ಪಿಎಚ್ ಡಿ ಕೋರ್ಸಿನ 40 ತಿಂಗಳ ಫೆಲೋಶಿಪ್ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ನೋಟಿಸ್

ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ: ಹೋರಾಟದ ಎಚ್ಚರಿಕೆ

Team Udayavani, Apr 20, 2022, 11:39 AM IST

6PHD

ಗಂಗಾವತಿ: ಕನ್ನಡದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಕೋರ್ಸ್ ಮಾಡುತ್ತಿರುವ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಬಾಕಿ ಇರುವ 40 ತಿಂಗಳ ಫೆಲೋಶಿಪ್ (ಶಿಷ್ಯವೇತನ)ಕೂಡಲೇ ಮಂಜೂರು ಮಾಡುವಂತೆ ವಿವಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿದ್ಯಾರ್ಥಿಗಳು ಮನವಿ ಮಾಡಿದ್ದನ್ನು ಕಾರಣವಾಗಿಟ್ಟುಕೊಂಡು ಹಂಪಿ ವಿವಿಯ ಕುಲಸಚಿವರು ವಿದ್ಯಾರ್ಥಿಗಳನ್ನು ವಿವಿಯಿಂದ ಹೊರ ಹಾಕಲು ಶೋಕಾಸ್ ನೋಟಿಸ್ ನೀಡಿರುವುದನ್ನು ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ )ಖಂಡಿಸುತ್ತದೆ ವಿವಿಯವರು ಕೂಡಲೇ ನೋಟಿಸ್ ವಾಪಸ್ ಪಡೆಯುವಂತೆ ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ್ ಕಡಗದ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಸಂಶೋಧನಾ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಳೆದ 40 ತಿಂಗಳಿಂದ ಫೆಲೋಶಿಪ್ ಬಾರದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸಂಶೋಧನೆ ಮತ್ತು ದಾಖಲೆಗಳ ಜೋಡಣೆಗೆ ಹಣ ಅವಶ್ಯಕವಾಗಿದ್ದು, ಹಣದ ಕೊರತೆಯಿಂದಾಗಿ ವಿದ್ಯಾರ್ಥಿಗಳು ಓದಿನ ಕಡೆ ಲಕ್ಷ್ಯ ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಶಿಷ್ಯ ವೇತನವನ್ನು ಬಿಡುಗಡೆ ಮಾಡುವಂತೆ ಹಂಪಿ ವಿವಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದೇನೆ, ಇದನ್ನು ನೆಪವಾಗಿಟ್ಟುಕೊಂಡು ಎ.ಕೆ. ದೊಡ್ಡಬಸವರಾಜ್ ಎಂಬ ಸಂಶೋಧನಾ ವಿದ್ಯಾರ್ಥಿಗೆ ಕುಲಸಚಿವರು ನಿಮ್ಮನ್ನು ವಿವಿಯಿಂದ ಅಥವಾ ಪಿಎಚ್ ಡಿ ಕೋರ್ಸ್ ನಿಂದ ಯಾಕೆ ಹೊರಗೆ ಹಾಕಬಾರದು ಎನ್ನುವ ಶೋಕಾಸ್ ನೋಟಿಸನ್ನು ಜಾರಿ ಮಾಡಿದ್ದು ಇದು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ವಿರುದ್ಧವಾಗಿದೆ. ಉನ್ನತ ಶಿಕ್ಷಣದಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಓದಬೇಕು. ಹೆಚ್ಚಿನ ಸಂಶೋಧನೆ ಮಾಡಿ ಉನ್ನತ ಹುದ್ದೆಗೇರಬೇಕೆನ್ನುವ ಸರ್ಕಾರದ ಉದ್ದೇಶಗಳಿಗೆ ವಿವಿಯ ಕುಲಸಚಿವರು ನೀಡಿರುವ ನೋಟಿಸ್ ಮಾರಕವಾಗಿದೆ ಎಂದರು.

ಇದನ್ನೂ ಓದಿ:ಯುವಕನ ಕಣ್ಣಿನಲ್ಲಿತ್ತು 3 ಸೆಂಮೀ ಜೀವಂತ ಹುಳ!: ಶಸ್ತ್ರಚಿಕಿತ್ಸೆ ಯಶಸ್ವಿ

ವಿವಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದಾಗ ಬೇಡಿಕೆಗಳನ್ನ ಸಲ್ಲಿಸುವುದು ವಾಡಿಕೆಯಾಗಿದ್ದು, ಇದನ್ನೇ ಕಾರಣವಾಗಿಟ್ಟುಕೊಂಡು ನೋಟಿಸ್ ನೀಡಿರುವುದು ಕಳವಳಕಾರಿಯಾಗಿದೆ. ಶೋಕಾಸ್ ನೋಟಿಸ್ ನಲ್ಲಿ ಈ ಹಿಂದೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ವಿವಿಯಲ್ಲಿ ಎ.ಕೆ. ದೊಡ್ಡಬಸವರಾಜ್ ಅವರು ಹೋರಾಟ ಮಾಡಿದ ಸಂದರ್ಭದಲ್ಲಿ ದಾಖಲಾಗಿರುವ ಕೇಸ್ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಕೌಂಟರ್ ಕೇಸ್ ಮಾಡಿರುವ ಕುರಿತು ಮಾಹಿತಿ ನೀಡಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಹೋರಾಟದ ಹಕ್ಕನ್ನು ಅಡಗಿಸುವ ಷಡ್ಯಂತ್ರ ನಡೆಯುತ್ತಿದ್ದು, ವಿವಿಧ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಕೂಡಲೇ ವಿವಿ ಯವರು ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. ಜತೆಗೆ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣವನ್ನು ನೇರವಾಗಿ ಅವರ ವೈಯಕ್ತಿಕ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೂ ಸಹ ನೇರವಾಗಿ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರದಿಂದ ವಿವಿಗೆ ಮಂಜೂರಾಗಿರುವ ಎಸ್ಸಿ ಎಸ್ಟಿ 24 ಕೋಟಿ ಹಣದ ಕುರಿತು ವಿವಿ ಕುಲಪತಿ ಅವರು ಲೆಕ್ಕ ಪತ್ರ ಕೊಡಬೇಕು. 40 ತಿಂಗಳ ಫೆಲೋಶಿಪ್ ಹಣ ಮಂಜೂರು ಮಾಡುವಂತೆ ಹಲವು ತಿಂಗಳುಗಳಿಂದ ಹೋರಾಟ ನಡೆಸಲಾಗುತ್ತಿದೆ. ಸಚಿವರಾದ ಬಿ. ಶ್ರೀರಾಮುಲು, ಆನಂದ್ ಸಿಂಗ್ ಸೇರಿದಂತೆ ಉನ್ನತ ಶಿಕ್ಷಣ ಸಚಿವರಿಗೂ ಮನವಿ ಪತ್ರ ಸಲ್ಲಿಸಿದರೂ ಇದುವರೆಗೂ ಸಮಸ್ಯೆಯ ಪರಿಹಾರಕ್ಕೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಉನ್ನತ ಶಿಕ್ಷಣದಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವಿದ್ಯಾರ್ಥಿಗಳು ಮೇಲೆ ಬರಬಾರದು ಎನ್ನುವ ದುರುದ್ದೇಶ ಸರ್ಕಾರಕ್ಕೆ ಇದ್ದಂತಿದೆ ಎಂದು ಕಡಗದ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.