Koppal; ಹೀಗೆ ಮಾತನಾಡಿದರೆ 67ರಿಂದ 37ಕ್ಕೆ ಇಳಿಯುತ್ತದೆ: BJPವಿರುದ್ಧ ಮಧು ಬಂಗಾರಪ್ಪ ಟೀಕೆ


Team Udayavani, Oct 21, 2023, 6:27 PM IST

Koppal; ಹೀಗೆ ಮಾತನಾಡಿದರೆ 67ರಿಂದ 37ಕ್ಕೆ ಇಳಿಯುತ್ತದೆ: BJPವಿರುದ್ಧ ಮಧು ಬಂಗಾರಪ್ಪ ಟೀಕೆ

ಕೊಪ್ಪಳ: ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 67ಕ್ಕೆ ಇಳಿದಿದೆ. ಯಾಕೆ ಅಷ್ಟು ಸ್ಥಾನಕ್ಕಿಳಿಯುತು? ಹೀಗೆ ಮಾತನಾಡಿದರೆ ಮುಂದೆ 37ಕ್ಕೆ ಇಳಿಯುತ್ತೆ ಎನ್ನುವ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಂಪಿ ಚುನಾವಣೆ ಬಳಿಕ ಸರ್ಕಾರ ಪತನವಾಗುತ್ತೆ ಎನ್ನುವ ಬಿಜೆಪಿಗರ ಹೇಳಿಕೆಗೆ ಟಾಂಗ್ ನೀಡಿದರು.

ಕುಕನೂರು ತಾಲೂಕಿನ ಮಸಬಂಚಿನಾಳ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅವರು ಹೀಗೆ ಮಾತನಾಡಿಯೇ 67 ಸ್ಥಾನಕ್ಕೆ ಇಳಿದಿದ್ದಾರೆ. ಇದಕ್ಕೆ ಮೊದಲು ಉತ್ತರ ಕೊಡಲಿ. ಬಿಜೆಪಿಗರು ಸೋಲಿನ ಹತಾಶೆಯಿಂದ ಹೀಗೆ ಬಸ್ ನಿಲ್ದಾಣದಲ್ಲಿ ನಿಂತು ನಮ್ಮ ಬಗ್ಗೆ ಜ್ಯೋತಿಷ್ಯ ಹೇಳುವ ಕೆಲಸಕ್ಕೆ ನಿಂತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಆಡಳಿತ ಪೂರೈಸುತ್ತದೆ. ಯಾವುದೇ ಸಂದೇಹವಿಲ್ಲ ಎಂದರು.

ಜಾರಕಿಹೊಳಿ ಅವರ ಅಸಮಧಾನದ ವಿಚಾರ ನನಗೆ ಗೊತ್ತಿಲ್ಲ. ಅವರ ಹೇಳಿಕೆಯನ್ನು ವಿಶ್ಲೇಷಣೆ ಮಾಡಲ್ಲ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾಲ್ಕುವರೆ ವರ್ಷ ಆಡಳಿತ ಪೂರೈಸುತ್ತೇವೆ. ಸಿಎಂ ಬದಲಾವಣೆಯ ವಿಚಾರ ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಆ ಆದೇಶ ನಾವು ಪಾಲಿಸಬೇಕು ಎಂದರು.

ಶಿಕ್ಷಕರ ನೇಮಕಾತಿ ಗೊಂದಲ ಪರಿಹಾರ ಶೀಘ್ರ: ಶಿಕ್ಷಕರ ನೇಮಕಾತಿಯಲ್ಲಿನ ಗೊಂದಲಗಳನ್ನು ಶೀಘ್ರ ಪರಿಹಾರ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೂ ಕಾನೂನು ಸಲಹೆ ಪಡೆದು ಆದೇಶ ಪ್ರತಿ ನೀಡಲು ಪ್ರಯತ್ನಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದಲ್ಲಿ ಶನಿವಾರ ಪಿಯು ಕಾಲೇಜು ಉದ್ಘಾಟನೆ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣ ನ್ಯಾಯಾಲಯದಲ್ಲಿದೆ. ಈಚೆಗೆ ಆದೇಶ ಬಂದ ನಂತರ ಕಕ ಜಿಲ್ಲೆಗಳನ್ನು ಹೊರತುಪಡಿಸಿ ಬಾಕಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುತ್ತಿದೆ. ನಮಗೆ ನ್ಯಾಯಾಂಗ ಪ್ರಶ್ನಿಸುವ ಅಧಿಕಾರವಿಲ್ಲ. ಸರ್ಕಾರ ನಿಮ್ಮ ಪರವಾಗಿದೆ. ಕಾನೂನು ತೊಡಕು ಸರಿಪಡಿಸಿಕೊಂಡು ಆದೇಶ ಕೊಡಲಾಗುವುದು. ಅಡ್ವಕೇಟ್ ಜನರಲ್ ಹೊರ ದೇಶದಲ್ಲಿದ್ದಾರೆ. ಅವರು ಹಾಗೂ ಶಿಕ್ಷಕರ ಪರವಾಗಿ ವಾದ ಮಂಡಿಸಿದ ವಕೀಲರ ಅಭಿಪ್ರಾಯ ಪಡೆಯಲಾಗುವುದು. ಕಕ ಭಾಗದ 4 ಸಾವಿರ ಅಭ್ಯರ್ಥಿಗಳಿಗೆ ಖಂಡಿತವಾಗಿ ನೇಮಕಾತಿ ಮಾಡಿಕೊಳ್ಳುತ್ತೇವೆ. ಅ.25 ರಂದು ಅಧಿಕಾರಿಗಳ ಸಭೆ ಕರೆದಿರುವೆ. ಈ ಬಗ್ಗೆ ಸಂಪೂರ್ಣ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ 40 ಸಾವಿರ ಶಿಕ್ಷರ ಕೊರತೆ ಇದೆ. ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಸಿಎಂ ಬಳಿ ಚರ್ಚಿಸಿ ಮುಂದಿನ ವರ್ಷ 20 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು. ದೈಹಿಕ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡುತ್ತೇವೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.