ಜಿಲ್ಲೆ ಆರೆಂಜ್‌ ಪಟ್ಟಿಗೆ ಸೇರಿಸಲು ವರದಿ

ಜಿಲ್ಲೆಯ 80 ಜನರ ಮೇಲೆ ನಿಗಾ

Team Udayavani, Apr 14, 2020, 4:49 PM IST

ಜಿಲ್ಲೆ ಆರೆಂಜ್‌ ಪಟ್ಟಿಗೆ ಸೇರಿಸಲು ವರದಿ

ಕೊಪ್ಪಳ: ಕೋವಿಡ್-19 ವೈರಸ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಜಿಲ್ಲೆಯಲ್ಲಿ 80 ಜನರ ಮೇಲೆ
ನಿಗಾ ಇರಿಸಿದ್ದು, ಇವರಲ್ಲದೇ ಮನೆಯಲ್ಲೇ ನಿಗಾದಲ್ಲಿರುವ, ಗುಳೆ ಹೋಗಿ ಬಂದಿರುವ 123 ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಇವರಲ್ಲಿ 41 ವರದಿ ನೆಗೆಟಿವ್‌ ಬಂದಿದ್ದು, ಇನ್ನುಳಿದ 82 ಜನರ ವರದಿಗಳು ಬಾಕಿಯಿದೆ.

ಹೌದು. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಧಾರ ಕೈಗೊಂಡಿದೆ. ಆದರೂ ಗೃಹಬಂಧನದಲ್ಲಿರುವವ ಮೇಲೂ ಸರ್ಕಾರ ಹೆಚ್ಚಿನ ನಿಗಾ ವಹಿಸಿದೆ. ಜಿಲ್ಲೆಯಲ್ಲಿ ಗುಳೆ ಹೋಗಿ ಬಂದವರ ಗಂಟಲು ದ್ರವ ಮಾದರಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುತ್ತಿದೆ. ಗಂಟಲು ದ್ರವ ಪಡೆದಾಕ್ಷಣ ಅವರಲ್ಲಿ ಸೋಂಕು ಇದೆ ಎಂಬಂರ್ಥವಲ್ಲ. ಆದರೆ ಅವರು ಅನ್ಯ ರಾಜ್ಯ ಹಾಗೂ ಅನ್ಯ ಜಿಲ್ಲೆಗಳಲ್ಲಿ ಕೆಲಸ ಮಾಡಿ ವಾಪಾಸ್ಸಾಗಿದ್ದು, ಕೊರೊನಾ ವ್ಯಾಪಿಸಿರುವ ಪ್ರದೇಶದಿಂದ ಬಂದವರ ಮೇಲೆ ನಿಗಾ ಇರಿಸಲಾಗಿದೆ.

ಜಿಲ್ಲೆಯಲ್ಲಿರುವ 80 ಜನ ಮನೆಯಲ್ಲೇ 14 ದಿನ ಕ್ವಾರಂಟೈನ್‌ ಪೂರೈಸಿದ್ದಾರೆ. 60 ಜನರು 28 ದಿನ ಪೂರೈಸಿದ್ದಾರೆ. ಇವರಲ್ಲಿ ಮೂವರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗಟಿವ್‌ ಎಂದು ಬಂದಿವೆ. ಸೋಮವಾರದ ಅಂತ್ಯಕ್ಕೆ 19 ಜನರ ಮೇಲೆ ಮನೆಯಲ್ಲೇ ನಿಗಾ ಇರಿಸಿದ್ದು, ಇನ್ನೂ ತಬ್ಲಿಘಿ ಜಮಾತ್‌ಗೆ ಭೇಟಿ ನೀಡಿದವರ ಪೈಕಿ 25 ಜನರಿಗೆ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದು, 11 ಜನರು ದೆಹಲಿ ಭಾಗದಲ್ಲಿ ಪ್ರವಾಸ ಮಾಡಿದವರಿದ್ದಾರೆ. ಅವರ ಮೇಲೂ  ನಿಗಾ ಇರಿಸಿದೆ. ಹೈ ರಿಸ್ಕ್ ಪ್ರದೇಶದಲ್ಲಿ ಪ್ರಯಾಣಿಸಿದ 39 ಜನರ ಮೇಲೂ ನಿಗಾ ಇರಿಸಿದೆ. ಇನ್ನೂ ಅನ್ಯ ರಾಜ್ಯ, ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ, ಕಾರ್ಮಿಕರ ಬಗ್ಗೆ ನಿಗಾ ಇರಿಸಿದ್ದು, 123 ಜನರ ಗಂಟಲು ದ್ರವ ಪಡೆದು ರವಾನೆ ಮಾಡಿದೆ. 41 ನೆಗಟಿವ್‌ ಎಂದು ಬಂದಿದೆ. 82 ಜನರ ವರದಿ ಬರಬೇಕಿದೆ.

ಬಿಲ್ವಾಢ ಮಾದರಿ ಅಳವಡಿಕೆ: ರಾಜಸ್ಥಾನದ ಬಿಲ್ವಾಢ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮ ದೇಶಕ್ಕೆ ಮಾದರಿಯಾಗಿದೆ. ಅದೇ
ಮಾದರಿಯನ್ನು ಕೊಪ್ಪಳ ಜಿಲ್ಲೆಯಲ್ಲೂ ಅಳವಡಿಕೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಜಿಲ್ಲಾಧಿಕಾರಿ ಸುನೀಲ್‌ ಕುಮಾರ ತಿಳಿಸಿದ್ದಾರೆ.

ಆರೆಂಜ್‌ ಪಟ್ಟಿಗೆ ಸೇರ್ಪಡೆಗೆ ವರದಿ
ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದ ವಸ್ತುಸ್ಥಿತಿಯ ಕುರಿತು ವರದಿ ಕೇಳಿದೆ. ಗುಳೆ ಹೋದ 22 ಸಾವಿರ ಜನರು ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಇವರಲ್ಲಿ 20 ಸಾವಿರ ಗ್ರಾಮೀಣ ಭಾಗದವರು. ಎಲ್ಲರ ಮೇಲೂ ನಿಗಾ ವಹಿಸಿದೆ. ಇನ್ನೂ ಗದಗ, ಬಳ್ಳಾರಿ, ವಿಜಯಪುರ, ಬಾಗಲಕೋಟೆ ನಮ್ಮ ಗಡಿ ಜಿಲ್ಲೆಗಳಾಗಿದ್ದು, ಅಲ್ಲಿ ವೈರಸ್‌ ಕಾಣಿಸಿಕೊಂಡಿದೆ. ಕೊಪ್ಪಳ ಜಿಲ್ಲೆ ಮಧ್ಯದಲ್ಲಿದೆ. ಹೀಗಾಗಿ ನಾವು ಸಂಕಷ್ಟದಲ್ಲಿದ್ದೇವೆ. ಸರ್ಕಾರ ಕೊಪ್ಪಳ ಜಿಲ್ಲೆಯನ್ನು ಗ್ರೀನ್‌ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. ನಾವು ರಿಸ್ಕ್ನಲ್ಲಿ ಇರುವುದರಿಂದ ಗ್ರೀನ್‌ ಪಟ್ಟಿಯಿಂದ ಆರೆಂಜ್‌ ಪಟ್ಟಿಗೆ ಸೇರ್ಪಡೆ ಮಾಡುವಂತೆ ವರದಿ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.