ನವವೃಂದಾವನಗಡ್ಡಿ: ಶ್ರೀಜಯತೀರ್ಥರ ಉತ್ತರರಾಧನೆ; ಶ್ರದ್ಧಾ ಭಕ್ತಿಯಿಂದ ಆಚರಣೆ

ಪೊಲೀಸ್ ಸರ್ಪಗಾವಲು ಹಾಕುವುದು ಸರಿಯಲ್ಲ: ಮಂತ್ರಾಲಯ ಶ್ರೀ ಬೇಸರ

Team Udayavani, Jul 8, 2023, 7:59 PM IST

1-wwq-ewq

ಗಂಗಾವತಿ: ಇತಿಹಾಸ ಪ್ರಸಿದ್ಧ ಆನೆಗೊಂದಿಯ ನವವೃಂದಾವನ ಗಡ್ಡಿಯಲ್ಲಿ ಶ್ರೀಜಯತೀರ್ಥರ ಆರಾಧನಾ ಮಹೋತ್ಸವದ ನಿಮಿತ್ತ ಶನಿವಾರ ಬೆಳ್ಳಿಗ್ಗೆ ಉತ್ತರರಾಧನೆ ಮಂತ್ರಾಲಯದ ಪೀಠಾಧಿಪತಿ ಪೂಜ್ಯ ಸುಭುದೇಂದ್ರತೀರ್ಥ ಶ್ರೀಪಾದಂಗಳ ನೇತೃತ್ವದಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.

ಶ್ರೀಜಯತೀರ್ಥರ ವೃಂದಾವನಕ್ಕೆ ಬೆಳ್ಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಜಲಾಭಿಷೇಕ, ಪಂಚಾಮೃತಾಭಿಷೇಕ, ಸರ್ವಪುಷ್ಪಗಳ ಅಲಂಕಾರ, ಬೆಳ್ಳಿ ಕವಚ ಹಾಗೂ ನಾಣ್ಯಗಳು, ರೇಶ್ಮೆ ವಸ್ತçದಿಂದ ಸರ್ವಾಲಂಕಾರ ಮಾಡಲಾಗಿತ್ತು. ಪೂಜ್ಯ ಸುಭುದೇಂದ್ರತೀರ್ಥ ಶ್ರೀಪಾದಂಗಳು ಶ್ರೀಜಯತೀರ್ಥರ ವೃಂದಾವನ ಸೇರಿದಂತೆ ೯ ಯತಿಗಳ ವೃಂದಾನಕ್ಕೆ ಪೂಜೆ ಮಹಾಮಂಗಳಾರತಿ ಮಾಡಿದರು. ಇದಕ್ಕೂ ಮುಂಚೆ ಮಂತ್ರಾಲಯ ಮಠದ ಪಂಡಿತ ಬಂಡಿ ಶಾಮಾಚಾರ್ ಮತ್ತು ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳು ಶ್ರೀಮನ್ ನ್ಯಾಯಸುಧಾ ಕುರಿತು ಉಪನ್ಯಾಸ ನೀಡಿದರು.ನಂತರ ಪೂಜ್ಯ ಸುಭುದೇಂದ್ರತೀರ್ಥ ಶ್ರೀಪಾದಗಳು ಮೂಲರಾಮದೇವರ ಸಂಸ್ಥಾನ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂತ್ರಾಲಯ ಮಠದ ಡಾ.ಎನ್.ವಾದಿರಾಜಾಚಾರ್, ಆನೆಗೊಂದಿ ರಾಜಮನೆತನದ ಶ್ರೀಕೃಷ್ಣದೇವರಾಯ, ಸುಮಂತಕುಲಕರ್ಣಿ, ದ್ವಾರಪಾಲಕ ಅನಂತಪುರಾಣಿಕ,ರಾಜಾ ಪಿ.ಅಪ್ರಮಯಾಚಾರ್, ಸಂಜೀವ್ ಇಡಪನೂರು, ವೆಂಕಟೇಶಚಾರ್, ಸಾಮವೀರ ಗುರಾಚಾರ್, ರಾಮಕೃಷ್ಣ ಜಾಗೀರದಾರ್, ಢಣಾಪೂರ ಶ್ರೀನಿವಾಸ, ಢಣಾಪೂರ ವಿಜಯ್, ಗೋಪಾಲರಾವ್ ಹೇರೂರು, ನವಲಿ ಪ್ರಲ್ಹಾದರ್, ಹನುಮೇಶ ಅಯೋಧ್ಯೆ, ಜಗನ್ನಾಥ ದಾಸ ಮುಕ್ತೆದಾರ್, ಅಪ್ಪಣ್ಣ ದೇಶಪಾಂಡೆ, ಉದಯ ಜಾಗೀರದಾರ್, ವ್ಯಾಸರಾಜಮಠದ ರಘು ಸೋಸಲೆ, ಸಮೀರ್ ಆಚಾರ್, ಸಾಮವೀರ ಗುರಾಚಾರ್, ರಾಮಕೃಷ್ಣ ಜಾಗೀರದಾರ್ ಸೇರಿ ಅನೇಕರಿದ್ದರು.

ಜೋಡು ರಥೋತ್ಸವ ಕಳೆ ಕಟ್ಟಿದ ಸಂಭ್ರಮ

ಶ್ರೀಜಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಭಾರಿ ಜೋಡು ರಥೋತ್ಸವ ಎಳೆಯುವ ಮೂಲಕ ಭಕ್ತರು ಸಂಭ್ರಮಪಟ್ಟರು. ಮಹಾರಥಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ನವವೃಂದಾವನಗಡ್ಡಿಯ 9 ಯತಿಗಳ ಸುತ್ತ ಜಯಘೋಷಗಳನ್ನು ಕೂಗಿ ಜೋಡುರಥಗಳನ್ನು ಎಳೆಯಲಾಯಿತು. ಒಂದು ರಥದಲ್ಲಿ ಶ್ರೀಜಯತೀರ್ಥ ಯತಿಗಳ ಗ್ರಂಥಗಳು ಮತ್ತೊಂದು ರಥದಲ್ಲಿ ಶ್ರೀಜಯತೀರ್ಥರ ವಿಗ್ರಹ ಇಟ್ಟು ರಥೋತ್ಸವ ನಡೆಸಲಾಯಿತು.

ಪೊಲೀಸ್ ಸರ್ಪಗಾವಲು ಹಾಕುವುದು ಸರಿಯಲ್ಲ
ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರ ಶ್ರೀಪಾದಂಗಳು ಮಾತನಾಡಿ, ಮಾಧ್ವ ಸಮಾಜ ಸೇರಿ ಇಡೀ ಸಮಾಜಕ್ಕೆ ಪೂಜ್ಯ ಶ್ರೀ ಜಯತೀರ್ಥರ ಕೊಡುಗೆ ಅಪಾರವಾಗಿದೆ. ನೂರಾರು ವರ್ಷಗಳಿಂದ ಆನೆಗೊಂದಿಯ ನವವೃಂದಾವನಡ್ಡಿಯಲ್ಲಿ ನೆಲೆಸಿರುವ ಶ್ರೀಜಯತೀರ್ಥರ ವೃಂದಾವನಕ್ಕೆ ಪೂಜೆ ಪುನಸ್ಕಾರಗಳನ್ನು ಮಂತ್ರಾಲಯ ಮಠ ಸೇರಿ ಇತರೆ ಮಠದವರು ಮಾಡುತ್ತಿದ್ದಾರೆ. ನಾವು ಚಿಕ್ಕಂದಿನಲ್ಲಿರುವಾಗ ಗಡ್ಡಿಯಲ್ಲಿ ಜಯತೀರ್ಥರ ಆರಾಧನೆ ಸಂದರ್ಭದಲ್ಲಿ ರಥೋತ್ಸವ ಜರುಗುತ್ತಿತ್ತು. ಕಳೆದ ವರ್ಷ ನೆರೆ ಹಾವಳಿ ಮತ್ತು ಇನ್ನೊಂದು ಮಠದವರ ಆಕ್ಷೇಪದಿಂದ ಕರ್ಪ್ಯೂ ವೀಧಿಸಿದ್ದರಿಂದ ಜಯತೀರ್ಥರ ಆರಾಧನೆಯನ್ನು ಆನೆಗೊಂದಿ ಮಠ ಸೇರಿ ನಾಡಿನಾದ್ಯಂತ ಶ್ರೀರಾಘವೇಂದ್ರ ಮಠದಲ್ಲಿ ಮತ್ತು ಭಕ್ತರ ಮನೆಗಳಲ್ಲಿ ಆಚರಣೆ ಮಾಡಲಾಗಿತ್ತು. ಜಯತೀರ್ಥರ ಆರಾಧನೆಯನ್ನು ಅವರ ಸರ್ವ ಅನುಯಾಯಿಗಳು ಆಚರಣೆ ಮಾಡಲು ಮಂತ್ರಾಲಯ ಮಠ ಆಕ್ಷೇಪವಿಲ್ಲ. ಗ್ರಂಥ ಮತ್ತು ಪ್ರಮಾಣಗಳಲ್ಲಿ ತಿಳಿಸಿರುವಂತೆ ಶ್ರೀಜಯತೀರ್ಥ ಮೂಲವೃಂದಾವನ ಆನೆಗೊಂದಿಯ ನವವೃಂದಾವನದಲ್ಲಿದೆ. ಈ ಕಾರಣಕ್ಕಾಗಿಯೇ ಗೌರವಾನ್ವಿತ ಉಚ್ಚನ್ಯಾಯಾಲಯ ಮಂತ್ರಾಲಯಮಠಕ್ಕೆ ಆರಾಧನೆ ಮಾಡುವ ಅವಕಾಶ ಕಲ್ಪಿಸಿದೆ. ಯಾವುದೇ ಆಶಾಂತಿಯ ವಾತಾವರಣವಿರದಿದ್ದರೂ ಪೊಲೀಸ್ ಇಲಾಖೆ ಭದ್ರತೆ ನೆಪದಲ್ಲಿ ಪೊಲೀಸ್ ಸರ್ಪಗಾವಲು ಹಾಕುವುದು ಸರಿಯಲ್ಲ. ಇತ್ತೀಚಿನ ವರ್ಷಗಳಲ್ಲಿ ಅನಪೇಕ್ಷೀತವಾಗಿ ಪೊಲೀಸ್ ಮಧ್ಯ ಪ್ರವೇಶವಾಗುತ್ತಿದೆ ಎಂದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.