ಕುಷ್ಟಗಿ: ಕುಷ್ಠರೋಗದ ಸಂಕಟ ಅನುಭವಿಸಿದ್ದ ಯಲ್ಲಪ್ಪಜ್ಜನ ನೆರವಿಗೆ ಬಂತು ನರೇಗಾ


Team Udayavani, Jun 22, 2022, 3:11 PM IST

ಕುಷ್ಟಗಿ: ಕುಷ್ಠರೋಗದ ಸಂಕಟ ಅನುಭವಿಸಿದ್ದ ಯಲ್ಲಪ್ಪಜ್ಜನ ನೆರವಿಗೆ ಬಂತು ನರೇಗಾ

ಕುಷ್ಟಗಿ: ಬಾಳಿ ಬದುಕಬೇಕಾದ ಹೊತ್ತಲ್ಲಿ ಜೀವನವನ್ನೇ ಹಿಂಡಿತು ಮಹಾಮಾರಿ ಹ್ಯಾನ್ಸನ್ (ಕುಷ್ಠರೋಗ). ಆದರೂ ಎದೆಗುಂದದೇ ರೋಗದ ಜೊತೆಗೆ ಹೋರಾಟದ ಮೂಲಕ ಬದುಕು ಕಟ್ಟಿಕೊಂಡ ವ್ಯಕ್ತಿಗೆ ಆಸರೆಯಾಗಿದ್ದು, ನರೇಗಾ ಯೋಜನೆ.!

ಹೌದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇನಂದಿಹಾಳ ಗ್ರಾಮ ಪಂಚಾಯತಿಯ ಹಿರೇನಂದಿಹಾಳ ಗ್ರಾಮದ ಯಲ್ಲಪ್ಪ ರಾಮಣ್ಣ ಕರಡಿ ಎನ್ನುವವರೇ ಹ್ಯಾನ್ಸನ್ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ. ತನಗಿರುವ ಖಾಯಿಲೆಯನ್ನು ಲೆಕ್ಕಿಸದೇ, 2019 ರಿಂದ ಕೆರೆ, ನಾಲಾ ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಅವರ ಛಲ ಮೆಚ್ಚುವಂತದ್ದು. ದುಡಿಯೋಣ ಬಾ ಅಭಿಯಾನದಲ್ಲಿ ನಿರಂತರವಾಗಿ 90 ದಿನಗಳ ಕಾಲ ಕೂಲಿ ಕೆಲಸವನ್ನು ಮಾಡುವ ಮೂಲಕ ನರೇಗಾ ಯೋಜನೆಯ ಸದುಪಯೋಗ ಪಡೆದುಕೊಂಡು, ತಮ್ಮ ಖಾಯಿಲೆಯ ಖಿನ್ನತೆಯಿಂದ ಹೊರಬಂದಿದ್ದಾರೆ.

ಔಷಧಿಗೆ ಬಳಕೆಯಾಯ್ತು ಖಾತ್ರಿ ಹಣ :-

ಚಿಕ್ಕಂದಿನಿಂದಲೇ ಕುಷ್ಠರೋಗಕ್ಕೆ ತುತ್ತಾಗಿರುವ ಯಲ್ಲಪ್ಪ ಅವರಿಗೆ ಜೀವನ ನಡೆಸುವುದೇ ದೊಡ್ಡ ಸವಾಲಾಗಿತ್ತು. ಕೂಲಿ ಮಾಡಿದರೆ ಮಾತ್ರ ಜೀವನ ಸಾಗಿಸುವಂತಹ ಮಟ್ಟಕ್ಕೆ ತಲುಪಿದ ಯಲ್ಲಪ್ಪ ಅವರಿಗೆ ಗ್ರಾಮದಲ್ಲಿರುವ ಎಲ್ಲಾ ಕೂಲಿಕಾರರು ಕೂಲಿ ಕೆಲಸಕ್ಕೆ ಹೋಗುತ್ತಿರುವುದನ್ನು ಕಂಡು, ತಾನು ಕೂಡ ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸಿ ಜೀವನ ಸಾಗಿಸಬೇಕೆಂಬ ಪಣತೊಟ್ಟರು. ಗ್ರಾ.ಪಂಯಿಂದ ಇಂತಹ ವ್ಯಕ್ತಿಗೆ ನರೇಗಾದಡಿ ಕೂಲಿ ಕೆಲಸ ನೀಡಿರುವುದರಿಂದ ಸಮಾಜದ ಮುಖ್ಯ ವಾಹಿನಿಗೆ ತರಲು ಸಹಕಾರಿಯಾಗಿದೆ. ಇಲ್ಲಿಯವರೆಗೆ 39,168/- ಕೂಲಿ ಹಣ ಪಡೆದಿದ್ದು, ತಮ್ಮ ಚಿಕಿತ್ಸೆ, ಔಷಧಿಗೆ ಯಲ್ಲಪ್ಪ ಖಾತ್ರಿ ಹಣವನ್ನು ಭರಿಸಿದ್ದಾರೆ.

ಬದುಕಿಗೆ ದಾರಿಯಾಯ್ತು ನರೇಗಾ:

ಪ್ರತಿ ದಿನ ಜೀವನದ ಹೊಟ್ಟೆಪಾಡಿಗಾಗಿ ಹಾಗೂ ಮಹಾಮಾರಿ ರೋಗದ ಸಲುವಾಗಿ ದವಾಖಾನೆ ಖರ್ಚು ಭರಿಸಲು ಯಲ್ಲಪ್ಪನ ಯೋಚನೆಗೆ ಬಂದಿದ್ದೇ ನರೇಗಾ ಯೋಜನೆ. ಕಳೆದ 3 ವರ್ಷಗಳಿಂದ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಮಹಾಮಾರಿ ರೋಗಕ್ಕೆ ಎದೆಗುಂದದೇ ಕೂಲಿ ಕೆಲಸಕ್ಕೆ ಹಾಜರಾಗಿ ಜೀವನ ಸಾಗಿಸಬೇಕೆನ್ನುವ ಛಲ ಹೊಂದಿರುವಂತಹ ನನ್ನಂತವರಿಗೆ ಉದ್ಯೋಗ ಖಾತ್ರಿ ಯೋಜನೆಯು ಆಸರೆಯಾಗಿರುವುದು ನಿಜಕ್ಕೂ ಸತ್ಯ. ದುಡಿಯೋಣ ಬಾ ಅಭಿಯಾನದಡಿ ಕೆಲಸ ನೀಡಿರುವುದರಿಂದ ನನಗೆ ಬಹಳ ಸಹಕಾರಿಯಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಯಲ್ಲಪ್ಪ.

ಒಪ್ಪತ್ತಿನ ಊಟಕ್ಕೆ ಅನುಕೂಲ :

ಕಾಯಿಲೆ ಇರುವುದರಿಂದ ನನ್ನನ್ನು ಕುಟುಂಬ ದೂರ ಮಾಡಿದ್ರು, ಉದ್ಯೋಗ ಖಾತ್ರಿ ಮಾತ್ರ ನನ್ನ ಕೈಬಿಡಲಿಲ್ಲ. ಇರೊಷ್ಟು ದಿನ ಯೋಜನೆಯಡಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತೇನೆ. ಇದರಿಂದ ಒಪ್ಪತ್ತಿನ ಊಟಕ್ಕೆ ಅನುಕೂಲ ಆಗೈತ್ರಿ ಅಂತಾರೆ ಯಲ್ಲಪ್ಪ ಕರಡಿ.

ಮಹಾಮಾರಿ ರೋಗದಿಂದ ಬೇಸತ್ತಿದ್ದ ಯಲ್ಲಪ್ಪ ತಾನು ಕೂಡಾ ಇತರರಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸಬೇಕು ಎನ್ನುವ ಉದ್ದೇಶದಿಂದ ಯೋಜನೆಯಲ್ಲಿ ಭಾಗವಹಿಸಿರುವುದಕ್ಕೆ ನರೇಗಾ ಕೂಲಿ ಹಣ ಅನುಕೂಲವಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈ ಹಿಡಿದಿರುವುದು ಯೋಜನೆಯು ಸಾರ್ಥಕವಾಗಿದ್ದು, ಯಲ್ಲಪ್ಪ ಕರಡಿ ಇತರರಿಗೆ ಮಾದರಿಯಾಗಿದ್ದಾರೆ. -ಶ್ರೀ.ಶಿವಪ್ಪ ಸುಬೇದಾರ್                                              ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ್, ಕುಷ್ಟಗಿ

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಇಂತಹ ವ್ಯಕ್ತಿಗಳನ್ನು ಹುಡುಕಿ ಕೆಲಸ ನೀಡುತ್ತಿರುವುದು ಶ್ಲಾಘನೀಯ. ಇಂತವರು ಮನೆಯಲ್ಲಿ ಕುಳಿತುಕೊಳ್ಳದೇ ದುಡಿಯೋಣ ಬಾ ಅಭಿಯಾನದಲ್ಲಿ ಭಾಗವಹಿಸಬೇಕಿದೆ. ಜಿಲ್ಲೆಯಲ್ಲಿ ಇಂತವರಿದ್ದರೆ ಅವರಿಗೆ ಆದ್ಯತೆಯಾಗಿ ಕೆಲಸ ನೀಡಲು ಸೂಚಿಸಲಾಗಿದೆ. -ಬಿ.ಫೌಜಿಯಾ ತರನ್ನುಮ್ , ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳ

 

-ಮಂಜುನಾಥ ಮಹಾಲಿಂಗಪುರ ( ಕುಷ್ಟಗಿ)

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.