ಫಸಲ್ ಬಿಮಾ ಯೋಜನೆ ಪ್ರೀಮಿಯಂ ಪಾವತಿಸಿದವರಿಗೆ ಸಿಗುತ್ತಿಲ್ಲ ಪರಿಹಾರ: ಆತಂಕದಲ್ಲಿ ರೈತರು


Team Udayavani, Apr 26, 2022, 1:20 PM IST

Untitled-1

ಗಂಗಾವತಿ: ತಾಲ್ಲೂಕಿನ ಮುರಳಿ,ವೆಂಕಟಗಿರಿ ಆನೆಗೊಂದಿ ಸೇರಿದಂತೆ ವಿವಿಧೆಡೆ ಕಟಾವಿಗೆ ಬಂದ ಭತ್ತದ ಬೆಳೆಯು ಮಳೆ ಗಾಳಿ ಪರಿಣಾಮ ನೆಲಕ್ಕುರುಳಿದೆ.ಈಗಾಗಲೇ ಕೃಷಿ ಇಲಾಖೆ ಸರ್ವೆ ಕಾರ್ಯ ಮಾಡಿದ್ದರೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪ್ರಿಮಿಯಮ್ ಪಾವತಿಸಿಕೊಂಡ ಇನ್ಸೂರೆನ್ಸ್ ಕಂಪನಿಯವರು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ನೆರಕ್ಕುರುಳಿದ ಭತ್ತದ ಬೆಳೆಯಲ್ಲಿ ಮೊಳಕೆ ಒಡೆದು ಇನ್ನಷ್ಟು ನಷ್ಟವಾಗುವ ಸಂಭವ ಇರುವುದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ .

ಮರಳಿ ಹೋಬಳಿಯಲ್ಲಿ ಸುಮಾರು ಐವತ್ತು ಎಕರೆ ಭತ್ತದ ಗದ್ದೆ ನೆಲಕ್ಕುರುಳಿದ್ದು ಈಗಾಗಲೇ ಕೃಷಿ ಇಲಾಖೆಯವರು ಸಮೀಕ್ಷೆ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಿದ್ದಾರೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪ್ರಿಮಿಯಂ ಕಟ್ಟಿಸಿಕೊಂಡ ಖಾಸಗಿ ಗ ಕಂಪನಿಯವರು ಮಾತ್ರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ .ರೈತರು ನಿತ್ಯವೂ ಟೋಲ್ ಫ್ರೀ ನಂಬರ್ ಗೆ ದೂರು ನೀಡಿದರೂ ಖಾಸಗಿ ಕಂಪೆನಿಯ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡಿ ನಷ್ಟದ ವರದಿಯನ್ನು ಕೊಡುತ್ತಿಲ್ಲ. ಇನ್ಸೂರೆನ್ಸ್ ಕಂಪನಿಯವರು ಸ್ಥಳ ಪರಿಶೀಲನೆ ಮಾಡುವ ತನಕ ರೈತರು ಭತ್ತವನ್ನು ಕಟಾವು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಇನ್ಸೂರೆನ್ಸ್ ಕಂಪನಿಯವರು ತಾವು ಬರುವ ತನಕ ಭತ್ತ ಕಟಾವು ಮಾಡದೆ ಇರುವಂತೆ ಸೂಚನೆ ನೀಡಿದ್ದಾರೆ. ಸ್ವಯಂಪ್ರೇರಣೆಯಿಂದ ರೈತರು ಭತ್ತ ಕಟಾವು ಮಾಡಿದರೆ ಇನ್ಶೂರೆನ್ಸ್ ಹಣ ಬರುವುದಿಲ್ಲ ಎಂದು ರೈತರಿಗೆ ಇನ್ಶೂರೆನ್ಸ್ ಕಂಪನಿ ಯವರು ಹೇಳುತ್ತಿದ್ದಾರೆ ಇದರಿಂದ  ರೈತರು ತೀವ್ರ ಆತಂಕಗೊಂಡಿದ್ದಾರೆ .

ಪ್ರತಿ ಎಕರೆಗೆ ರೈತರು 500-1000ರೂ ಗಳವರೆಗೆ ಪ್ರೀಮಿಯಂ ಹಣವನ್ನು ಪಾವತಿ ಮಾಡಿದ್ದಾರೆ. ಖಾಸಗಿ ಕಂಪೆನಿಯವರು ಪ್ರೀಮಿಯಂ ಪಾವತಿ ಕೊಂಡು ಪರಿಹಾರ ನೀಡುವಲ್ಲಿ ತಾತ್ಸಾರ ತೋರುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಕೊಪ್ಪಳಕ್ಕೆ ತೆರಳಿ ಖಾಸಗಿ ವಿಮಾ ಕಂಪನಿಯವರಿಗೆ ಮನವಿಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ .ಕೂಡಲೇ ಸಂಸದರು ಸಚಿವರು ಶಾಸಕರು ಖಾಸಗಿ ಕಂಪೆನಿ ಅವರಿಗೆ ಸೂಚನೆ ನೀಡಿ ಬೆಳೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮರಳಿ ಗ್ರಾಮದ ರೈತ ಶರಣಬಸಪ್ಪ ಮನವಿ ಮಾಡಿದ್ದಾರೆ .

ಗಂಗಾವತಿ ಭಾಗದಲ್ಲಿ ಗಾಳಿ ಮತ್ತು ಮಳೆಯಿಂದಾಗಿ ಭತ್ತದ ಬೆಳೆ ನಷ್ಟವಾಗಿದೆ. ಈಗಾಗಲೇ ಕೃಷಿ ಇಲಾಖೆ  ಬೆಳೆ ಸಮೀಕ್ಷೆ ನಡೆಸಿದೆ ಜತೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ  ಬೆಳೆ ಸಮೀಕ್ಷೆ ಮಾಡಿ ಖಾಸಗಿ ಇನ್ಸೂರೆನ್ಸ್ ಕಂಪನಿಯವರು ಪರಿಹಾರ ವಿತರಣೆ ಮಾಡಬೇಕಿದ್ದು ಖಾಸಗಿ ಕಂಪನಿಯವರು ನಿರ್ಲಕ್ಷ್ಯಮಾಡುತ್ತಿರುವ ಬಗ್ಗೆ ರೈತರು ದೂರಿದ್ದಾರೆ. ಜಿಲ್ಲಾಧಿಕಾರಿಗಳು ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಉದಯವಾಣಿಗೆ ತಿಳಿಸಿದ್ದಾರೆ.

ಮಳೆ ಗಾಳಿಗೆ ಬೆಳೆ ನಷ್ಟ ಮಾಡಿದ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪ್ರೀಮಿಯಂ ಪಾವತಿ ಮಾಡಿದ ರೈತರಿಗೆ ಖಾಸಗಿ ಕಂಪನಿಗಳು ಸರ್ವೆ ಆಧಾರದಲ್ಲಿ ಬೆಳೆ ಪರಿಹಾರ ವಿತರಣೆ ಮಾಡಬೇಕು. ರೈತರ ದೂರಿನ ಅನ್ವಯ ಕಂಪೆನಿಯ ಅಧಿಕಾರಿಗಳಾಗಿದ್ದ ಮಾತನಾಡಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.