ ಕಂಪಾಪೂರಮಠ, ಪುರಸಭೆ ಪಕ್ಷೇತರ ಸದಸ್ಯ ಅಂಬಣ್ಣ ಭಜಂತ್ರಿ, ವೀರೇಶ ಬಂಗಾರಶೆಟ್ಟರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ ಪಾಟೀಲ
Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
“ಸ್ಮಾರ್ಟ್’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ
D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್ಗೇಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.