Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು
Team Udayavani, Oct 25, 2024, 10:31 AM IST
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಕೋರ್ಟು ತೀರ್ಪು ಪ್ರಕರಣದ ಬೆನ್ನಲ್ಲೇ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತನಾದ ಅಪರಾಧಿಯನ್ನು ರಾಮಣ್ಣ ತಂದೆ ಲಕ್ಷ್ಮಣ ಭೋವಿ (30) ಎಂದು ಗುರುತಿಸಲಾಗಿದೆ.
ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಪ್ರಕರಣದಲ್ಲಿ ರಾಮಣ್ಣ ಭೋವಿ ಮೇಲೂ ಆರೋಪ ಕೇಳಿ ಬಂದಿತ್ತು. ಈತನೂ ಸೇರಿದಂತೆ 117 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ ಅವರು 101 ಜನರು ಈ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದ್ದರು. ಗುರುವಾರ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ಹಾಗೂ 3 ಅಪರಾಧಿಗಳಿಗೆ 5 ವರ್ಷ ಜೈಲು ಹಾಗೂ ದಂಢ ವಿಧಿಸಿ ತೀರ್ಪು ಪ್ರಕಟಿಸಿದ್ದರು.
ನ್ಯಾಯಾಧೀಶರ ಈ ತೀರ್ಪು ಪ್ರಕಟವಾದ ಬೆನ್ನಲ್ಲೇ ಆರೋಪಿ ರಾಮಣ್ಣ ಬೋವಿ ತೀವ್ರ ಅಸ್ವಸ್ಥನಾಗಿದ್ದ. ಕೋರ್ಟ್ ತೀರ್ಪು ಬಳಿಕ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಪೊಲೀಸರು ಹಾಗೂ ಜೈಲಾಧಿಕಾರಿಗಳು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಈತನು ಮೃತಪಟ್ಟಿದ್ದಾನೆ.
ಈತನು 5 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಈ ಪ್ರಕರಣದಲ್ಲಿ ಈಗಾಗಲೇ 11 ಜನರು ತೀರ್ಪು ಬರುವ ಪೂರ್ವದಲ್ಲಿಯೇ ಮೃತಪಟ್ಟಿದ್ದಾರೆ. ಜೈಲಾಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
Belagavi: ಕಿಡ್ನ್ಯಾಪರ್ಸ್ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು
Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ
Congress MLA; ಸೈಲ್ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?
Kannada Mandatory; ಕನ್ನಡ ಫಲಕ ಕಡ್ಡಾಯ: ಹೈಕೋರ್ಟ್ ತಾಕೀತು
MUST WATCH
ಹೊಸ ಸೇರ್ಪಡೆ
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್; ನಾಯಕನಾಗಿ ನಿತ್ಯಪ್ರಕಾಶ್ ಬಂಟ್ವಾಳ
Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು
Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.