ದುರುಗಮ್ಮನಹಳ್ಳ ಸ್ವಚ್ಛತೆಗೆ ಬೇಕಿದೆ ಜನರ ಸಹಕಾರ


Team Udayavani, May 5, 2019, 3:42 PM IST

kopp-1

ಗಂಗಾವತಿ: ನಗರದ ಮಧ್ಯ ಭಾಗದಲ್ಲಿ ಹರಿಯುವ ದುರುಗಮ್ಮನಹಳ್ಳದಲ್ಲಿರುವ ತ್ಯಾಜ್ಯ ಸ್ವಚ್ಛತಾ ಕಾರ್ಯ ಮತ್ತು ಜನಜಾಗೃತಿ ಮೂಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಮೂರು ದಿನಗಳಿಂದ ಸಮಾನ ಮನಸ್ಕರು ಸ್ವಯಂ ಪ್ರೇರಣೆಯಿಂದ ಹಳ್ಳದಲ್ಲಿರುವ ಪ್ಲಾಸ್ಟಿಕ್‌ ಹಾಗೂ ಪರಿಸರ ಹಾನಿಕಾರಕ ವಸ್ತುಗಳನ್ನು ಸಂಗ್ರಹಿಸಿ ನಗರಸಭೆಯ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.

ನಿತ್ಯ ಬೆಳಗ್ಗೆ ನೂರಾರು ಜನರು ಹಳ್ಳದ ಸ್ವಚ್ಛತಾ ಕಾರ್ಯ ಮಾಡಲು ಆಗಮಿಸುತ್ತಿರುವುದು ಸಂಘಟಕರಿಗೆ ಹರ್ಷ ತಂದಿದೆ. ಶ್ರಮಾನುಭವ ಮಾಡಲು ಬರುವವರಿಗೆ ಸಂಘಟಕರು ಕೈ ಗ್ಲೌಸ್‌ ಸೇರಿ ಅಗತ್ಯ ಮಾಹಿತಿ ನೀಡುತ್ತಿದ್ದಾರೆ. ನಾಡಿನ ಖ್ಯಾತ ಹಾಸ್ಯ ಭಾಷಣಕಾರ ಬಿ.ಪ್ರಾಣೇಶ ಹಳ್ಳದಲ್ಲಿಳಿದು ಕಸ, ಪ್ಲಾಸ್ಟಿಕ್‌ ಸಂಗ್ರಹ ಮಾಡುವ ಮೂಲಕ ಪ್ರೇರಣೆಯಾಗಿದ್ದಾರೆ.

ಹಳ್ಳಕ್ಕೆ ಹೊಂದಿಕೊಂಡಿರುವ ಮಹೆಬೂಬನಗರ ಸಂತೆ ಬಯಲು ಪ್ರದೇಶ, ಮುಜಾವರ ಕ್ಯಾಂಪ್‌, ಇಸ್ಲಾಂಪುರ, ಇಂದ್ರಾನಗರ, ಗುಂಡಮ್ಮ ಕ್ಯಾಂಪ್‌ ಜನವಸತಿ ಪ್ರದೇಶದಿಂದ ಚರಂಡಿಯ ನೀರು ನೇರವಾಗಿ ಹಳ್ಳ ಸೇರುತ್ತಿದ್ದು, ಇದರಿಂದ ಇಡೀ ಹಳ್ಳ ಗಬ್ಬೆದ್ದು ನಾರುತ್ತಿದೆ. ಸಂತೆ ಬಯಲು ಪ್ರದೇಶದಲ್ಲಿ ಉಳಿಯುವ ತರಕಾರಿ ಹಾಗೂ ಕೆಲ ಹೊಟೇಲ್ ಮಾಲೀಕರು ಉಳಿದ ಆಹಾರ ಪದಾರ್ಥ, ಮಾಂಸದ ತ್ಯಾಜ್ಯವನ್ನು ನೇರವಾಗಿ ಹಳ್ಳಕ್ಕೆ ಹಾಕುತ್ತಿದ್ದಾರೆ. ತ್ಯಾಜ್ಯ ಮತ್ತು ಚರಂಡಿ ನೀರು ಬರದಂತೆ ತಡೆಯುವಲ್ಲಿ ನಗರಸಭೆ ನೈರ್ಮಲ್ಯ ವಿಭಾಗ ಸಂಪೂರ್ಣ ವಿಫಲವಾಗಿದೆ.

ನಗರಸಭೆ ವೈಜ್ಞಾನಿಕವಾಗಿ ಹಳ್ಳವನ್ನು ಸರ್ವೇ ಮಾಡಿ ಗಡಿ ಗುರುತಿಸುವಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರದ ಅಮೃತ ಸಿಟಿ ಯೋಜನೆಯಲ್ಲಿ ಹಳ್ಳದ ಸ್ವಚ್ಛತೆ ಮತ್ತು ಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದ್ದು, ಇದು ಅವೈಜ್ಞಾನಿಕವಾಗಿದೆ. ಇಡೀ ಯೋಜನೆ ನಕ್ಷೆ ಬದಲಿಸುವಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಸೂಚನೆ ನೀಡಿದ್ದಾರೆ.

ಹಳ್ಳದ ನೀರು ಒಂದೇ ಕಡೆ ಹರಿದು ಹೋಗಲು ಸದ್ಯ ಹಳ್ಳದ ಮಧ್ಯೆ ಸಣ್ಣ ಪ್ರಮಾಣದ ಕಾಲುವೆ ನಿರ್ಮಿಸಲಾಗಿದ್ದು, ಮಳೆಗಾಲ ಆರಂಭಕ್ಕೂ ಮೊದಲು ಇಡೀ ಹಳ್ಳದಲ್ಲಿ ಪ್ಲಾಸ್ಟಿಕ್‌ ಸಮೇತ ಹೂಳನ್ನು ತೆಗೆಯುವ ಮೂಲಕ ಹಳ್ಳದಲ್ಲಿ ಸಾರ್ವಜನಿಕರು ನಡೆಸುತ್ತಿರುವ ಸ್ವಚ್ಛತಾ ಕಾರ್ಯಕ್ಕೆ ನೆರವಾಗಬೇಕು. ಮಳೆಗಾಲ ಆರಂಭಕ್ಕೂ ಮೊದಲು ಹಳ್ಳದ ಎರಡು ಭಾಗದಲ್ಲಿ ವಿವಿಧ ಬಗೆಯ ಗಿಡದ ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಹಳ್ಳದ ಮೊದಲ ಸೌಂದರ್ಯಕ್ಕೆ ನಗರಸಭೆ ಕಾರಣವಾಗಬೇಕಿದೆ. ಹಳ್ಳದ ಸ್ವಚ್ಛತಾ ಕಾರ್ಯಕ್ಕೆ ನಗರದ ವ್ಯಾಪಾರಸ್ಥರು, ವೈದ್ಯರು, ರಾಜಕಾರಣಿಗಳು ಕನ್ನಡಪರ ಸಂಘಟನೆಗಳು ಮಠಾಧಿಧೀಶರು ವಿವಿಧ ಎನ್‌ಜಿಒ ಸಂಸ್ಥೆಗಳು ದಲಿತಪರ ಸಂಘಟನೆಗಳು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು ಸಹಕಾರ ನೀಡಬೇಕಾಗಿದೆ.

ಪ್ರತಿದಿನ ಹಳ್ಳದ ಸ್ವಚ್ಛತಾ ಶ್ರಮಾನುಭವ ಕಾರ್ಯ ಭರದಿಂದ ನಡೆಯುತ್ತಿದೆ. ಮಳೆ ಆರಂಭಕ್ಕೂ ಮುಂಚೆ ಇಡೀ ಹಳ್ಳದಲ್ಲಿ ಪ್ಲಾಸ್ಟಿಕ್‌ ಘನತ್ಯಾಜ್ಯ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ಹಳ್ಳಕ್ಕೆ ಹರಿದು ಬರುವ ಚರಂಡಿ ನೀರನ್ನು ತಡೆಯಲು ನಗರಸಭೆ ಕ್ರಮ ಕೈಗೊಳ್ಳಬೇಕಿದೆ. ಉಳಿದ ತರಕಾರಿ ಹಾಗೂ ಮಾಂಸ ಇತರೆ ತ್ಯಾಜ್ಯ ವಸ್ತುಗಳನ್ನು ಹಳ್ಳಕ್ಕೆ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ನಗರಸಭೆ ಸೂಕ್ತ ನಿಯಮ ಮಾಡಬೇಕಿದೆ. ಅಮೃತಸಿಟಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿ ಅವವೈಜ್ಞಾನಿಕ ಅದನ್ನು ಸರಿಪಡಿಸುವಂತೆ ಖುದ್ದು ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು ಮತ್ತು ಧಾರ್ಮಿಕ ಮುಖಂಡರು ಸ್ವಚ್ಛತಾ ಕಾರ್ಯಕ್ಕೆ ಸಹಕಾರ ಮಾರ್ಗದರ್ಶನ ನೀಡಬೇಕು. ಈ ಕಾರ್ಯ ಪಕ್ಷಾತೀತವಾಗಿ ನಡೆಯುತ್ತಿದೆ.

•ಡಾ| ಶಿವಕುಮಾರ ಮಾಲೀಪಾಟೀಲ್, ಸ್ವಚ್ಛತಾ ಕಾರ್ಯದ ಸಂಚಾಲಕರು

ಕೆ.ನಿಂಗಜ್ಜ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.