ಮಸೀದಿ ಮಳಿಗೆಗಳ ನಿರ್ಮಾಣಕ್ಕೆ ಆಕ್ಷೇಪ; ಆರ್ ಸಿಸಿ ಹಾಕದಂತೆ ಪೊಲೀಸರಿಂದ ತಡೆ


Team Udayavani, Jun 3, 2021, 11:53 AM IST

ಮಸೀದಿ ಮಳಿಗೆಗಳ ನಿರ್ಮಾಣಕ್ಕೆ ಆಕ್ಷೇಪ; ಆರ್ ಸಿಸಿ ಹಾಕದಂತೆ ಪೊಲೀಸರಿಂದ ತಡೆ

ಗಂಗಾವತಿ: ನಗರದ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಬೇರೂನಿ ಆಬಾದಿ‌ ಮಸೀದಿಯ ವಾಣಿಜ್ಯ ಮಳಿಗೆಗಳ ನಿರ್ಮಾಣ ಆರ್ ಸಿಸಿ ಕಾರ್ಯಕ್ಕೆ ಮಾದಿಗ ಸಮಾಜದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ನಗರಸಭೆಗೆ ಮನವಿ ಕೊಟ್ಟ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯದಂತೆ ಪೊಲೀಸರು ತಡೆ ಮಾಡಿದ್ದರಿಂದ ಕಾಮಗಾರಿ ಸ್ಥಳದಲ್ಲಿ ಗುರುವಾರ ಬೆಳ್ಳಿಗ್ಗೆ ಉದ್ವಿಗ್ನ ವಾತಾವರಣ ಸೃಷ್ಟಿಯಾದ ಘಟನೆ ನಡೆಯಿತು.

ಇಲ್ಲಿನ ಜಾಗದ ಕುರಿತು ವ್ಯಾಜ್ಯವಿದ್ದು ಮಸೀದಿಯವರು ವಾಣಿಜ್ಯ ಮಳಿಗೆ ನಿರ್ಮಾಣ ಮಾಡುವುದಕ್ಕೆ ತಮ್ಮ ಆಕ್ಷೇಪವಿದೆ ಎಂದು ಮಾದಿಗ ಸಮಾಜದ ಹುಸೇನಪ್ಪಸ್ವಾಮಿ ಹಾಗೂ ಸಂಗಮೇಶ ಅಯೋಧ್ಯೆ ನಗರಸಭೆಗೆ ಆಕ್ಷೇಪ ಸಲ್ಲಿಸಿದ್ದಾರೆ. ಈ ಮಧ್ಯೆ ಈಗಾಗಲೇ ವಿವಾದ ಬಗೆಗೆ ಜಾಗವನ್ನು ಮಸೀದಿ ಹಾಗೂ ಮಾದಿಗ ಸಮಾಜಕ್ಕೆ ದಿವಂಗತ ಎಂ.ಎಸ್.ಅನ್ಸಾರಿ ಮಾಜಿ ಸಂಸದ ಎಚ್.ಜಿ.ರಾಮುಲು‌ ಹಾಗೂ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ನ್ಯಾಯ ಪಂಚಾಯಿತಿ ಮಾಡಿದ್ದಾರೆ. ಈಗ ನಗರಸಭೆ ರಾಜ್ಯ ವಕ್ಫ್ ಕಮೀಟಿಯಿಂದ‌ ಪರವಾನಿಗೆ ಪಡೆದು‌ ನ್ಯಾಯಯುತವಾಗಿ ಮಸೀದಿ‌ ಮಳಿಗೆ ನಿರ್ಮಿಸಲಾಗುತ್ತಿದೆ ಎಂದು ನಗರಸಭೆ ಸದಸ್ಯ‌‌ ಹಾಗು ಮಸೀದಿ ಕಮೀಟಿ ಅಧ್ಯಕ್ಷ ಶಾಮೀದ್ ಮನಿಯಾರ್ ನೇತೃತ್ವದಲ್ಲಿ ನಗರಸಭೆಗೆ ಮನವಿ‌ ಮಾಡಲಾಗಿತ್ತು.

ಗುರುವಾರ ಬೆಳ್ಳಿಗ್ಗೆ ‌ಆರ್ ಸಿಸಿ ಕಾರ್ಯ ಆರಂಭವಾಗುತ್ತಿದ್ದಂತೆ ಪೊಲೀಸ್, ಕಂದಾಯ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕೋವಿಡ್ ಲಾಕ್ ಡೌನ್ ಇರುವುದರಿಂದ ಆರ್ ಸಿಸಿ ಹಾಕಲು ಹೆಚ್ಚು ಜನ ಕೂಲಿಕಾರರು ಸೇರುವುದರಿಂದ ‌ಕಾಮಗಾರಿ ಸ್ಥಗಿತ ಮಾಡಬೇಕು. ನಗರಸಭೆಗೆ ಕೆಲವರು ಸಲ್ಲಿಸಿರುವ ಆಕ್ಷೇಪ ಬಗೆಹರಿದ ನಂತರ ಮಳಿಗೆಗಳ ನಿರ್ಮಾಣ ಕಾರ್ಯ ಆರಂಭಿಸಲು ಅವಕಾಶವಿದೆ. ಸದ್ಯ ಕಾಮಗಾರಿ ಸ್ಥಗಿತಗೊಳಿಸುತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಮೀದ್‌‌ ಮನಿಯಾರ್ ಹಾಗೂ ಸೈಯದ್ ಅಲಿ ಪತ್ರಕರ್ತರ ಜತೆ ಮಾತನಾಡಿ ಕಾನೂನು ಪ್ರಕಾರ ಮಳಿಗೆಗಳ‌ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಎರಡು ದಶಕಗಳ ಹಿಂದೆ ಬಗೆಹರಿದ ಸಮಸ್ಯೆಯನ್ನು ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಎಲ್ಲ ಕಡೆ ಕಾಮಗಾರಿಗಳು ನಡೆಯುತ್ತಿವೆ ಶಾಸಕರು‌ ಮಸೀದಿ‌ ಮಳಿಗೆ‌ ನಿರ್ಮಾಣ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಖಂಡನೀಯವಾಗಿದೆ. ಎಲ್ಲ ದಾಖಲೆಗಳಿದ್ದು ಕಾನೂನು ಹೋರಾಟ ನಡೆಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಾಗ್ವಾದ ಜರುಗಿತು. ಸ್ಥಳಕ್ಕೆ ತಹಸೀಲ್ದಾರ್ ಯು.ನಾಗರಾಜ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಪೌರಾಯುಕ್ತ ಅರವಿಂದ ಜಮಖಂಡಿ, ಪಿಐ ವೆಂಕಟಸ್ವಾಮಿ ಭೇಟಿ ನೀಡಿ‌ ಪರಿಶೀಲಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.