Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ
Team Udayavani, Oct 12, 2024, 12:34 PM IST
ಕೊಪ್ಪಳ: ಹಿರೇಹಳ್ಳ ಜಲಾಶಯದಿಂದ ಹಳ್ಳದ ಪಾತ್ರಕ್ಕೆ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಹಳೆ ಗೊಂಡಬಾಳ ಗ್ರಾಮದಲ್ಲಿ ಸುಮಾರು 80ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡ ಘಟನೆ ಶನಿವಾರ (ಅ.12) ನಡೆದಿದೆ.
ಪ್ರತಿ ವರ್ಷವೂ ಸಹಿತ ಹಿರೇಹಳ್ಳ ಜಲಾಶಯದಿಂದ ಹಳ್ಳಕ್ಕೆ ನೀರು ಹರಿಬಿಟ್ಟ ಸಂದರ್ಭದಲ್ಲಿ ಹಳೇ ಗೊಂಡಬಾಳ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿನ ಸುಮಾರು 60 ರಿಂದ ನೂರಕ್ಕೂ ಹೆಚ್ಚು ಮನೆಗಳು ಜಲಾವೃತಗೊಳ್ಳುತ್ತವೆ. ಹಿರೇ ಹಳ್ಳ ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹಳ್ಳಕ್ಕೆ ಹರಿಬಿಟ್ಟ ವೇಳೆ ಈ ಗ್ರಾಮದಲ್ಲಿ ಹಲವಾರು ಮನೆಗಳು ಜಲಾವೃತವಾಗುತ್ತವೆ.
ಕಳೆದ ಕೆಲವು ದಿನಗಳಿಂದ ಹಿರೇಹಳ್ಳ ಡ್ಯಾಂ ವ್ಯಾಪ್ತಿಯಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿರೇಹಳ್ಳ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹಿರಿದು ಬರುತ್ತಿದೆ. ಜಲಾಶಯದ ನೀರು ಸಂಗ್ರಹಣ ಸಾಮರ್ಥ್ಯವು 1.67 ಟಿಎಂಸಿಯಷ್ಟಿದ್ದು ಶುಕ್ರವಾರ ಮಧ್ಯರಾತ್ರಿಯೇ ಜಲಾಶಯ ಭರ್ತಿಯಾಗಿದೆ. ಮಧ್ಯರಾತ್ರಿ ವೇಳೆಯೇ ಡ್ಯಾಮ್ ನಿಂದ 200 ಕ್ಯೂಸೆಕ್ ನೀರನ್ನು ಮೂರು ಗೇಟ್ ಗಳ ಮೂಲಕ ಹಳ್ಳಕ್ಕೆ ಹರಿಯ ಬಿಡಲಾಗಿದೆ.
ಬೆಳಗಿನ ಜಾವ 6 ರಿಂದ 18884 ಕ್ಯೂಸೆಕ್ ನೀರನ್ನು ಡ್ಯಾಮ್ ನ ಮೂರು ಕ್ರಸ್ಟ್ ಗೇಟ್ ಗಳ ಮೂಲಕ ಹಳ್ಳದ ಪಾತ್ರಕ್ಕೆ ಬಿಡಲಾಗಿದೆ. ಇದರಿಂದ ಹಳ್ಳವು ಭರ್ತಿಯಾಗಿ ಹರಿಯುತ್ತಿದೆ. ಹಳ್ಳದ ಪಾತ್ರ ವ್ಯಾಪ್ತಿಯಲ್ಲಿನ ಹಳೇಗೊಂಡಬಾಳ ಗ್ರಾಮದ ಸುಮಾರು 100 ಮನೆಗಳ ಜನರು ಆತಂಕಗೊಂಡಿದ್ದು, ಮನೆಯಲ್ಲಿ ದವಸ ಧಾನ್ಯಗಳು ನೀರಿನಲ್ಲಿ ನೆನೆದು ಹಾನಿಯಾಗಿವೆ. ಅಲ್ಲದೆ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಸಹಿತ ನೀರಿನಲ್ಲಿ ಜಲಾವೃತಗೊಂಡಿದೆ. ಮಳೆರಾಯನ ಆರ್ಭಟದಿಂದ ರೈತರ ಬದುಕು ಸಂಕಷ್ಟ ಎದುರಿಸುವಂತಹ ಪರಿಸ್ಥಿತಿ ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: “ಬ್ಯಾಂಕ್ನಿಂದ ಎಲ್ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’
Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!
Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ
Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ
2025ಕ್ಕೆ ಬಾಲಿವುಡ್ಗೆ ಸೀಕ್ವೆಲ್ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ
Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.