Koppal Lok Sabha Constituency; ಕೃಷಿ-ಕೈಗಾರಿಕೆ ವಲಯಕ್ಕೂ 371(ಜೆ) ಮೀಸಲಾತಿ

ರಾಜಕೀಯ ಹಿನ್ನೆಲೆಯ ಕುಟುಂಬ ಸದಸ್ಯನಾಗಿದ್ದರಿದ ಸ್ಪರ್ಧೆ ಹೊಸತಾದರೂ ಚುನಾವಣೆ ಹೊಸದಲ್ಲ

Team Udayavani, Apr 9, 2024, 8:00 AM IST

Koppal Lok Sabha Constituency; ಕೃಷಿ-ಕೈಗಾರಿಕೆ ವಲಯಕ್ಕೂ 371(ಜೆ) ಮೀಸಲಾತಿKoppal Lok Sabha Constituency; ಕೃಷಿ-ಕೈಗಾರಿಕೆ ವಲಯಕ್ಕೂ 371(ಜೆ) ಮೀಸಲಾತಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಕ್ಷೇತ್ರದ ಮಾಜಿ ಶಾಸಕ ಕೆ.ಶರಣಪ್ಪ ಅವರ ಪುತ್ರ, ಎಲುಬು ಮತ್ತು ಕೀಲು ತಜ್ಞರಾದ ಡಾ| ಬಸವರಾಜ ಕ್ಯಾವಟರ್‌ ಅವರು ದೇಶ-ವಿದೇಶಗಳಲ್ಲಿ ಶಸ್ತ್ರಚಿಕಿತ್ಸೆಗಳಿಗೆ ಹೆಸರಾದವರು. ತಂದೆಯಂತೆ ರಾಜಕೀಯದಲ್ಲಿ ಜನಸೇವೆ ಮಾಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಪ್ರೇರಣೆಯಿಂದ ರಾಜಕೀಯಕ್ಕೆ ಬಂದಿರುವ ಇವರು, ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಅವರ ಎದುರಾಳಿಯಾಗಿದ್ದಾರೆ.

ಜೀವನದಲ್ಲಿ ಮೊದಲ ಬಾರಿಗೆ ಚುನಾವಣ ಕಣಕ್ಕಿಳಿದಿದ್ದೀರಿ. ಏನನ್ನಿಸುತ್ತದೆ?
ನನಗೆ ಈ ಲೋಕಸಭೆ ಚುನಾವಣೆ ಹೊಸತು. ಆದರೆ ತಂದೆಯವರ ಕಾಲದಿಂದಲೂ ಹಲವು ಚುನಾವಣೆಗಳನ್ನು ಎದುರಿಸಿದ ಅನುಭವವಿದೆ. ತಂದೆ ಶಾಸಕ ಹಾಗೂ ಸಹೋದರ ಜಿ.ಪಂ. ಸದಸ್ಯರಾಗಿದ್ದರು. ಈಗ ಬಿಜೆಪಿ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟಿರುವುದು ಖುಷಿ ತರಿಸಿದೆ. ಗೆಲ್ಲುವೆ ಎನ್ನುವ ವಿಶ್ವಾಸವಿದೆ.

ಚುನಾವಣೆಗೆ ಸ್ಪರ್ಧಿಸಬೇಕೆಂದು ನಿಮಗೆ ಅನ್ನಿಸಿದ್ದು ಯಾವಾಗ? ಯಾಕೆ ಮತ್ತು ಏನು ಪ್ರೇರಣೆ ಏನು?
ವೃತ್ತಿಯಲ್ಲಿ ವೈದ್ಯನಾಗಿದ್ದು, ಅಲ್ಲಿ ಜನಸೇವೆ ಮಾಡುತ್ತಿದ್ದೆ. ತಂದೆ ಶಾಸಕರಾಗಿದ್ದಾಗ ಹಾಗೂ ಅನಂತರದ ದಿನಗಳಲ್ಲಿ ಕ್ಷೇತ್ರದ ಜನತೆ ಬಂದು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದರು. ಅಭಿವೃದ್ಧಿ ವಿಷಯಗಳನ್ನು ಪ್ರಸ್ತಾವಿಸುತ್ತಿದ್ದರು. ಅವರ ಸಂಕಷ್ಟಕ್ಕೆ ನೆರವಾಗಬೇಕು. ನಾನೂ ಜನಸೇವೆ ಮಾಡಬೇಕು ಎನ್ನುವ ಕಾರಣಕ್ಕೆ ಚುನಾವಣೆಗೆ ಸ್ಪರ್ಧಿಸಬೇಕೆನಿಸಿತು. ಪ್ರಧಾನಿ ನರೇಂದ್ರ ಮೋದಿ ಅವರ ಕನಸುಗಳು, ಯೋಜನೆಗಳು, ಮಾಡಿದ ಅಭಿವೃದ್ಧಿ ಪರ್ವ ರಾಜಕೀಯಕ್ಕೆ ಬರುವಂತೆ ಪ್ರೇರೇಪಿಸಿತು.

ರಾಜಕೀಯದಲ್ಲಿ ನಿಮ್ಮ ಗಾಡ್‌ ಫಾದರ್‌ ಯಾರು ಮತ್ತು ಯಾಕೆ?
ಪ್ರಧಾನಿ ನರೇಂದ್ರ ಮೋದಿ ಅವರೇ ಗಾಡ್‌ಫಾದರ್‌. ಜತೆಗೆ ನನ್ನ ತಂದೆ ಹಾಗೂ ರಾಜ್ಯ ನಾಯಕರಾದ ಬಿ. ಎಸ್‌. ಯಡಿಯೂರಪ್ಪ ಅವರ ಆಡಳಿತ ವೈಖರಿ ನನಗೆ ಮಾದರಿ.

ಮೊದಲ ಪ್ರಯತ್ನದಲ್ಲೇ ನೀವು ಲೋಕಸಭೆಗೆ ಸ್ಪರ್ಧಿಸುತ್ತಿದ್ದೀರಿ, ಕಾರಣವೇನು?
ನಾನು ಚುನಾವಣೆಯ ಸ್ಪರ್ಧೆಗಿಳಿದಿ ದ್ದೇನೆ. ವೈದ್ಯ ಸೇವೆ ಜತೆಗೆ ತಂದೆ ಯಂತೆ ಜನಸೇವೆ ಮಾಡಬೇಕು ಎನ್ನುವ ಉತ್ಸಾಹವಿದೆ. ಜನರೂ ಪ್ರೇರಣೆ ನೀಡುತ್ತಿದ್ದಾರೆ. ಮನೆಯ ಮಗನಂತೆ, ಕುಟುಂಬದ ಸದಸ್ಯನಂತೆ ಸ್ವಾಗತಿಸುತ್ತಿ
ದ್ದಾರೆ. ಇದು ನಿಜಕ್ಕೂ ಸಂತಸ ತರಿಸಿದೆ.

ನಿಮ್ಮ ಕ್ಷೇತ್ರದ ಜನ ನಿಮಗೆ ಯಾವ ಕಾರಣಕ್ಕಾಗಿ ಮತ ಹಾಕಬೇಕು?
ಚುನಾವಣೆಗೆ ನಾನು ಸ್ಪರ್ಧಿಸಿರ ಬಹುದು. ಆದರೆ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎನ್ನುವುದು ಜನರ ಆಶಯ. ಜತೆಗೆ ಅವರ ಆಡಳಿತದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡಲು ಜನತೆ ನನ್ನನ್ನು ಬೆಂಬಲಿಸಬೇಕಿದೆ.

ಈ ಚುನಾವಣೆಯನ್ನು ನೀವು ಹೇಗೆ ಗೆಲ್ಲುತ್ತೀರಿ? ಪ್ರಮುಖ ಕಾರಣಗಳನ್ನು ತಿಳಿಸಿ?
ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ಅವರು ದೇಶ ದಲ್ಲಿ ಮಾಡಿರುವ ಕಾರ್ಯಗಳು, ಜೆಡಿಎಸ್‌- ಬಿಜೆಪಿ ಮೈತ್ರಿ, ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿ ಮಾಡಲು ಜನ ನಿರ್ಧರಿಸಿರುವುದು, ಶಾಸಕ ಜನಾರ್ದನ ರೆಡ್ಡಿ ಅವರ ಸೇರ್ಪಡೆಯಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಿರುವುದು… ಹೀಗೆ ಹಲವಾರು ಕಾರಣಗಳಿಂದ ನನಗೆ ಗೆಲುವಾಗಲಿದೆ.

ನಿಮ್ಮ ಕನಸೇನು? ಗೆದ್ದು ದಿಲ್ಲಿಗೆ ಹೋಗಿ ಏನು ಮಾಡಬೇಕು ಎಂದಿದ್ದೀರಿ ?
ಉತ್ಕೃಷ್ಟ ಶಿಕ್ಷಣಕ್ಕೆ ಒತ್ತು ಕೊಡುವುದು, ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು, ಕೊಪ್ಪಳ ಬಿ ಸ್ಕೀಂ ಜಾರಿ, ಕಲ್ಯಾಣ ಕರ್ನಾಟಕದ 371(ಜೆ) ಮೀಸಲಾತಿ ಕೃಷಿ-ಕೈಗಾರಿಕೆ ವಲಯಕ್ಕೂ ವಿಸ್ತರಣೆಗೆ ಹೋರಾಟ ನನ್ನ ಆದ್ಯತೆ. ಕೃಷಿ-ಕೈಗಾರಿಕೆಗೆ ಮೀಸಲಾತಿ ದೊರೆತರೆ ಈ ಭಾಗದ ಲಕ್ಷಾಂತರ ಜನರಿಗೆ ವರದಾನವಾಗಲಿದೆ. ಅವೆಲ್ಲವನ್ನು ದಿಲ್ಲಿ ಮಟ್ಟದಲ್ಲಿ ಚರ್ಚಿಸಲಿದ್ದೇನೆ.

ಗೆದ್ದರೆ ನಿಮ್ಮ ಲೋಕಸಭಾ ಕ್ಷೇತ್ರಕ್ಕೆ ಮಾಡುವ ಮೊದಲ ಕೆಲಸ ಏನು ?
ಅಯೋಧ್ಯೆಯ ರಾಮ ಮಂದಿರದಂತೆ ನಮ್ಮ ಕ್ಷೇತ್ರದಲ್ಲಿ ಅಂಜನಾದ್ರಿಯ ಅಭಿವೃದ್ಧಿ ಮಾಡುವುದು ನನ್ನ ಕನಸಾಗಿದೆ. ಅಂಜನಾದ್ರಿ ಜತೆಗೆ ಸುತ್ತಲಿನ ನೂರಾರು ಐತಿಹಾಸಿಕ, ಪಾರಂಪರಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು, ಕೃಷಿ ಸಂಬಂಧಿ ಕೈಗಾರಿಕೆ ತರುವುದು ಪ್ರಮುಖ ಯೋಜನೆಗಳಲ್ಲಿ ಸೇರಿದೆ.

ನಿಮ್ಮ ಕ್ಷೇತ್ರದ ಭವಿಷ್ಯಕ್ಕೆ ಇರುವ ಐದು ಕನಸುಗಳೇನು? ಅವುಗಳನ್ನು ಹೇಗೆ ಈಡೇರಿಸುತ್ತೀರಿ?
ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ರೈಲು- ಹೆದ್ದಾರಿ- ವಾಯು ಮಾರ್ಗ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಕಾಯಕಲ್ಪ, ನೀರಾವರಿ ಯೋಜನೆಗಳಿಗೆ ಶಕ್ತಿ, ಸ್ಥಳೀಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹೀಗೆ ಹತ್ತಾರು ಕನಸುಗಳಿವೆ. ಮೋದಿಜಿ ಸರಕಾರ, ನಮ್ಮ ನಾಯಕರೊಂದಿಗೆ ಸಮನ್ವಯದಿಂದ ಅನುದಾನ ತಂದು ಅಭಿವೃದ್ಧಿ ಮಾಡುವ ಪ್ರಯತ್ನ ಮಾಡುವೆ.

ಚುನಾವಣೆಯ ವೇಳೆ ಅನೇಕ ಹಿರಿಯ ನಾಯಕರನ್ನು ನೀವು ಸಂಭಾಳಿಸಬೇಕಾಗುತ್ತದೆ. ಹೇಗೆ ನಿಭಾಯಿ ಸುತ್ತೀರಿ?
ನಮ್ಮ ಕ್ಷೇತ್ರದಲ್ಲಿ ಯಾರೂ ಅಸಮಾಧಾ ನಿತರಿಲ್ಲ. ಎಲ್ಲರೂ ನಮ್ಮೊಂದಿಗೆ ಇದ್ದಾರೆ. ಸಂಸದ ಸಂಗಣ್ಣ ಕರಡಿ ಅವರು ಪ್ರಚಾರಕ್ಕೆ ಬರುತ್ತಿದ್ದಾರೆ. ಹಿರಿಯ ನಾಯಕರ ಮಾರ್ಗದರ್ಶನ, ಸಲಹೆ ಪಡೆದು ಮುನ್ನಡೆಯುತ್ತಿದ್ದೇನೆ. ಎಲ್ಲರ ಸಹಕಾರವೂ ನನಗಿದೆ.

– ದತ್ತು ಕಮ್ಮಾರ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.