![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 9, 2021, 4:19 PM IST
ವರದಿ: ಕೆ. ನಿಂಗಜ್ಜ
ಗಂಗಾವತಿ: ಜನರು ಬೋರ್ವೆಲ್ ನೀರು ಕುಡಿದು ವಿವಿಧ ಕಾಯಿಲೆಗಳಿಂದ ಬಳಲುವುದನ್ನು ತಪ್ಪಿಸಲು ಸರಕಾರ ಪ್ರತಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಇವುಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ತಾಲೂಕಿನ 82 ಆರ್ಒ ಪ್ಲಾಂಟ್ಗಳ ಪೈಕಿ 40ಕ್ಕೂ ಅಧಿಕ ಪ್ಲಾಂಟ್ಗಳ ಕಾರ್ಯ ಸ್ಥಗಿತವಾಗಿದೆ. ಇದರಿಂದ ಜನ ಪುನಃ ಬೋರ್ವೆಲ್ ನೀರು ಕುಡಿಯುತ್ತಿರುವುದರಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.
ಸರಕಾರಿ ದಾಖಲೆಗಳಲ್ಲಿ ಮಾತ್ರ ಎಲ್ಲ ಆರ್ಒ ಪ್ಲಾಂಟ್ ಗಳು ಕಾರ್ಯ ನಿರ್ವಹಿಸುತ್ತಿದ್ದು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಪ್ರತಿ ವರ್ಷ ನಿರ್ವಹಣೆಗಾಗಿ ಲಕ್ಷಾಂತರ ರೂ. ಸಂಬಂಧಪಟ್ಟ ಏಜೆನ್ಸಿಯವರಿಗೆ ಪಾವತಿ ಮಾಡಲಾಗುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ. ತಾಲೂಕಿನ 18 ಗ್ರಾಪಂ ವ್ಯಾಪ್ತಿಯಲ್ಲಿ 82 ಆರ್ಒ ಪ್ಲಾಂಟ್ಗಳಿದ್ದು, ಸರಕಾರಿ ದಾಖಲೆಯಲ್ಲಿ ಕೇವಲ 12 ಮಾತ್ರ ಕಾರ್ಯ ನಿರ್ವಹಿಸುತ್ತಿಲ್ಲ. ಉಳಿದಂತೆ 70 ಆರ್ಒ ಪ್ಲಾಂಟ್ಗಳು ಕಾರ್ಯ ಮಾಡುತ್ತಿವೆ ಎಂದು ತಿಳಿಸಲಾಗಿದೆ.
ರಿಯಾಲಿಟಿ ಚೆಕ್ ಮಾಡಿದ ಸಂದರ್ಭದಲ್ಲಿ ಸಾಣಾಪೂರ ಗ್ರಾಪಂನಲ್ಲಿ ಕರಿಯಮ್ಮಗಡ್ಡಿ, ಮುದುಕಪ್ಪನ ಕ್ಯಾಂಪ್, ಆನೆಗೊಂದಿಯಲ್ಲಿ 6ರ ಪೈಕಿ 3, ಮಲ್ಲಾಪುರ 5ರ ಪೈಕಿ 2, ಸಂಗಾಪುರದಲ್ಲಿ 4, ಚಿಕ್ಕಜಂತಗಲ್ 2, ಢಣಾಪುರ 1, ಮರಳಿ 1, ಹೋಸ್ಕೇರಾ 1, ಶ್ರೀರಾಮನಗರ 2, ವಡ್ಡರಹಟ್ಟಿ 1, ಹೇರೂರು 3, ಹಣವಾಳ 2, ಕೇಸರಹಟ್ಟಿ 3, ಬಸಾಪಟ್ಟಣ 1, ಚಿಕ್ಕಬೆಣಕಲ್ 2, ಆಗೋಲಿ 1 ಹಾಗೂ ವೆಂಕಟಗಿ 1 ಆರ್ಒ ಪ್ಲಾಂಟ್ ಕಾರ್ಯ ನಿರ್ವಹಿಸುತ್ತಿಲ್ಲ. ಬೇಸಿಗೆ ಇದೀಗ ಆರಂಭವಾಗಿದೆ.
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜನತೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. ಆರ್ಒ ಪ್ಲಾಂಟಿನ ನಿರ್ವಹಣೆಯನ್ನು ಗ್ರಾಪಂಗಳು ಸರಿಯಾಗಿ ಮಾಡಬೇಕು. ವಾರ್ಷಿಕ ನಿರ್ವಹಣೆ ಮಾಡುವ ಹಣವನ್ನು ಸರಕಾರ ಗ್ರಾಪಂಗಳಿಗೆ ಕೊಡಬೇಕು. ಏಜೆನ್ಸಿಗೆ ಹಣ ಕೊಡುವುದರಿಂದ ಪ್ರಯೋಜನವಾಗುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಶುದ್ಧ ಕುಡಿಯುವ ನೀರಿನ ಘಟಕದ ಯಂತ್ರೋಪಕರಣಗಳ ಮೇಲ್ದರ್ಜೆಗೇರಿಸಬೇಕು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.